ಮೊವಾಡಿ ಕೊರಗರ ಕಾಲನಿಗೆ ಡಿಸಿ ಭೇಟಿ
Team Udayavani, May 9, 2017, 11:29 AM IST
ಕುಂದಾಪುರ: ಹೊಸಾಡು ಗ್ರಾಮದ ಮೊವಾಡಿಯ ಕೊರಗರ ಕಾಲನಿಯಲ್ಲಿ ಈಚೆಗೆ ಕೆಲವರು ದಾಳಿ ನಡೆಸಿ ದೌರ್ಜನ್ಯ ನಡೆಸಿದರು ಎನ್ನಲಾದ ಪ್ರಕರಣದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಸೋಮವಾರ ಅಧಿಕಾರಿಗಳ ಜತೆ ಅಲ್ಲಿಗೆ ಭೇಟಿ ನೀಡಿದರು.
ಕುಟುಂಬದ ಸದಸ್ಯರಿಂದ ಅವರು ಘಟನೆ ವಿವರ ಪಡೆದು ಯೋಗಕ್ಷೇಮ ಮತ್ತು ಸಮಸ್ಯೆ ಕುರಿತು ವಿಚಾರಿಸಿದರು. ಅವರೊಂದಿಗೆ ಮಾತನಾಡಿದ ಕುಟುಂಬದ ಮಹಿಳೆ, ಗ್ರಾ.ಪಂ. ಸದಸ್ಯೆ ಶಕುಂತಳಾ ಘಟನೆ ಕಾರಣ ಕುಟುಂಬದ ಮೂವರ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದುಪಡಿಸಬೇಕೆಂದು ಮನವಿ ಮಾಡಿದರಲ್ಲದೆ, ತಮ್ಮ ಮನೆ ನಿವೇಶನದ ಸುತ್ತ ರಕ್ಷಣೆಗಾಗಿ ಆವರಣ, ದಾರಿ ದೀಪ ಸೌಲಭ್ಯ ಕಲ್ಪಿಸಬೇಕೆಂದು ಮನವಿ ಮಾಡಿದರು. ಅದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಸಂಬಂಧಿಸಿದ ಇಲಾಖೆಗಳ ಮೂಲಕ ಸೌಲಭ್ಯ ಒದಗಿಸುವ ಭರವಸೆ ಯಿತ್ತರು.
ಜಿಲ್ಲಾಧಿಕಾರಿ ಜತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಮೇಶ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ಹರೀಶ ಗಾಂವ್ಕರ್, ಎಸ್ಐ ಬಿ. ಸುಬ್ಬಣ್ಣ, ಅಭಿವೃದ್ಧಿ ಅಧಿಕಾರಿ ಪಾರ್ವತಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.