Padubidri ನೀರು ಪಾಲಾಗಿದ್ದ ಅಭಿಲಾಷ್‌ ಮೃತದೇಹ ಪತ್ತೆ


Team Udayavani, May 14, 2024, 11:17 PM IST

Padubidri ನೀರು ಪಾಲಾಗಿದ್ದ ಅಭಿಲಾಷ್‌ ಮೃತದೇಹ ಪತ್ತೆ

ಪಡುಬಿದ್ರಿ: ಮರುವಾಯಿ ಹೆಕ್ಕಲು ಶಾಂಭವಿ ಹೊಳೆಗಿಳಿದ ಸಂದರ್ಭ ನೀರಿನಲ್ಲಿ ಮುಳುಗುತ್ತಿದ್ದ ಗೆಳೆಯರನ್ನು ರಕ್ಷಿಸಲು ತೆರಳಿ ನೀರು ಪಾಲಾಗಿದ್ದ ಅಭಿಲಾಷ್‌ (24) ಮೃತದೇಹ ಮಂಗಳವಾರ ಸಂಜೆ ಹೆಜಮಾಡಿಕೋಡಿಯ ಬೈತೋಟ ಬಳಿಯ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ.

ಕರಾವಳಿ ಪೊಲೀಸ್‌ ಪಡೆಯ ಸಿಬಂದಿ ರಾಕೇಶ್‌ ಅವರ ಜತೆಗೆ ಚರಣ್‌ ಮತ್ತು ಗುರು ಅವರು ಗಸ್ತಿನಲ್ಲಿದ್ದ ಸಂದರ್ಭ ಸಮುದ್ರದ ಅಲೆಗಳ ಮಧ್ಯೆ ಮೃತದೇಹ ಕಂಡುಬಂದಿದ್ದು ತತ್‌ಕ್ಷಣ ಕಾರ್ಯಪ್ರವರ್ತರಾಗಿ ದಡಕ್ಕೆ ಎಳೆದು ತಂದಿದ್ದಾರೆ. ಬಳಿಕ ಕರಾವಳಿ ಕಾವಲು ಪಡೆ, ಪೊಲೀಸರು ಹಾಗೂ ಅಭಿಲಾಷ್‌ ಕುಟುಂಬಿಕರು ಆಗಮಿಸಿ ಮೃತದೇಹದ ಗುರುತು ಹಿಡಿದಿದ್ದಾರೆ.

ರವಿವಾರ ಬೆಳಗ್ಗೆ 7.30ರ ವೇಳೆಗೆ 10 ಮಂದಿ ಗೆಳೆಯರು ಬಜಪೆಯಿಂದ ಅಗಮಿಸಿ ಮರುವಾಯಿ ಹೆಕ್ಕಲು ಶಾಂಭವಿ ಹೊಳೆಗೆ ಇಳಿದಿದ್ದರು. ಅಳಿವೆ ಬಾಗಿಲಿನಲ್ಲಿ ಇಬ್ಬರು ಗೆಳೆಯರು ಮುಳುಗುತ್ತಿದ್ದಾಗ ಅವರನ್ನು ರಕ್ಷಿಸಲು ಈಜು ತಿಳಿದ ಬಜಪೆ ಅದ್ಯಪಾಡಿಯ ಹಳೇ ವಿಮಾನ ನಿಲ್ದಾಣ ಬಳಿಯ ನಿವಾಸಿ ಅಭಿಲಾಷ್‌ ತೆರಳಿದ್ದರು. ಆದರೆ ಗೆಳೆಯರಿಬ್ಬರನ್ನು ಮೀನುಗಾರಿಕಾ ದೋಣಿಯೊಂದರ ಸಿಬಂದಿ ರಕ್ಷಿಸಿದ್ದು, ಅಭಿಲಾಷ್‌ ನೀರಿನಲ್ಲಿ ಮುಳುಗಿ ಕಾಣೆಯಾಗಿದ್ದರು.

ಸೋಮವಾರದಿಂದ ಘಟನೆ ನಡೆದ ಸ್ಥಳ ಅಳಿವೆ ಬಾಗಿಲಿನಲ್ಲಿ ಈಶ್ವರ್‌ ಮಲ್ಪೆ ಮತ್ತು ರಾಜ್ಯ ವಿಪತ್ತು ಸ್ಪಂದನ ಪಡೆಯವರು ಕರಾವಳಿ ಕಾವಲು ಪಡೆ ಮತ್ತು ಸಾರ್ವಜನಿಕರ ನೆರವಿನೊಂದಿಗೆ ಹುಡುಕಾಟ ನಡೆಸುತ್ತಿದ್ದರು.

ತಿಂಗಳ ಹಿಂದೆ ಅಕ್ಕನ ನಿಶ್ಚಿತಾರ್ಥ
ಬಜಪೆ: ಅದ್ಯಪಾಡಿಯ ಕೂಲಿಕಾರ್ಮಿಕ ದಂಪತಿ ಎಂ.ಎಂ. ರಮೇಶ್‌ ಮತ್ತು ಶಾರದಾ ಅವರ ಮೂವರು ಮಕ್ಕಳಲ್ಲಿ ಅಭಿಲಾಷ್‌ ಮಾತ್ರ ಪುತ್ರನಾಗಿದ್ದು, ಮನೆಯ ಆಧಾರ ಸ್ತಂಭವಾಗಿದ್ದರು. ಅಭಿಲಾಷ್‌ ಅವರ ಅಕ್ಕನ ವಿವಾಹ ನಿಶ್ಚಿತಾರ್ಥ ಒಂದು ತಿಂಗಳ ಹಿಂದೆಯಷ್ಟೇ ನಡೆದಿತ್ತು. ತಂಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಉತ್ತಮ ಕ್ರೀಡಾಪಟು ಆಗಿದ್ದ ಅಭಿಲಾಷ್‌ ಅವರು ವಾಲಿಬಾಲ್‌ ಮತ್ತು ಕ್ರಿಕೆಟ್‌ನಲ್ಲಿ ಗಮನ ಸೆಳೆದಿದ್ದರು. ಮೆಕಾನಿಕ್‌ ವಿಭಾಗದಲ್ಲಿ ಐಟಿಐ ಮುಗಿಸಿದ ಬಳಿಕ ಕಳೆದ ನಾಲ್ಕು ವರ್ಷಗಳಿಂದ ಮಂಗಳೂರಿನಲ್ಲಿ ರೈಲ್ವೇಯಲ್ಲಿ ಗುತ್ತಿಗೆ ನೆಲೆಯಲ್ಲಿ ಉದ್ಯೋಗ ಮಾಡುತ್ತಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.