ಒಂಟಿ ಮಹಿಳೆಯಿದ್ದ ಮನೆಗೆ ಅಕ್ರಮ ಪ್ರವೇಶ, ಅತ್ಯಾಚಾರ ಯತ್ನ ದೂರು


Team Udayavani, Jul 7, 2017, 3:10 AM IST

Crime-Symbolic-600.jpg

ಸಿದ್ದಾಪುರ: ಆವರ್ಸೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಂಡಾÕಲೆ ಸಮೀಪದ ಒಂಟಿಯಾಗಿ ವಾಸಿಸುತ್ತಿದ್ದ 31 ವರ್ಷದ ವಿವಾಹಿತ ಮಹಿಳೆಯ ಮೇಲೆ ನೆರೆಮನೆಯ ಚಂದ್ರ ನಾಯ್ಕ ಅತ್ಯಾಚಾರಕ್ಕೆ ಯತ್ನಿಸಿದ್ದು , ಈ ಬಗ್ಗೆ  ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದರೂ ಅವರು ಸರಿಯಾದ ಕಾನೂನು ಕ್ರಮ ಕೈಗೊಳ್ಳದೇ ಇರುವುದರಿಂದ ನೊಂದ ಮಹಿಳೆ ಚಂದ್ರನಾಯ್ಕನ ವಿರುದ್ಧ ಜು. 6ರಂದು ಮರು ದೂರು ದಾಖಲಿಸಿದ್ದಾರೆ.

ಘಟನೆ ವಿವರ
ಆವರ್ಸೆ ಸಮೀಪ ವಾಸಿಸುತ್ತಿದ್ದ ಮಹಿಳೆಗೆ 8 ವರ್ಷಗಳ ಹಿಂದೆ  ಧಾರವಾಡ ಭಾಗದಿಂದ ದುಡಿಯಲು ಬಂದ ಕಾರ್ಮಿಕ ಯುವಕನೊಂದಿಗೆ ಶಂಕರನಾರಾಯಣದಲ್ಲಿ ಮದುವೆಯಾಗಿತ್ತು. ಒಂದು ವರ್ಷದ ಅನಂತರ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗು ಜನಿಸಿದ 2 ತಿಂಗಳಲ್ಲಿ ಮಗುವಿನ ತಂದೆ ಯಾರಿಗೂ ಹೇಳದೇ ನಾಪತ್ತೆಯಾಗಿದ್ದನು. ಬೀಡಿ ಕಟ್ಟಿ ಜೀವನ ನಡೆಸುತ್ತಿದ್ದ ಈಕೆ ಗಂಡ ನಾಪತ್ತೆಯಾದ ಬಳಿಕ ದಿಕ್ಕು ಕಾಣದೇ ಮಾನಸಿಕವಾಗಿ ಕುಗ್ಗಿಹೋಗಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಸ್ಥಳೀಯರು ಆಕೆಯನ್ನು ಉಡುಪಿಯ ವಿಶ್ವಾಸದ ಮನೆಗೆ ಸೇರಿಸಿದ್ದು, ಅನಂತರ ಗುಣಮುಖಳಾಗಿದ್ದರು. ಆಕೆ  ಕಳೆದ ಕೆಲವು ತಿಂಗಳುಗಳಿಂದ ಮನೆ ಸಮೀಪದ ಗೇರು ಬೀಜ ಕಾರ್ಖಾನೆಯಲ್ಲಿ ದುಡಿದು, ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು.

ಆಕೆಯ ಚಲನವಲನಗಳನ್ನು ತಿಳಿದುಕೊಂಡಿದ್ದ ನೆರೆ ಮನೆಯ ನಿವಾಸಿ  ಕಂಬರಕೊಳ್ಕೆ ಹಾಡಿ ಮನೆಯ ವಿವಾಹಿತ, ಪತ್ನಿ ಹಾಗೂ ಎರಡು ಮಕ್ಕಳ ತಂದೆಯಾಗಿರುವ ಚಂದ್ರನಾಯ್ಕ (35) ಕಳೆದ ರವಿವಾರ ರಾತ್ರಿ 11 ಗಂಟೆಗೆ ಆಕೆಯ ಮನೆಗೆ ಕುಡಿದು ಬಂದು ಬಾಗಿಲು ತೆರೆಯುವಂತೆ ಒತ್ತಾಯಿಸಿದ್ದಾನೆ. ಆಕೆ ಬಾಗಿಲು ತೆರೆಯಲು ನಿರಾಕರಿಸಿದಾಗ ಆತ ಬಾಗಿಲನ್ನು ಒಡೆದು ಹಾಕಿ ಒಳ ಪ್ರವೇಶಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಹೆದರಿದ ಆಕೆ ಕೂಗಿಕೊಂಡು ಹಿಂಬಾಗಿಲನ್ನು ತೆರೆದು ನೆರೆ ಮನೆಗೆ ಓಡಿ ಹೋಗಿ ಆಶ್ರಯ ಪಡೆದಿದ್ದಾಳೆ. ಆರೋಪಿಯು ಆಕೆ ವಾಪಸ್ಸು ಮನೆಗೆ ಮರಳಿ ಬರಬಹುದೆಂದು ನಿರೀಕ್ಷೆಯಲ್ಲಿ ಆಕೆಯ ಮನೆಯಲ್ಲಿ ರಾತ್ರಿ ಪೂರ್ತಿ ಕಳೆದು ಆಕೆ ಬಾರದಿರುವ ಹಿನ್ನೆಲೆಯಲ್ಲಿ ಮನೆಯಲ್ಲಿದ್ದ ಸೊತ್ತುಗಳನ್ನು ಚೆಲ್ಲಾ ಪಿಲ್ಲಿಯಾಗಿ ಎಸೆದು ಹಾಳು ಮಾಡಿದ್ದಾನೆ. ಈತನ ಮೇಲೆ ಈಗಾಗಲೇ  ಎರಡು ಪೊಲೀಸ್‌ ದೂರುಗಳಿವೆ.

ಜು. 2ರ ರಾತ್ರಿ ಚಂದ್ರ ನಾಯ್ಕ ಆಕ್ರಮವಾಗಿ ಮನೆ ಪ್ರವೇಶಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಮರುದಿನ ಸ್ಥಳೀಯರ ಸಹಕಾರದಿಂದ ಶಂಕರ ನಾರಾಯಣ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದರು. ವಿಚಾರಣೆ ನಡೆಸಿದ ಪೊಲೀಸರು ಆರೋಪಿಯನ್ನು ಜು. 4ರಂದು ಮನೆಗೆ ಕಳುಹಿಸಿದ್ದರು. ದೂರಿನ ಕುರಿತು ಠಾಣೆಯಲ್ಲಿ ಪೊಲೀಸರು ಆರೋಪಿಯನ್ನು ಸಮಪರ್ಕವಾಗಿ ವಿಚಾರಣೆ ನಡೆಸಿರುವುದಿಲ್ಲವೆಂದು ಅಸಮಾಧಾನಗೊಂಡ ನೊಂದ ಮಹಿಳೆ ಸ್ಥಳೀಯರ ಹಾಗೂ ಸಂಬಂಧಿಕರ ಸಹಕಾರದೊಂದಿಗೆ ಚಂದ್ರ ನಾಯ್ಕ ವಿರುದ್ಧ ಜು. 6ರಂದು ಮರು ದೂರು ನೀಡಿರುತ್ತಾರೆೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.