PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

ಜೂ.26ರಂದು ಆದೇಶ, ಜು.1 ರ ವರೆಗೆ ಅವಕಾಶ‌; ಹಣಪಾವತಿಗೆ ಇಂದೇ ಕೊನೆ ದಿನ

Team Udayavani, Jun 29, 2024, 7:45 AM IST

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

ಕುಂದಾಪುರ: ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲು ಬಿಮಾ ಯೋಜನೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಅಡಿಕೆ ಬೆಳೆ, ಕಾಳುಮೆಣಸು ಬೆಳೆಗೆ ವಿಮೆ ನೋಂದಣಿಗೆ ಕೇವಲ ನಾಲ್ಕೇ ದಿನಗಳು ಇರುವಾಗ ಪ್ರಕಟಣೆ ಹೊರಡಿಸಲಾಗಿದ್ದು, ಬೆಳೆಗಾರರು ನೋಂದಣಿ ಮಾಡಲು ಇಂದೇ ಕೊನೆ ದಿನ. ದಕ್ಷಿಣ ಕನ್ನಡ ಜಿಲ್ಲೆಗೆ ಜು.31 ರವರೆಗೆ ಅವಕಾಶವಿದೆ. ಆದರೆ ಉಡುಪಿ, ಹಾಸನ, ತುಮಕೂರು, ದಾವಣಗೆರೆ ಹಾಗೂ ವಿಜಯಪುರದ ಪ್ರಾದೇಶಿಕ ಬೆಳೆಗಳಿಗೆ ಜೂ.30 ಗಡುವು ವಿಧಿಸಿ ರುವುದು ರೈತರಿಗೆ ಸಮಸ್ಯೆಯಾಗಿದೆ.

ನೋಂದಣಿಗೆ ಪ್ರತಿ ವರ್ಷ 1 ತಿಂಗಳ ಕಾಲಾ ವಧಿ ಇರುತ್ತದೆ. ಆಗ ಕಂತಿನ ಹಣ ತುಂಬಲು 15-30 ದಿನಗಳು ಲಭಿಸುತ್ತವೆ. ಕಳೆದ ವರ್ಷ ಪಹಣಿಯಲ್ಲಿ ಬೆಳೆ ನಮೂದನ್ನು ಕಡ್ಡಾಯ ಗೊಳಿಸಿದ್ದರ ಕಾರಣ ಅನೇಕ ರೈತರು ಈ ಯೋಜನೆಯಿಂದ ವಂಚಿತರಾಗಿದ್ದರು. ಈ ವರ್ಷ ನೋಂದಣಿ ಅವಧಿ 4 ದಿನಗಳಾಗಿದ್ದು, ನೋಂದಣಿ ಹಾಗೂ ಹಣ ಪಾವತಿ ಕಷ್ಟ. ಜೂ.26 ರಂದು ಆದೇಶವಾಗಿದ್ದು, ಜು.1 ಕೊನೆ ದಿನ. ಇದರಲ್ಲಿ ಕಚೇರಿ ನಿರ್ವಹಿಸುವುದು ಮೂರೇ ದಿನ. ಉಡುಪಿ,ದಕ್ಷಿಣ ಕನ್ನಡ ಜಿಲ್ಲೆಗೆ ವಿಮೆ ಕಂಪೆನಿ ಬೇರೆಯಾಗಿರುವುದು ಸಮಸ್ಯೆಗೆ ಕಾರಣ.

ಸುಲಭವಲ್ಲ ಕಂತು ಪಾವತಿ
ಪಹಣಿಯಲ್ಲಿ ಹಾಗೂ ಬೆಳೆ ಸಮೀಕ್ಷೆಯಲ್ಲಿ ಅಡಿಕೆ, ಕಾಳುಮೆಣಸು ನಮೂದಾಗಿರಬೇಕು. ಬೆಳೆ ವಿಸ್ತೀರ್ಣಕ್ಕೆ ಅನುಗುಣವಾಗಿ ವಿಮೆ ಮೊತ್ತ ಪಾವತಿಸಬೇಕು. ಬ್ಯಾಂಕ್‌ ಮತ್ತು ಡಿಜಿಟಲ್‌ ಇ-ಸೇವಾ ಕೇಂದ್ರಗಳಿಗೆ ಹೋಗಬೇಕು. ವಿಮೆ ಮಾಡಿಸುವಾಗ ಫ್ರುಟ್‌ ತಂತ್ರಾಂಶದ ನೋಂದಣಿ ಸಂಖ್ಯೆ ಹೊಂದಿರಬೇಕು. ಆ ಸಂಖ್ಯೆಗೆ ಪಹಣಿ ವಿವರ ಜೋಡಿಸಿರಬೇಕು. ಆಧಾರ್‌ ಮಾಹಿತಿ, ಬೆಳೆ ಸಾಲ ಹೊಂದಿಲ್ಲದ ರೈತರು ಆಧಾರ್‌ ಮಾಹಿತಿ ಜತೆ ಪಹಣಿ ಪ್ರತಿ, ಉಳಿತಾಯ ಖಾತೆ ಮಾಹಿತಿ ದಾಖಲೆ ಗಳು, ಸ್ವಯಂಘೋಷಣೆ ನಮೂನೆ ಗಳನ್ನು ಪ್ರೀಮಿಯಂ ಮೊತ್ತದೊಂದಿಗೆ ಹಣಕಾಸು ಸಂಸ್ಥೆಗಳಿಗೆ ಸಲ್ಲಿಸಿ ನೋಂದಣಿ ಮಾಡಿಸಬೇಕು. ಯೋಜನೆಯಲ್ಲಿ ಭಾಗಿ ಯಾಗಲು ಇಚ್ಛಿಸದಿದ್ದರೆ ಬೆಳೆ ಸಾಲ ಪಡೆದ ಸಂಸ್ಥೆಗೆ ವಾರದೊಳಗೆ ಮುಚ್ಚಳಿಕೆ ಪತ್ರ ನೀಡಬೇಕು. ಹೆಬ್ರಿ ತಾಲೂಕಿನಲ್ಲಿ ತಂತ್ರಾಂಶ ಕೈಕೊಟ್ಟ ಕಾರಣ ಶುಕ್ರವಾರವೂ ನೋಂದಣಿಗೆ ಸಮಸ್ಯೆಯಾಗಿದೆ.

ಅಡಿಕೆಗೆ ಪ್ರತಿ ಹೆಕ್ಟೇರ್‌ಗೆ 1.28 ಲಕ್ಷ ರೂ. ವಿಮೆಗೆ ರೈತರು 6,400 ರೂ., ಕಾಳು ಮೆಣಸಿಗೆ 47 ಸಾವಿರ ರೂ. ವಿಮೆಗೆ 2,350 ರೂ. ಪಾವತಿಸಬೇಕು.

ತೊಡಕುಗಳು
2023-24ನೇ ಸಾಲಿನಲ್ಲಿ ಅಡಿಕೆ ಮತ್ತು ಕಾಳುಮೆಣಸಿಗೆ ಜು.1 ರಿಂದ ಈ ವರ್ಷದ ಜೂನ್‌ ಅಂತ್ಯದ ತನಕದ ಹಾನಿಯ ಅವಧಿ ಇದ್ದುದನ್ನು ಅಡಿಕೆಗೆ ದ.ಕ. ಜಿಲ್ಲಾ ವ್ಯಾಪ್ತಿಗೆ 2 ತಿಂಗಳ ಅವಧಿಯನ್ನೇ ಕಡಿತಗೊಳಿಸಲಾಗಿತ್ತು. ಅದಕ್ಕೂ ಮುನ್ನ 12 ತಿಂಗಳ ಅವಧಿಯಿತ್ತು. ಆದರೆ ಕಂತು ಹಿಂದಿನ ವರ್ಷಗಳಷ್ಟೇ ಸ್ವೀಕರಿಸಲಾಗಿತ್ತು. 2023 ಆ.1ರಿಂದ 2024ರ ಮೇ ಅಂತ್ಯ ದವರೆಗೆ ಮಾತ್ರ ಹಾನಿಯ ಸಮಯ (ರಿಸ್ಕ್ ಪೀರಿಯಡ್‌) ನಿಗದಿಯಾಗಿತ್ತು. ಕಳೆದ ವರ್ಷ ಜುಲೈ ಮತ್ತು ಈ ವರ್ಷದ ಜೂನ್‌ನಲ್ಲಿ ಹಾನಿ ಸಂಭವಿಸಿದ್ದರೆ ಪರಿಹಾರ ಇಲ್ಲ. ಈ ವರ್ಷವೂ ಆ.1ರಿಂದ ವಿಮೆ ವ್ಯವಸ್ಥೆ ಜಾರಿಯಾಗಲಿದೆ. 2024ರ ಜೂನ್‌ ಮತ್ತು ಜುಲೈಯಲ್ಲಿ ಹಾನಿಯಾಗಿದ್ದಲ್ಲಿ ಪರಿಹಾರ ಪಡೆಯುವ ಅರ್ಹತೆ ಕಳೆದುಕೊಳ್ಳುತ್ತದೆ.

ದ.ಕ. ಜಿಲ್ಲೆಯ ಬಿರುಬೇಸಗೆಯ ತಾಪ ದಿಂದ ಬಸವಳಿದ ಅಡಿಕೆಯ ಎಳೆನಳ್ಳಿಗಳು ಜೂನ್‌ನಲ್ಲಾಗುವ ಸಣ್ಣ ಸಣ್ಣ ಮಳೆಯ ಕಾರಣ ದಿಂದ ಮರದಿಂದ ಕೆಳಗೆ ಬಿದ್ದು ಫಸಲಿಗೆ ಹಾನಿ ಉಂಟಾಗುತ್ತದೆ. ಈ ಹಾನಿಗೆ ವಿಮೆ ಪ್ರಯೋಜನ ದೊರಕದಂತೆ ವಿಮಾ ಅವಧಿ 10 ತಿಂಗಳಿಗೆ ಕಡಿತಗೊಳಿಸಿದ್ದನ್ನು ಸರಿಪಡಿಸಬೇಕಿದೆ.

ಕಾಸರಗೋಡಿನಲ್ಲಿ ರೈತರ ಎಲ್ಲ ಕೃಷಿಗೂ ವಿಮೆ ಇದೆ. ದ.ಕ.ದಲ್ಲಿ ಕೇವಲ ಭತ್ತ, ಅಡಿಕೆ, ಕರಿಮೆ ಣಸಿಗೆ ಮಾತ್ರ ಈ ಸೌಲಭ್ಯ. ಗೇರು, ರಬ್ಬರ್‌, ಕೊಕ್ಕೋ ಬೆಳೆಗಳನ್ನೂ ವಿಮೆ ವ್ಯಾಪ್ತಿಗೆ ತರಬೇಕಿದೆ ಎನ್ನುತ್ತಾರೆ ಕೃಷಿಕ ಎಲ್‌. ಬಿ.ಪೆರ್ನಾಜೆ ಕಾವು.

ಗಮನಕ್ಕೆ ತರಲಾಗಿದೆ
ಪ್ರತಿವರ್ಷ ಜೂ.1ರಿಂದ 30ರ ವರೆಗೆ ವಿಮೆ ನೋಂದಣಿಗೆ ಕಾಲಾವಕಾಶ ನೀಡಲಾಗುತ್ತದೆ. ಈ ಬಾರಿ ಕಡಿಮೆ ದಿನ ನಿಗದಿಯಾದ ಕಾರಣ 15 ದಿನ ವಿಸ್ತರಣೆ ಕೋರಿ ತೋಟಗಾರಿಕೆ ಜಂಟಿ ನಿರ್ದೇಶಕರಿಗೆ ಪತ್ರ ಬರೆಯಲಾಗಿದೆ.
-ಭುವನೇಶ್ವರಿ, ತೋಟಗಾರಿಕೆ
ಉಪನಿರ್ದೇಶಕಿ, ಉಡುಪಿ

-ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

6

Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್‌ ಡಿಕ್ಕಿ: ದುರ್ಮರಣ

4

ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.