ತಲೆತಲಾಂತರದಿಂದ ಪತ್ರದ ಮುಖೇನ ಕೊಠಡಿ ಕಾಯ್ದಿರಿಸುವ ಭಕ್ತರು!

ಪರ್ಯಾಯ ಸಮಿತಿಯಿಂದ ಭಕ್ತರಿಗೆ ವಸತಿ ಸೌಲಭ್ಯ

Team Udayavani, Jan 15, 2020, 6:49 AM IST

mk-21

ಉಡುಪಿ: ಅದಮಾರು ಪರ್ಯಾಯ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗಾಗಿ ಮಠ, ಛತ್ರ, ಅತಿಥಿ ಗೃಹದಲ್ಲಿ ವಿಶೇಷ ವಸತಿ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಭಕ್ತರಿಗೆ ವಸತಿ ವ್ಯವಸ್ಥೆ
ಪರ್ಯಾಯದ ಅಂಗವಾಗಿ ದೇಶ-ವಿದೇಶದಿಂದ ಸಾವಿರಾರು ಸಂಖ್ಯೆ ಯಲ್ಲಿ ಭಕ್ತರು ಆಗಮಿಸುತ್ತಾರೆ. ಅವರ ಅನುಕೂಲ ಹಾಗೂ ಬೇಡಿಕೆ ಅನುಗುಣವಾಗಿ ಪರ್ಯಾಯ ಮಠದ ವಸತಿ ಸೌಲಭ್ಯ ಕಲ್ಪಿಸಬೇಕಾಗುತ್ತದೆ. ಅಂತೆಯೇ ಈ ಬಾರಿ ಅದಮಾರು ಪರ್ಯಾಯ ವಸತಿ ಸಮಿತಿ ಸಾವಿರಾರು ಮಂದಿ ಭಕ್ತರಿಗೆ ಅಗತ್ಯವಿರುವ ವಸತಿ ಸೌಲಭ್ಯವನ್ನು ಕಲ್ಪಿಸಿಕೊಟ್ಟಿದೆ.

ಭರ್ತಿಯಾದ ವಸತಿ ನಿಲಯ
ಅಷ್ಟಮಠಗಳಿಗೆ ಸಂಬಂಧಿಸಿದ 20ಕ್ಕೂ ಅಧಿಕ ವಸತಿನಿಲಯ, ಛತ್ರಗಳು ಭರ್ತಿಯಾಗಿವೆ. ನಗರದ ಲಾಡ್ಜ್ ಸೇರಿದಂತೆ ವಿವಿಧ ಕಡೆಯಲ್ಲಿ ಸಾವಿರಾರು ಮಂದಿ ಭಕ್ತರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಗಣ್ಯರಿಗೆ ಖಾಸಗಿ ವಸತಿ ನಿಲಯ ಹಾಗೂ ರಾಜಕೀಯ ವ್ಯಕ್ತಿಗಳಿಗೆ ಸರಕಾರಿ ಪ್ರವಾಸಿ ಬಂಗಲೆಯಲ್ಲಿ ಉಳಿದುಕೊಳ್ಳಲು ಅಗತ್ಯವಿರುವ ವ್ಯವಸ್ಥೆ ಕಲ್ಪಿಸಿದ್ದು, ಮಣಿಪಾಲ, ಡಯಾನ ಸರ್ಕಲ್‌, ರಥ ಬೀದಿ, ಉಡುಪಿ ನಗರದ ಸೇರಿದಂತೆ ವಿವಿಧ ಕಡೆಯಲ್ಲಿ ಸಹ ಅತಿಥಿಗಳು ತಂಗಲು ಅಗತ್ಯವಿರುವ ವ್ಯವಸ್ಥೆಯನ್ನು ಪರ್ಯಾಯ ವಸತಿ ಸಮಿತಿ ಮಾಡಿಕೊಂಡಿದೆ.

ಪತ್ರ ವ್ಯವಹಾರ
ಹಿಂದೆ ದೂರದ ಊರಿನಿಂದ ಪರ್ಯಾಯಕ್ಕೆ ಬರುವ ಭಕ್ತರು ಮಠ ಪರ್ಯಾಯ ಸಮಿತಿಗೆ ಕೊಠಡಿಗಳನ್ನು ಕಾಯ್ದಿರಿಸುವಂತೆ ಪತ್ರ ಬರೆಯುತ್ತಿದ್ದರು. ಪ್ರಸ್ತುತ ವಸತಿಗೃಹಗಳನ್ನು ಆನ್‌ಲೈನ್‌ ಹಾಗೂ ದೂರವಾಣಿ ಕರೆಯ ಮೂಲಕ ಬುಕ್‌ ಮಾಡಲು ಅವಕಾಶವಿದ್ದರೂ, ಭಕ್ತರು ಮಾತ್ರ ಇನ್ನೂ ಮಠಕ್ಕೆ ಪತ್ರದ ಮುಖೇನ ಕೊಠಡಿಗಳನ್ನು ಕಾಯ್ದಿರಿಸಲು ಬಯಸುತ್ತಿರುವುದು ಆಶ್ಚರ್ಯದ ಸಂಗತಿ. ಮಠಕ್ಕೆ ಈ ಬಾರಿ ನೂರಾರು ಪತ್ರಗಳು ವಸತಿ ಸೌಕರ್ಯ ಕೋರಿ ಪತ್ರವನ್ನು ಬರೆದಿದ್ದಾರೆ. ಅವರಿಗೆಲ್ಲರಿಗೂ ವಸತಿ ವ್ಯವಸ್ಥೆ ಪರ್ಯಾಯ ವಸತಿ ಸಮಿತಿ ಕಲ್ಪಿಸಲಾಗಿದೆ.

ಪೊಲೀಸರಿಗೆ ಪ್ರತ್ಯೇಕ ವ್ಯವಸ್ಥೆ
ಮಠದ ಸುತ್ತಮುತ್ತಲಿನ ಎಲ್ಲ ವಸತಿ ನಿಲಯ, ಶಾಲೆಗಳು, ಛತ್ರಗಳು ಭರ್ತಿ ಯಾಗಿವೆ. ಮಠದಲ್ಲಿ ಉಳಿದುಕೊಳ್ಳಲು ಬಯಸುವವರಿಗೆ ಅಷ್ಟಮಠಗಳ‌ಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಪೊಲೀಸರಿಗೆ, ರಕ್ಷಣಾ ಸಿಬಂದಿಗಳಿಗೆ ಮದುವೆ ಮಂಟಪ ಹಾಗೂ ಮಠದ ಸಮೀಪದ ಶಾಲೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.

ಎಲ್ಲರಿಗೂ ವ್ಯವಸ್ಥೆ
ವಸತಿಗಾಗಿ ಪತ್ರ ಬರೆದವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಒಂದು ತಿಂಗಳ ಮುಂಚಿತವಾಗಿ ಮಠದ ಸುತ್ತಮುತ್ತಲಿನ ಇತರ ವಸತಿ ಗೃಹಗಳಿಗೆ ತೆರಳಿ ರೂಮ್‌ಗಳನ್ನು ಬ್ಲಾಕ್‌ ಮಾಡಲಾಗಿತ್ತು. ಇದರಿಂದಾಗಿ ಮಠದ ಮೂಲಕ ಕೊಠಡಿ ಪಡೆಯಲು ಬಯಸುವ ಭಕ್ತರಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಅದಮಾರು ಪರ್ಯಾಯ ವಸತಿ ಸಮಿತಿ ಸದಸ್ಯರು ತಿಳಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.