ಡಿಜಿಟಲ್ ಚುನಾವಣೆ ವ್ಯವಸ್ಥೆ ವಿನ್ಯಾಸ

ಬಂಟಕಲ್ಲು ತಾಂತ್ರಿಕ ಕಾಲೇಜು

Team Udayavani, Jun 1, 2019, 6:00 AM IST

3005SHIRVA4

ಶಿರ್ವ: ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಗಣಕಯಂತ್ರ ವಿಭಾಗದ ವಿದ್ಯಾರ್ಥಿಗಳಾದ ಚೇತನ್‌ ಪಿ. ವರ್ಣೇಕರ್‌, ಅಲ್ಪಯಾ ಪಾಲ್ಲೊವ್ಕರ್‌, ಆಝಿಝಾ ಮದೀಹಾ ಅವರು ಸಹಾಯಕ ಪ್ರಾಧ್ಯಾಪಕರಾದ ಅನುಜ್ಞಾ ರಾವ್‌ ಮತ್ತು ರಮ್ಯಶ್ರೀ ಅವರ ಮಾರ್ಗದರ್ಶನದಲ್ಲಿ ಡಿಜಿಟಲ್ ಮತದಾನ ವ್ಯವಸ್ಥೆಯನ್ನು ವಿನ್ಯಾಸಗೊಳಿಸಿದ್ದಾರೆ.

ಯಾವುದೇ ದೇಶದಲ್ಲಿ ಚುನಾವಣೆಯು ನಿರ್ಣಾಯಕ ಮತ್ತು ಮಹತ್ವದ ಘಟನೆಯಾಗಿದೆ. ಆದುದರಿಂದ ಪ್ರಜಾಪ್ರಭುತ್ವವು ಕಾನೂನಿನ ನಿಯಮದ ಪ್ರಕಾರ ವೈಯಕ್ತಿಕ ಆಯ್ಕೆಯ ಸ್ವಾತಂತ್ರ್ಯವನ್ನು ಪ್ರೋತ್ಸಾಹಿಸುತ್ತದೆ. ಪ್ರಸ್ತುತ ನಮ್ಮದೇಶದಲ್ಲಿ ಎವಿಎಂ ಆಧಾರಿತವಾದ ವ್ಯವಸ್ಥೆಯನ್ನು ಅನುಸರಿಸಲಾಗುತ್ತಿದ್ದು , ಅದನ್ನು ಇನ್ನಷ್ಟು ಸುರಕ್ಷಿತ, ಆದರೆ ಸುಲಭ ಮಾಡುವ ಅವಶ್ಯಕತೆಯಿದೆ. ವಿವಿಧ ಭಧ್ರತೆ ಸಂಬಂಧಿ ದೋಷಗಳ ಕಾರಣದಿಂದ ಪ್ರಸ್ತುತ ಮತದಾನ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ಡಿಜಿಟಲ್ಚುನಾವಣಾ ವ್ಯವಸ್ಥೆಯನ್ನು ಅಭಿವೃದ್ದಿಪಡಿಸಲಾಗಿದೆ.

ಇದು ಸಂಪೂರ್ಣಗಣಕೀಕೃತ ಚುನಾವಣಾ ವ್ಯವಸ್ಥೆಯಾಗಿದ್ದು, ಪ್ರಸ್ತುತ ವ್ಯವಸ್ಥೆಯಿಂದ ಭಿನ್ನವಾಗಿದೆ.ಮತದಾನ ಮಾಡಲು ಮತದಾನ ಯಂತ್ರಗಳು ಅಥವಾ ಇಂಟರ್ನೆಟ್ ಬ್ರೌಸರ್‌ನಂತಹ ಎಲೆಕ್ಟ್ರಾನಿಕ್‌ ಸಾಧನಗಳ ಬಳಕೆ ಮಾಡಲಾಗಿದೆ. ಇ- ಮತದಾನ ಎಂದು ಕರೆಯಲಾಗುವ ಈ ವ್ಯವಸ್ಥೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಡಿಜಿಟಲ್ ಮತದಾನ ವ್ಯವಸ್ಥೆಯನ್ನು ವಿನ್ಯಾಸಗೊಳಿಸಿದ್ದು ಮತದಾರರ ಅನುಕೂಲ, ಮತಗಳ ಸುರಕ್ಷತೆ, ಸುಗಮ ಚುನಾವಣಾ ವಿಧಾನವನ್ನು ಅನುಲಕ್ಷಿಸಿದೆ.

ಇದರಲ್ಲಿ ಮತದಾರರು, ಅಭ್ಯರ್ಥಿಗಳು ಮತ್ತು ಚುನಾವಣಾ ಆಯೋಗ ಎಲ್ಲರೂ ಸೇರಿ ಕಾರ್ಯ ನಿರ್ವಹಿಸುತ್ತಾರೆ. ಪ್ರಸ್ತಾಪಿತ ವ್ಯವಸ್ಥೆಯು ಮತದಾನ, ಮತದಾರರು, ಅಭ್ಯರ್ಥಿ ಮತ್ತು ಚುನಾವಣೆಯ ವಿವರಗಳನ್ನು ಸಮಗ್ರವಾಗಿ ಸಂಗ್ರಹಿಸಿ ನಿರ್ವಹಿಸುತ್ತದೆ, ಮತಗಣತಿಯ ಅನುಮತಿಯನ್ನು ಚುನಾವಣಾ ಆಯೋಗವಷ್ಟೇ ಹೊಂದಿದ್ದು, ಅದಕ್ಕೆ ಚಲಾವಣೆಯಾದ ಮತಗಳನ್ನು ಮಾರ್ಪಡಿಸುವ ಯಾವುದೇ ಸಾಧ್ಯತೆಗಳಿರುವುದಿಲ್ಲ. ಮತಗಣತಿ ಕೂಡ ಅತ್ಯಂತ ಸುಲಭ ಸಾಧ್ಯವಿದ್ದು ಬೋಗಸ್‌ ಮತದಾನವನ್ನು ಕೂಡ ತಡೆಯುತ್ತದೆ.

ಪ್ರಸ್ತುತ ವಿವಿಪಿಎಟಿಯಲ್ಲಿಸಮಯ, ಹಣವನ್ನು ವ್ಯಯ ಮಾಡಬೇಕಾಗುತ್ತದೆ.ಆದರೆ ಈ ಹೊಸ ವ್ಯವಸ್ಥೆಯು ಈ ನ್ಯೂನತೆಯನ್ನು ಹೋಗಲಾಡಿಸಲು ಸಹಕಾರಿಯಾಗಿದ್ದು, ಮತದಾರನು ಯಾವುದೇ ಸ್ಥಳದಿಂದ ಅಂತರ್ಜಾಲದ ಮೂಲಕ ಮತ ಚಲಾಯಿಸಲು ಸಹಾಯ ಮಾಡುತ್ತದೆ. ಡಿಜಿಟಲ್ ಭಾರತದ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಈ ಪರಿಕ್ರಮವು ಒಂದು ಪೂರಕ ಆಲೋಚನೆಯಾಗಿದೆ.

ದತ್ತಾಂಶವನ್ನು ಭದ್ರಪಡಿಸುವ ಮತ್ತು ಸಂಭಾವ್ಯ ದಾಳಿಯಿಂದ ರಕ್ಷಿಸಿಕೊಳ್ಳಲು ಈ ವ್ಯವಸ್ಥೆಯು ಸಮರ್ಥ ವಾಗಿದ್ದು, ಪ್ರಸ್ತುತ ಲಭ್ಯವಿರುವ ನೂತನ ಸುರಕ್ಷಾ ಕ್ರಮಗಳನ್ನು ಬಳಸಿಕೊಂಡಿದೆ.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.