Udupi; ಕೋಟ್ಯಂತರ ರೂ. ವಂಚಕರ ಪಾಲು; ಆತ್ರಾಡಿ ಮೂಲದ ವೈದ್ಯ ವರ್ಚುವಲ್‌ನಲ್ಲೇ ಅರೆಸ್ಟ್‌ !


Team Udayavani, Aug 14, 2024, 6:55 AM IST

Udupi; ಕೋಟ್ಯಂತರ ರೂ. ವಂಚಕರ ಪಾಲು; ಆತ್ರಾಡಿ ಮೂಲದ ವೈದ್ಯ ವರ್ಚುವಲ್‌ನಲ್ಲೇ ಅರೆಸ್ಟ್‌ !

ಉಡುಪಿ: ವರ್ಚುವಲ್‌ ಅರೆಸ್ಟ್‌ ಮಾಡಿ ಗೃಹಬಂಧನ ವಿಧಿಸಿ ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ಆತ್ರಾಡಿ ನಿವಾಸಿ ಡಾ| ಅರುಣ್‌ ಕುಮಾರ್‌ (53) ಅವರಿಗೆ ಆನ್‌ಲೈನ್‌ ವಂಚಕರು ಕೋಟ್ಯಂತರ ರೂ. ವಂಚಿಸಿದ ಘಟನೆ ನಡೆದಿದೆ.

ನೇಪಾಲದ ಕಾಠ್ಮಂಡುವಿನಲ್ಲಿ ವಾಸವಿ ರುವ ಡಾ| ಅರುಣ್‌ ಕುಮಾರ್‌ ಅವರು ಈ ಹಿಂದೆ ಮಣಿಪಾಲದ ಆಸ್ಪತ್ರೆಯಲ್ಲಿಯೂ ನಾಲ್ಕು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದರು. ಕಾಠ್ಮಂಡುವಿನಿಂದ ಜುಲೈ 29ಕ್ಕೆ ಆತ್ರಾಡಿಯ ಮನೆಗೆ ಆಗಮಿಸಿದ್ದರು. ಈ ವೇಳೆ ಅವರಿಗೆ ವಂಚಕರು ಕರೆ ಮಾಡಿ ಡಿಜಿಟಲ್‌ ಗೃಹಬಂಧನ ವಿಧಿಸಿದ್ದಾರೆ.

ಘಟನೆ ವಿವರ
ಜು. 29ರಂದು +919232037584 ಸಂಖ್ಯೆಯಿಂದ ಯಾರೋ ಅಪರಿಚಿತರು ಕರೆ ಮಾಡಿ ಕಸ್ಟಮ್ಸ್‌ನಿಂದ ಕರೆ ಮಾಡುವುದಾಗಿ ತಿಳಿಸಿ ನಿಮ್ಮ ಆಧಾರ್‌ ನಂಬರ್‌ ಬಳಸಿ ಬುಕ್‌ ಆಗಿರುವ ಫೆಡ್‌ಎಕ್ಸ್‌ ಕೊರಿಯರ್‌ನಲ್ಲಿ 5 ಪಾಸ್‌ಪೋರ್ಟ್‌, 5 ಎಟಿಎಂ ಕಾರ್ಡ್‌, 200 ಗ್ರಾಂ ಎಂಡಿಎಂಎ ಹಾಗೂ 5000 ಯುಎಸ್‌ಡಿ ಇದ್ದು ಈ ಕೊರಿಯರ್‌ ಪ್ರಸ್ತುತ ಮುಂಬಯಿ ಕಸ್ಟಮ್ಸ್‌ ಅವರ ವಶದಲ್ಲಿರುವುದಾಗಿ ತಿಳಿಸಿದ್ದಾರೆ.

ಈ ವೇಳೆ ಅರುಣ್‌ ಅವರು ಕೋರಿಯರ್‌ ಮಾಡಿಲ್ಲ ಎಂದು ತಿಳಿಸಿದಾಗ ಅಪರಿಚಿತ ವ್ಯಕ್ತಿ ಆತನ ಮೇಲಾಧಿಕಾರಿಯವರಿಗೆ ಹಾಟ್‌ಲೆçನ್‌ ಮೂಲಕ ಸಂಪರ್ಕ ಕಲ್ಪಿಸಿಕೊಟ್ಟಿದ್ದು, ಆ ವ್ಯಕ್ತಿ ತಾನು ಪೊಲೀಸ್‌ ಅಧಿಕಾರಿ ಎಂದು ನಂಬಿಸಿ “ನಿಮ್ಮ ಆಧಾರ್‌ ನ ದುರ್ಬಳಕೆಯ ಬಗ್ಗೆ ದೂರು ಸ್ವೀಕರಿಸಲಾಗಿದೆ ಎಂದು ತಿಳಿಸಿ ನಮ್ಮ ಕೇಂದ್ರ ಕಚೇರಿಗೆ ಕರೆಯನ್ನು ಫಾರ್ವಡ್‌ ಮಾಡುವುದಾಗಿ ಹೇಳಿದ್ದ. ಅನಂತರದಲ್ಲಿ ಕರೆ ಸ್ವೀಕರಿಸಿದ ವ್ಯಕ್ತಿ ನಿಮ್ಮ ಆಧಾರ್‌ ವಿವಿಧ ಬ್ಯಾಂಕ್‌ ಖಾತೆಗಳಿಗೆ ಲಿಂಕ್‌ ಆಗಿದೆ.

ಭಯೋತ್ಪಾದಕರು ಸಿಮ್‌ ಖರೀದಿಸಲು ಬಳಸಿದ್ದಾರೆ ಎಂದಿದ್ದ. ಆತ, ನಿಮ್ಮನ್ನು ವರ್ಚುವಲ್‌ ಆರೆಸ್ಟ್‌ ಮಾಡುವುದಾಗಿ ತಿಳಿಸಿದ್ದು ಸ್ಕೈಪೇ ಆ್ಯಪ್‌ ಮೂಲಕ ವೀಡಿಯೋ ಮಾನಿಟರಿಂಗ್‌ ಮಾಡುವುದಾಗಿ ಹೇಳಿದ್ದಾನೆ.

ಏನಿದು ವರ್ಚುವಲ್‌ ಅರೆಸ್ಟ್‌?
ವೈದ್ಯರನ್ನು ಆರೋಪಿಗಳು ಜು. 29ರಿಂದ ಆ. 9ರ ವರೆಗೆ ಅವರದೇ ಮನೆಯ ಕೊಠಡಿಯಲ್ಲಿ ಗೃಹಬಂಧನಕ್ಕೆ ಒಳಪಡಿಸಿದ್ದಾರೆ! ಅಷ್ಟೂ ದಿನ ಮನೆಯ ರೂಮ್‌ ಒಂದರಲ್ಲಿ ಇರುವಂತೆ ಹಾಗೂ ಬೇರೆಯವರೊಂದಿಗೆ ಸಂಪರ್ಕಿಸದಂತೆ ಸೂಚಿಸಿದ್ದ ಆರೋಪಿಗಳು ವಾಶ್‌ರೂಂಗೆ ಹೋಗುವಾಗಲೂ ಮೊಬೈಲ್‌ ಆನ್‌ ಇಟ್ಟು ಕ್ಷಣಾರ್ಧದಲ್ಲಿ ಬರುವಂತೆ ಸೂಚಿಸಿದ್ದರು. ಜತೆಗೆ ಮೊಬೈಲ್‌ ಅನ್ನು ಯಾವುದೇ ಕಾರಣಕ್ಕೂ ಆಫ್ ಮಾಡದಂತೆ ಎಚ್ಚರಿಕೆಯನ್ನೂ ನೀಡಿದ್ದರು. ವೈದ್ಯರು ಯಾವುದೋ ಕೆಲಸದಲ್ಲಿ ಇರಬಹುದು ಎಂದುಕೊಂಡು ಮನೆಮಂದಿ ಅನ್ನ-ಆಹಾರವನ್ನು ಕೊಠಡಿಯೊಳಗೆ ನೀಡಿ ಹೋಗುತ್ತಿದ್ದರು. ಬಳಿಕ ಅಪರಿಚಿತರು ಸೂಚಿಸಿದ ವಿವಿಧ ಬ್ಯಾಂಕ್‌ ಖಾತೆಗಳಿಗೆ ಹಣ ಪಾವತಿಸುವಂತೆ ತಿಳಿಸಿದ್ದು ವೈದ್ಯರು ತನ್ನ ಎಚ್‌.ಡಿ.ಎಫ್.ಸಿ. ಬ್ಯಾಂಕ್‌ ಖಾತೆಯಿಂದ ಆ. 6ರಿಂದ ಆ. 9ರ ವರೆಗೆ ಹಂತ-ಹಂತವಾಗಿ ಒಟ್ಟು 1,33,81,000 ರೂ.ಗಳನ್ನು ಆರೋಪಿಗಳ ಖಾತೆಗೆ ವರ್ಗಾಯಿಸಿದ್ದಾರೆ. ಈ ವೇಳೆ ಆರೋಪಿಗಳು ಈ ಹಣವನ್ನು ಆ. 12ಕ್ಕೆ ನಿಮ್ಮ ಅಕೌಂಟ್‌ಗೆ ಜಮೆ ಮಾಡಲಾಗುವುದು ಎಂದು ತಿಳಿಸಿದ್ದು, ಇದುವರೆಗೂ ಹಣ ಜಮೆಯಾಗಿಲ್ಲ. ಇದರಿಂದ ವಂಚನೆ ಅರಿವಿಗೆ ಬಂದ ವೈದರು ಸೆನ್‌ ಠಾಣೆಗೆ ದೂರು ನೀಡಿದ್ದಾರೆ. ಪ್ರಸ್ತುತ ವೈದ್ಯರು ನೇಪಾಲಕ್ಕೆ ತೆರಳಿದ್ದು, ಪೊಲೀಸರು ಮತ್ತಷ್ಟು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.