![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 23, 2022, 10:26 PM IST
ಕಾಪು : ಹೆದ್ದಾರಿ ಹೊಂಡ ತಪ್ಪಿಸುವ ಭರದಲ್ಲಿ ಕಾರು ಡಿವೈಡರ್ ಮೇಲೇರಿ ನಜ್ಜುಗುಜ್ಜಾದ ಘಟನೆ ಪೊಲಿಪು ಕ್ರಾಸ್ ಬಳಿ ಜು. 23ರಂದು ಬೆಳಗ್ಗೆ ನಡೆದಿದೆ.
ಅಪಘಾತದಲ್ಲಿ ಡಿವೈಡರ್ ಮೇಲಿದ್ದ ವಿದ್ಯುತ್ ಕಂಬ ಉರುಳಿ ಬಿದ್ದಿದ್ದು ಕಾರು ಕೂಡಾ ಸಂಪೂರ್ಣ ನಜ್ಜುಗುಜ್ಜಾಗಿದೆ.
ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಕಾರನ್ನು ಚಲಾಯಿಸುತ್ತಿದ್ದ ಮಹಿಳಾ ಚಾಲಕಿ ಹೆದ್ದಾರಿ ಹೊಂಡವನ್ನು ತಪ್ಪಿಸುವ ಭರದಲ್ಲಿ ಡಿವೈಡರ್ಗೆ ಬಡಿದಿದ್ದು, ಡಿವೈಡರ್ ಮೇಲಿದ್ದ ವಿದ್ಯುತ್ ಕಂಬಕ್ಕೂ ಕಾರು ಢಿಕ್ಕಿ ಹೊಡೆದಿದೆ.
ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಪಘಾತದ ತೀವ್ರತೆಯಿಂದಾಗಿ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಸ್ಥಳಕ್ಕೆ ಧಾವಿಸಿದ ಕಾಪು ಪೊಲೀಸರು ಹೆದ್ದಾರಿ ಸಂಚಾರ ಸುಗಮಗೊಳಿಸಿದ್ದು, ಡಿವೈಡರ್ ಮೇಲಿದ್ದ ಕಾರನ್ನು ತೆರವುಗೊಳಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.