ನಿವೃತ್ತಿಯ ಅಂಚಿನಲ್ಲಿ ಡಿಸಿಗಳ ಮೆಚ್ಚಿನ ಕಾರುಚಾಲಕ

13 ಜಿಲ್ಲಾಧಿಕಾರಿಗಳಿಗೆ ಚಾಲಕರಾಗಿದ್ದ ರುಕ್ಮಯ ನಾಯ್ಕ

Team Udayavani, Mar 28, 2019, 6:30 AM IST

dc-driver

ಉಡುಪಿ: ಜಿಲ್ಲೆಯ 13 ಜಿಲ್ಲಾಧಿಕಾರಿಗಳಿಗೆ ಕಾರು ಚಾಲಕರಾಗಿ ಸೇವೆ ಸಲ್ಲಿಸಿದ ರುಕ್ಮಯ ನಾಯ್ಕ (60) 31 ವರ್ಷಗಳ ಸೇವೆಯ ಬಳಿಕ ಮಾ.30ರಂದು ನಿವೃತ್ತಿಯಾಗಲಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ ಇವರು ಒಂದೇ ಒಂದು ಅಪಘಾತ ಮಾಡಿಲ್ಲ ಎಂಬುವುದು ಇವರ ಹೆಗ್ಗಳಿಕೆ. ಯಾವುದೇ ಜಿಲ್ಲಾಧಿಕಾರಿ ಬಂದರೂ ಅವರಿಗೆ ನೆಚ್ಚಿನ ಚಾಲಕರಾಗಿ ಇವರು ಗುರುತಿಸಿಕೊಂಡಿದ್ದಾರೆ. ಕಾರು ಚಾಲನೆ, ವಾಹನ ನಿರ್ವಹಣೆ, ಚಾಲಕ ವೃತ್ತಿಯಲ್ಲಿ ಇವರು ಬಹಳ ನೈಪುಣ್ಯತೆ ಹೊಂದಿದ್ದಾರೆ.

ಬಡ ಕುಟುಂಬ
ಬಡತನ ಹಿನ್ನಲೆಯಿಂದಲೇ ಚಾಲಕ ವೃತ್ತಿಜೀವನಕ್ಕಿಳಿದ ಇವರು ಓದಿದ್ದು 7ನೇ ತರಗತಿ. 70ರ ದಶಕದಲ್ಲಿ ಮಂಗಳೂರಿನಲ್ಲಿ ಲಾರಿಯಲ್ಲಿ ಕ್ಲೀನರ್‌ ಆಗಿ ವೃತ್ತಿಜೀವನ ಆರಂಭಿಸಿದ್ದರು. ಬಳಿಕ ಲಾರಿ ಚಾಲಕರಾದರು. 1988ರ ಫೆ.20ರಂದು ಇವರು ಸರಕಾರಿ ವಾಹನ ಚಾಲಕರಾಗಿ ಸೇವೆಗೆ ಸೇರಿದ್ದರು.
2001ರಿಂದ ಇವರು ಜಿಲ್ಲಾಧಿಕಾರಿಗಳಿಗೆ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ.

ಜಿಲ್ಲಾಧಿಕಾರಿಗಳಾಗಿದ್ದ ಗೌರವ್‌ ಗುಪ್ತ, ಎಸ್‌.ಆರ್‌.ಉಮಾಶಂಕರ್‌, ಶಾಮ್‌ ಭಟ್‌, ಶಾಂತರಾಜ್‌, ವಿ.ಪೊನ್ನುರಾಜ್‌, ಹೇಮಲತಾ ಪಿ., ಡಾ| ಟಿಎಂ.ರೇಜು, ಡಾ| ಮುದ್ದುಮೋಹನ್‌, ಎಸ್‌.ಎಸ್‌. ಪಟ್ಟಣ ಶೆಟ್ಟಿ, ಡಾ| ವಿಶಾಲ್‌ ಆರ್‌., ಟಿ.ವೆಂಕಟೇಶ್‌, ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರಿಗೆ ಕಾರು ಚಾಲಕರಾಗಿದ್ದರು.

ಮೂಲತಃ ಬೆಳ್ತಂಗಡಿ ಕಣಿಯೂರು ಗ್ರಾಮದವರಾದ ಇವರು ಪ್ರಸ್ತುತ 76ನೇ ಬಡಗಬೆಟ್ಟು ಬೈಲೂರು ಮಹಿಷಮರ್ದಿನಿ ದೇಗುಲದ ಸಮೀಪ ಸ್ವಂತ ಮನೆಯಲ್ಲಿ ನೆಲೆಸಿದ್ದಾರೆ.

ಇವರ ಪತ್ನಿ ವಿಜಯಬಾಯಿ ಅವರು ಆದಿ ಉಡುಪಿ ಅನುದಾನಿತ ಶಾಲೆಯಲ್ಲಿ ಶಿಕ್ಷಕಿ. ಇಬ್ಬರು ಪುತ್ರರು ಇವರಿಗಿದ್ದು, ಹಿರಿಯ ಪುತ್ರ ಕೆ.ಆರ್‌. ಅಜಯ್‌ ಅವರು ಇನ್ಫೋಸಿಸ್‌ನಲ್ಲಿ ಸಾಫ್ಟ್ವೇರ್‌ ಎಂಜಿನಿಯರ್‌ ಆಗಿದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಕಿರಿಯ ಪುತ್ರ ಕೆ.ಆರ್‌.ಅಕ್ಷಯ್‌ ಅವರು ಎಂಜಿಎಂ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.