ಹೊರ ಬಂದರು ಮೀನುಗಾರರ ವಿರುದ್ಧ ಕ್ರಮಕ್ಕೆ ಆಗ್ರಹ


Team Udayavani, Aug 22, 2017, 7:25 AM IST

2108Prathibatane.jpg

ಮಲ್ಪೆ: ಹೊರಜಿಲ್ಲೆಯ ಬಂದರಿನ ಮೀನುಗಾರರು ಸರಕಾರದ ಆದೇಶವನ್ನು ಉಲ್ಲಂಘನೆ ಮಾಡಿ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ಬುಲ್‌ಟ್ರಾಲ್‌ ಮೀನುಗಾರಿಕೆ ನಡೆಸುತ್ತಿದ್ದು ಅಂಥವರನ್ನು ಕೂಡಲೇ ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಮಲ್ಪೆ ಬಂದರಿನ ಮೀನುಗಾರರು ಮಲ್ಪೆ ಮೀನುಗಾರಿಕಾ ಉಪನಿರ್ದೇಶಕ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿ ಆಗ್ರಹಿಸಿದರು.

ಸರಕಾರದ ಆದೇಶದಂತೆ ಸಣ್ಣ ಗಾತ್ರದ ಬಲೆಯ ಮೂಲಕ ಮರಿಮೀನುಗಳನ್ನು ಹಿಡಿದು ಮೀನಿನ ಸಂತತಿಯನ್ನು ನಾಶಗೊಳಿಸುವಂತಹ ಬುಲ್‌ಟ್ರಾಲ್‌ ಮೀನುಗಾರಿಕೆಯ ನಿಷೇಧದ ಆದೇಶವನ್ನು ಮಲ್ಪೆ ಬಂದರಿನ ಮೀನುಗಾರರು ಪಾಲಿಸುತ್ತಿದ್ದರೂ ಮಂಗಳೂರು, ಕಾರವಾರ ಜಿಲ್ಲೆಗಳ ಮೀನುಗಾರರು ಈ ಆದೇಶವನ್ನು ಉಲ್ಲಂಘಿಸಿ ಮಲ್ಪೆ ಬಂದರು ವಾಪ್ತಿಯಲ್ಲಿಯೂ ಬಂದು ಈ ರೀತಿಯಲ್ಲಿ ಮೀನುಗಾರಿಕೆಯನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಧಾರಣೆ ಕುಸಿತ
ಅಕ್ರಮವಾಗಿ ಹಿಡಿದ ಮೀನನ್ನು ಸ್ಥಳೀಯ ಮೀನು ಸಂಸ್ಕರಣ ಘಟಕಗಳಿಗೆ ನೀಡುವುದರಿಂದ ಕೆ.ಜಿ.ಗೆ 40 ರೂ. ಇದ್ದ ರಾಣಿಮೀನು 10 ರೂ. ಕುಸಿದಿದೆ. ಹೊರ ಬಂದರಿನ ಮೀನುಗಾರರು ನಡೆಸುತ್ತಿರುವ  ಬುಲ್‌ಟ್ರಾಲ್‌ ನಿಲ್ಲಿಸ ದಿದ್ದರೆ ಇಲ್ಲಿನವರೂ ಬುಲ್‌ಟ್ರಾಲ್‌ ನಡೆಸುವುದಾಗಿ ಎಚ್ಚರಿಸಿದ್ದಾರೆ. ಬಂದರು ಮತ್ತು ಮೀನುಗಾರಿಕಾ ಜಂಟಿ ನಿರ್ದೇಶಕ ಗಣಪತಿ ಭಟ್‌, ಮೀನುಗಾರಿಕಾ ಉಪನಿರ್ದೇಶಕ ಪಾರ್ಶ್ವನಾಥ್‌ ಅವರು ಅಕ್ರಮವಾಗಿ ಮೀನುಗಾರಿಕೆ ನಡೆಸುವ ಹೊರಬಂದರಿನ ಬೋಟನ್ನು ಕಾರ್ಯಾಚರಣೆ ನಡೆಸಿ ಪತ್ತೆಹಚ್ಚುವಂತೆ ಕರಾವಳಿ ಕಾವಲು ಪೊಲೀಸ್‌ ಪಡೆಗೆ ಸೂಚನೆ ನೀಡಿ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಕಾರ್ಯಾಚರಣೆಗೆ ಬೋಟಿಲ್ಲ
ಕರಾವಳಿಯ ಭದ್ರತೆ, ಸಮುದ್ರದಲ್ಲಿ ಗಸ್ತು ಮತ್ತು ರಕ್ಷಣೆಗಾಗಿ ಇರುವ ಕರಾವಳಿ ಕಾವಲು ಪಡೆಯಲ್ಲಿ ಕಾರ್ಯಾಚರಣೆ ನಡೆಸಲು ಬೋಟಿನ ವ್ಯವಸ್ಥೆಯೇ ಇಲ್ಲ. ಇದ್ದ ಬೋಟು ದುರಸ್ತಿಯಲ್ಲಿದೆ ಎಂದು ಅಧಿಕಾರಿಗಳು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದಾಗ ಮೀನುಗಾರರು ಮತ್ತಷ್ಟು ಆಕ್ರೋಶಗೊಂಡರು. ಕರಾವಳಿಯ ಕಾವಲು ಪಡೆಯ ಹೆಡ್‌ಕಾರ್ಟರ್ಸ್‌ ಆದ
ಮಲ್ಪೆಯಲ್ಲೇ ಈ ರೀತಿಯ ಪರಿಸ್ಥಿತಿ ಇದ್ದರೆ ಉಳಿದ ಕಡೆಗಳಲ್ಲಿ ಹೇಗೆ ? ಎಂದು ಮೀನುಗಾರರು ಪ್ರಶ್ನಿಸಿದರು.

ಮಲ್ಪೆ ಡೀಪ್‌ ಸೀ ಟ್ರಾಲ್‌ಬೋಟ್‌ ಸಂಘದ ಅಧ್ಯಕ್ಷ ಕಿಶೋರ್‌ ಡಿ. ಸುವರ್ಣ, ಮೀನುಗಾರ ಸಂಘದ ಅಧ್ಯಕ್ಷ ಸತೀಶ್‌ ಕುಂದರ್‌, ರಮೇಶ್‌ ಕೋಟ್ಯಾನ್‌, ಸೋಮನಾಥ್‌ ಕಾಂಚನ್‌ ಆನಂದ ಅಮೀನ್‌, ಭುವನೇಶ್‌ ಕೋಟ್ಯಾನ್‌, ಪ್ರಕಾಶ್‌ ಬಂಗೇರ, ಮಿಥುನ್‌ ಕರ್ಕೇರ, ಹರೀಶ್‌ ಜಿ. ಕೋಟ್ಯಾನ್‌, ಕರುಣಾಕರ ಸಾಲ್ಯಾನ್‌, ಫಯಾಸ್‌, ದಯಾನಂದ ಕುಂದರ್‌, ವಿಠಲ ಕರ್ಕೇರ, ಪಾಂಡುರಂಗ ಕೋಟ್ಯಾನ್‌, ಜ್ಞಾನೇಶ್ವರ ಕೋಟ್ಯಾನ್‌, ತಿಮ್ಮ ಮರಕಾಲ, ಸಚಿನ್‌, ರಾಜೇಂದ್ರ ಸುವರ್ಣ ರಾಮ ಅಮೀನ್‌, ರವಿರಾಜ ಸುವರ್ಣ, ಪುರಂದರ, ಧನಂಜಯ, ದೇವದಾಸ್‌ ಸಹಿತ ಹಲವಾರು ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

HD-Kumaraswamy

Congress Government: ಪೊಲೀಸ್‌ ಅಧಿಕಾರಿಗಳ ವಿರುದ್ಧ ಇಂದು ಎಚ್‌ಡಿಕೆ ದಾಖಲೆ ಬಿಡುಗಡೆ

vidhana-Soudha

Cabinet Decision: ಸಿಬಿಐ ಪವರ್‌ ಕಟ್‌: ರಾಜ್ಯ ಸರಕಾರ ಸಮರ್ಥನೆ

Revenue-Dep

Revenue Department: ಬಗರ್‌ಹುಕುಂ ಅರ್ಜಿ ವಿಲೇವಾರಿಗೆ 8 ತಿಂಗಳ ಗಡುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

HD-Kumaraswamy

Congress Government: ಪೊಲೀಸ್‌ ಅಧಿಕಾರಿಗಳ ವಿರುದ್ಧ ಇಂದು ಎಚ್‌ಡಿಕೆ ದಾಖಲೆ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.