Udupi; ಕೋಟ್ಯಂತರ ರೂ. ವಂಚಕರ ಪಾಲು; ಆತ್ರಾಡಿ ಮೂಲದ ವೈದ್ಯ ವರ್ಚುವಲ್‌ನಲ್ಲೇ ಅರೆಸ್ಟ್‌ !


Team Udayavani, Aug 14, 2024, 6:55 AM IST

Udupi; ಕೋಟ್ಯಂತರ ರೂ. ವಂಚಕರ ಪಾಲು; ಆತ್ರಾಡಿ ಮೂಲದ ವೈದ್ಯ ವರ್ಚುವಲ್‌ನಲ್ಲೇ ಅರೆಸ್ಟ್‌ !

ಉಡುಪಿ: ವರ್ಚುವಲ್‌ ಅರೆಸ್ಟ್‌ ಮಾಡಿ ಗೃಹಬಂಧನ ವಿಧಿಸಿ ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ಆತ್ರಾಡಿ ನಿವಾಸಿ ಡಾ| ಅರುಣ್‌ ಕುಮಾರ್‌ (53) ಅವರಿಗೆ ಆನ್‌ಲೈನ್‌ ವಂಚಕರು ಕೋಟ್ಯಂತರ ರೂ. ವಂಚಿಸಿದ ಘಟನೆ ನಡೆದಿದೆ.

ನೇಪಾಲದ ಕಾಠ್ಮಂಡುವಿನಲ್ಲಿ ವಾಸವಿ ರುವ ಡಾ| ಅರುಣ್‌ ಕುಮಾರ್‌ ಅವರು ಈ ಹಿಂದೆ ಮಣಿಪಾಲದ ಆಸ್ಪತ್ರೆಯಲ್ಲಿಯೂ ನಾಲ್ಕು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದರು. ಕಾಠ್ಮಂಡುವಿನಿಂದ ಜುಲೈ 29ಕ್ಕೆ ಆತ್ರಾಡಿಯ ಮನೆಗೆ ಆಗಮಿಸಿದ್ದರು. ಈ ವೇಳೆ ಅವರಿಗೆ ವಂಚಕರು ಕರೆ ಮಾಡಿ ಡಿಜಿಟಲ್‌ ಗೃಹಬಂಧನ ವಿಧಿಸಿದ್ದಾರೆ.

ಘಟನೆ ವಿವರ
ಜು. 29ರಂದು +919232037584 ಸಂಖ್ಯೆಯಿಂದ ಯಾರೋ ಅಪರಿಚಿತರು ಕರೆ ಮಾಡಿ ಕಸ್ಟಮ್ಸ್‌ನಿಂದ ಕರೆ ಮಾಡುವುದಾಗಿ ತಿಳಿಸಿ ನಿಮ್ಮ ಆಧಾರ್‌ ನಂಬರ್‌ ಬಳಸಿ ಬುಕ್‌ ಆಗಿರುವ ಫೆಡ್‌ಎಕ್ಸ್‌ ಕೊರಿಯರ್‌ನಲ್ಲಿ 5 ಪಾಸ್‌ಪೋರ್ಟ್‌, 5 ಎಟಿಎಂ ಕಾರ್ಡ್‌, 200 ಗ್ರಾಂ ಎಂಡಿಎಂಎ ಹಾಗೂ 5000 ಯುಎಸ್‌ಡಿ ಇದ್ದು ಈ ಕೊರಿಯರ್‌ ಪ್ರಸ್ತುತ ಮುಂಬಯಿ ಕಸ್ಟಮ್ಸ್‌ ಅವರ ವಶದಲ್ಲಿರುವುದಾಗಿ ತಿಳಿಸಿದ್ದಾರೆ.

ಈ ವೇಳೆ ಅರುಣ್‌ ಅವರು ಕೋರಿಯರ್‌ ಮಾಡಿಲ್ಲ ಎಂದು ತಿಳಿಸಿದಾಗ ಅಪರಿಚಿತ ವ್ಯಕ್ತಿ ಆತನ ಮೇಲಾಧಿಕಾರಿಯವರಿಗೆ ಹಾಟ್‌ಲೆçನ್‌ ಮೂಲಕ ಸಂಪರ್ಕ ಕಲ್ಪಿಸಿಕೊಟ್ಟಿದ್ದು, ಆ ವ್ಯಕ್ತಿ ತಾನು ಪೊಲೀಸ್‌ ಅಧಿಕಾರಿ ಎಂದು ನಂಬಿಸಿ “ನಿಮ್ಮ ಆಧಾರ್‌ ನ ದುರ್ಬಳಕೆಯ ಬಗ್ಗೆ ದೂರು ಸ್ವೀಕರಿಸಲಾಗಿದೆ ಎಂದು ತಿಳಿಸಿ ನಮ್ಮ ಕೇಂದ್ರ ಕಚೇರಿಗೆ ಕರೆಯನ್ನು ಫಾರ್ವಡ್‌ ಮಾಡುವುದಾಗಿ ಹೇಳಿದ್ದ. ಅನಂತರದಲ್ಲಿ ಕರೆ ಸ್ವೀಕರಿಸಿದ ವ್ಯಕ್ತಿ ನಿಮ್ಮ ಆಧಾರ್‌ ವಿವಿಧ ಬ್ಯಾಂಕ್‌ ಖಾತೆಗಳಿಗೆ ಲಿಂಕ್‌ ಆಗಿದೆ.

ಭಯೋತ್ಪಾದಕರು ಸಿಮ್‌ ಖರೀದಿಸಲು ಬಳಸಿದ್ದಾರೆ ಎಂದಿದ್ದ. ಆತ, ನಿಮ್ಮನ್ನು ವರ್ಚುವಲ್‌ ಆರೆಸ್ಟ್‌ ಮಾಡುವುದಾಗಿ ತಿಳಿಸಿದ್ದು ಸ್ಕೈಪೇ ಆ್ಯಪ್‌ ಮೂಲಕ ವೀಡಿಯೋ ಮಾನಿಟರಿಂಗ್‌ ಮಾಡುವುದಾಗಿ ಹೇಳಿದ್ದಾನೆ.

ಏನಿದು ವರ್ಚುವಲ್‌ ಅರೆಸ್ಟ್‌?
ವೈದ್ಯರನ್ನು ಆರೋಪಿಗಳು ಜು. 29ರಿಂದ ಆ. 9ರ ವರೆಗೆ ಅವರದೇ ಮನೆಯ ಕೊಠಡಿಯಲ್ಲಿ ಗೃಹಬಂಧನಕ್ಕೆ ಒಳಪಡಿಸಿದ್ದಾರೆ! ಅಷ್ಟೂ ದಿನ ಮನೆಯ ರೂಮ್‌ ಒಂದರಲ್ಲಿ ಇರುವಂತೆ ಹಾಗೂ ಬೇರೆಯವರೊಂದಿಗೆ ಸಂಪರ್ಕಿಸದಂತೆ ಸೂಚಿಸಿದ್ದ ಆರೋಪಿಗಳು ವಾಶ್‌ರೂಂಗೆ ಹೋಗುವಾಗಲೂ ಮೊಬೈಲ್‌ ಆನ್‌ ಇಟ್ಟು ಕ್ಷಣಾರ್ಧದಲ್ಲಿ ಬರುವಂತೆ ಸೂಚಿಸಿದ್ದರು. ಜತೆಗೆ ಮೊಬೈಲ್‌ ಅನ್ನು ಯಾವುದೇ ಕಾರಣಕ್ಕೂ ಆಫ್ ಮಾಡದಂತೆ ಎಚ್ಚರಿಕೆಯನ್ನೂ ನೀಡಿದ್ದರು. ವೈದ್ಯರು ಯಾವುದೋ ಕೆಲಸದಲ್ಲಿ ಇರಬಹುದು ಎಂದುಕೊಂಡು ಮನೆಮಂದಿ ಅನ್ನ-ಆಹಾರವನ್ನು ಕೊಠಡಿಯೊಳಗೆ ನೀಡಿ ಹೋಗುತ್ತಿದ್ದರು. ಬಳಿಕ ಅಪರಿಚಿತರು ಸೂಚಿಸಿದ ವಿವಿಧ ಬ್ಯಾಂಕ್‌ ಖಾತೆಗಳಿಗೆ ಹಣ ಪಾವತಿಸುವಂತೆ ತಿಳಿಸಿದ್ದು ವೈದ್ಯರು ತನ್ನ ಎಚ್‌.ಡಿ.ಎಫ್.ಸಿ. ಬ್ಯಾಂಕ್‌ ಖಾತೆಯಿಂದ ಆ. 6ರಿಂದ ಆ. 9ರ ವರೆಗೆ ಹಂತ-ಹಂತವಾಗಿ ಒಟ್ಟು 1,33,81,000 ರೂ.ಗಳನ್ನು ಆರೋಪಿಗಳ ಖಾತೆಗೆ ವರ್ಗಾಯಿಸಿದ್ದಾರೆ. ಈ ವೇಳೆ ಆರೋಪಿಗಳು ಈ ಹಣವನ್ನು ಆ. 12ಕ್ಕೆ ನಿಮ್ಮ ಅಕೌಂಟ್‌ಗೆ ಜಮೆ ಮಾಡಲಾಗುವುದು ಎಂದು ತಿಳಿಸಿದ್ದು, ಇದುವರೆಗೂ ಹಣ ಜಮೆಯಾಗಿಲ್ಲ. ಇದರಿಂದ ವಂಚನೆ ಅರಿವಿಗೆ ಬಂದ ವೈದರು ಸೆನ್‌ ಠಾಣೆಗೆ ದೂರು ನೀಡಿದ್ದಾರೆ. ಪ್ರಸ್ತುತ ವೈದ್ಯರು ನೇಪಾಲಕ್ಕೆ ತೆರಳಿದ್ದು, ಪೊಲೀಸರು ಮತ್ತಷ್ಟು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.