ಸಮರ್ಪಣಾ ಭಾವದಿಂದ ಅಭಿವೃದ್ಧಿ ಸಾಧ್ಯ : ಚಾರುಕೀರ್ತಿ ಸ್ವಾಮೀಜಿ
Team Udayavani, Mar 16, 2017, 2:41 PM IST
ಕಾರ್ಕಳ: ಸಮರ್ಪಣಾ ಭಾವದಿಂದ ತೊಡಗಿಸಿಕೊಂಡಾಗ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಮೂಡಬಿದಿರೆ ಜೈನಮಠದ ಚಾರುಕೀರ್ತಿ ಪಂಡಿತಾಚಾರ್ಯ ವರ್ಯ ಮಹಾಸ್ವಾಮೀಜಿಯವರು ಹೇಳಿದ್ದಾರೆ.
ಅತಿಶಯ ಕ್ಷೇತ್ರ ನಲ್ಲೂರು ಬಸದಿಗೆ ರೂ. 2 ಕೋಟಿ ವೆಚ್ಚದಲ್ಲಿ ಸಾರ್ವಜನಿಕ ಹೊಸ ಸಂಪರ್ಕ ರಸ್ತೆಯ ಗುದ್ದಲಿ ಪೂಜೆ ಹಾಗೂ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.ಧರ್ಮಾಧಾರಿತ ಕಾರ್ಯಗಳು ಹೆಚ್ಚಾ ದಂತೆ ಧರ್ಮವನ್ನು ನಿರಂತರವಾಗಿ ಉಳಿಸಲು ಸಾಧ್ಯ, ನಲ್ಲೂರಿನಲ್ಲಿರುವ ಮಠದಕೆರೆ, ಪಟ್ಟದ ಕೆರೆಗಳ ಅಭಿವೃದ್ಧಿಯಾಗಬೇಕು.
ಬೇಸಗೆಯಲ್ಲಿ ಜನರಿಗೆ ನೀರಿನ ಸಮಸ್ಯೆಯುಂಟಾ ದಾಗ ಈ ಕೆರೆಗಳಿಂದ ನೀರು ನೀಡುವ ಧರ್ಮಕಾರ್ಯವಾಗಲಿ ಎಂದರು. ಕಾರ್ಕಳ ಶಾಸಕ ಸುನಿಲ್ ಕುಮಾರ್ ಮಾತನಾಡಿ, ಕಾರ್ಕಳದ ಎಲ್ಲ ರಸ್ತೆಗಳು ಅಭಿವೃದ್ಧಿಯಾಗಬೇಕು ಎಂಬ ಕಲ್ಪನೆ ಯಿಂದ ಅವಿರತವಾಗಿ ಶ್ರಮಿಸುತ್ತಿದ್ದೇನೆ.
ಕಿಂಡಿ ಆಣೆಕಟ್ಟು, ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಕಾರ್ಕಳಕ್ಕೆ 1 ಕೋಟಿ ರೂ. ವೆಚ್ಚದಲ್ಲಿ ಪಾರ್ಕ್, ಕಾರ್ಕಳ-ಬೈಲೂರು ರಸ್ತೆ ಅಭಿವೃದ್ಧಿ, ಕಾರ್ಕಳ ನಗರದಲ್ಲಿ ರೂ. 6 ಕೋಟಿ ವೆಚ್ಚದ ಸಂಪೂರ್ಣ ಸುಸಜ್ಜಿತ ಸರಕಾರಿ ಆಸ್ಪತ್ರೆ, ರೂ. 1.5 ಕೋಟಿ ವೆಚ್ಚದ ಸ್ವಿಮ್ಮಿಂಗ್ ಪೂಲ್ ಮತ್ತು ಇನ್ನಿತರ ಹಲವಾರು ಕಾಮಗಾರಿಗಳನ್ನು ಅನು ಷ್ಠಾನಗೊಳಿಸಲಾಗುವುದು ಎಂದರು.ಉದ್ಯಮಿ ರಘುವೀರ್ ಶೆಟ್ಟಿ, ಅನುದಾನ ಮಂಜೂರುಗೊಳಿಸಿದ ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್, ನಲ್ಲೂರು ಕೊಡಮಣಿತ್ತಾಯ ದೆ„ವಸ್ಥಾನದ ಆಡಳಿತ ಮೊಕ್ತೇಸರ ವಜ್ರನಾಭ ಚೌಟ, ಜಿ.ಪಂ. ಸದಸ್ಯ ಉದಯ ಕೋಟ್ಯಾನ್, ದಿವ್ಯಶ್ರೀ ಅಮೀನ್, ತಾ.ಪಂ. ಸದಸ್ಯ ಸುರೇಶ್ ಶೆಟ್ಟಿ, ಗ್ರಾ.ಪಂ. ಅಧ್ಯಕ್ಷ ವಸಂತ್ ಮಡಿವಾಳ, ಕೂಷ್ಮಾಂಡಿನಿ ಬಳಗದ ಮಹಾವೀರ್ ಜೈನ್ ಉಪಸ್ಥಿತರಿದ್ದರು.
ಮಹಾವೀರ್ ಜೈನ್ ಸ್ವಾಗತಿಸಿ ದರು. ಪದ್ಮಪ್ರಸಾದ್ ವಂದಿಸಿದರು. ಮುನಿರಾಜ ರೆಂಜಾಳ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.