ಕಬ್ಬಿನಾಲೆ: ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ


Team Udayavani, Mar 21, 2021, 2:50 AM IST

ಕಬ್ಬಿನಾಲೆ: ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಹೆಬ್ರಿ: ಮುದ್ರಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮುದ್ರಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಬ್ಬಿನಾಲೆ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿಲು ನಡೆದ ಸರಕಾರಿ ಅಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಶನಿವಾರ ನಡೆಯಿತು.

ಮುದ್ರಾಡಿ  ಗ್ರಾಮ ಪಂಚಾಯತ್‌ ಕಬ್ಬಿನಾಲೆ ವ್ಯಾಪ್ತಿಯಲ್ಲಿ ಸುಮಾರು 119 ಅರ್ಜಿಗಳು ಬಂದಿದ್ದು ಕಾನೂನಾತ್ಮವಾಗಿ ಇರುವ ಅರ್ಜಿಯ ಸಮಸ್ಯೆಯನ್ನು ಬಗೆಹರಿಸುವಂತೆ ಸ್ಥಳದಲ್ಲೆಯೇ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಇಲಾಖೆ ಯವರು ಮಾಹಿತಿ ನೀಡಿದರು. ಸಂಪಿಗೆ ದರ್ಖಾಸ್ತು ಎಂಬಲ್ಲಿಗೆ ಜಿಲ್ಲಾಧಿಕಾರಿ ಬೇಟಿ ನೀಡಿ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು.

ನೆಟ್‌ವರ್ಕ್‌ ಸಮಸ್ಯೆ ಬಗೆಹರಿಸಿ :  ಕಬ್ಬಿನಾಲೆಯಿಂದ ಮುನಿಯಾಲುವಿಗೆ ಹೋಗುವ ರಸ್ತೆ ಕಿರಿದಾಗಿದ್ದು ಬಸ್‌ ಸಂಚರಿ ಸಲು ಕಷ್ಟವಾಗಿದೆ.ರಸ್ತೆ ವಿಸ್ತರಣೆಗೆ ಈ ಭಾಗ ದಲ್ಲಿ ಮೊಬೆ„ಲ್‌ ನೆಟ್‌ವರ್ಕ್‌  ಸಮಸ್ಯೆ  ಇದ್ದು, ಜಿಯೋ ಸಂಸ್ಥೆಯವರು ಕೇಬಲ್‌,  ವಿದ್ಯುತ್‌  ಕಂಬ ಅಳವಡಿಸಲು ಅರಣ್ಯ ಇಲಾಖೆಯ ಆಕ್ಷೇಪಗಳಿದ್ದು ಇದನ್ನು ಬಗೆಹರಿಸು ವಂತೆ ಸಾರ್ವಜನಿಕರು ಕೋರಿದರು. ಅರಣ್ಯ ಇಲಾಖೆ ಅಧಿಕಾರಿಗಳು ಈ  ಕಾಮಗಾರಿಗಳಿಗೆ ಇಲಾಖೆ ಅಡ್ಡಿಪಡಿಸುತ್ತಿಲ್ಲ ಆದರೆ ಕಾಮಗಾರಿ  ಮಾಡುತ್ತಿರುವ  ಬಗ್ಗೆ ಇಲಾಖೆಗೆ ಮಾಹಿತಿ ನೀಡಿ, ಅನುಮತಿ ಪತ್ರ ಪಡೆಯುವಂತೆ ತಿಳಿಸಿದರು.

ನಾಡ್ಪಾಲಿನಲ್ಲಿ ಗ್ರಾಮ ವಾಸ್ತವ್ಯ ,ಅಹವಾಲು ಸ್ವೀಕಾರ :

ಹೆಬ್ರಿ:  ಕಬ್ಬಿನಾಲೆ ಕಾರ್ಯಕ್ರಮದ ಬಳಿಕ ಜಿಲ್ಲಾಧಿಕಾರಿ ಜಿ.ಜಗದೀಶ್‌ ನಾಡ್ಪಾಲು ಗ್ರಾಮಕ್ಕೆ ತೆರಳಿ ಸೋಮೇಶ್ವರ ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ  ಶಾಲೆಯಲ್ಲಿ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾಧಿಕಾರಿ ರಾತ್ರಿ ಶಾಲೆಯಲ್ಲಿ ನಡೆದ ಸ್ಥಳೀಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ , ಶಾಲೆಯಲ್ಲಿಯೇ ವಾಸ್ತವ್ಯ ಹೂಡಿದರು.

ಈ ಭಾಗದ ನೆಟ್‌ವರ್ಕ್‌ ಸಮಸ್ಯೆ ಕುರಿತಂತೆ ಬಿ.ಎಸ್‌.ಎನ್‌.ಎಲ್‌. ಹಾಗೂ ಖಾಸಗಿ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವುದಾಗಿ ಜಿಲ್ಲಾಧಿಕಾರಿ ಹೇಳಿದರು.

ಕುಚ್ಚಲಕ್ಕಿ ನೀಡಿ :

ಪಡಿತರ ಅಂಗಡಿಯಲ್ಲಿ ಸ್ಥಳೀಯ ಕುಚ್ಚಲಕ್ಕಿ ನೀಡುವ ಕುರಿತಂತೆ ಸಾರ್ವಜನಿಕ ಮನವಿಗೆ ಉತ್ತರಿಸಿದ ಜಿಲ್ಲಾಧಿಕಾರಿ, ಸರಕಾರದ  ಬೆಂಬಲ ಬೆಲೆ ಯೋಜನೆಯಡಿ ತೆರೆಯಲಾಗುವ ಖರೀದಿ ಕೇಂದ್ರಗಳಿಗೆ  ಜಿಲ್ಲೆಯ ರೈತರು ಭತ್ತವನ್ನು ನೀಡಿದರೆ  ಸ್ಥಳೀಯ ಕುಚ್ಚಲಕ್ಕಿ ನೀಡಲು ಸಾಧ್ಯವಾಗಲಿದೆ.  ಆದರೆ ಜಿಲ್ಲೆಯ ರೈತರು ಇದುವರೆಗೆ 1 ಕ್ವಿಂಟಾಲ್‌ ಸಹ ಭತ್ತವನ್ನು ಖರೀದಿ ಕೆಂದ್ರಗಳಿಗೆ ನೀಡಿಲ್ಲ. ಇದರಿಂದ ಸ್ಥಳೀಯ ಕುಚ್ಚಲಕ್ಕಿ ನೀಡಲು ಸಾಧ್ಯವಾಗುತ್ತಿಲ್ಲ ಎಂದರು.

ಕಾಂಪೌಂಡ್‌ ದುರಸ್ತಿ ಇಲ್ಲ  :

ಕೊಂಕಣಾರಬೆಟ್ಟು ಶಾಲೆಯ ಕಾಂಪೌಂಡ್‌ ಕುಸಿದು ಎರಡು ವರ್ಷ ಕಳೆದರೂ ಇನ್ನು ದುರಸ್ತಿಯಾಗಿಲ್ಲ ಎಂಬುದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ ಸಂದರ್ಭದಲ್ಲಿ ಶಾಲೆಗೆ ಭೇಟಿ ನೀಡಿ ಮಾತನಾಡಿ, ಜಿಲ್ಲೆಯ ಎಲ್ಲ ಶಾಲೆ ಅಂಗನವಾಡಿಗಳ ದುರಸ್ತಿಗೆ 2 ಲಕ್ಷ ರೂ. ಪ್ರಾಕೃತಿಕ ವಿಕೋಪ ನಿಧಿಯಡಿ ಬಿಡುಗಡೆಗೊಳಿಸಲಾಗುತ್ತಿದ್ದು, ಕಾಂಪೌಂಡ್‌ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಅಗತ್ಯವಿದ್ದಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಪಿಆರ್‌ಇಡಿ ಎಂಜಿನಿಯರ್‌ಗೆ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಡಿವೈಎಸ್ಪಿ ಜೈಶಂಕರ್‌, ಜಿ.ಪಂ.ಸದಸ್ಯೆ ಜ್ಯೋತಿ ಹರೀಶ್‌, ತಾ.ಪಂ.ಅಧ್ಯಕ್ಷ ರಮೇಶ್‌, ಮುದ್ರಾಡಿ ಗ್ರಾ.ಪಂ.ಅಧ್ಯಕ್ಷ ಮಂಜುನಾಥ್‌ ಹೆಗ್ಡೆ, ನಾಡಾ³ಲು  ಗ್ರಾ.ಪಂ.ಅಧ್ಯಕ್ಷ ದಿನೇಶ್‌ ಹೆಗ್ಡೆ ಉಪಸ್ಥಿತರಿದ್ದರು. ಹೆಬ್ರಿ ತಹಶೀಲ್ದಾರ್‌ ಪುರಂದರ ಕೆ. ಸ್ವಾಗತಿಸಿ, ವಂದಿಸಿದರು.

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.