ಉಡುಪಿ ಜಿಲ್ಲೆಯಲ್ಲಿ ನಿಲ್ಲದ ಅಕ್ರಮ ಮರಳುಗಾರಿಕೆ


Team Udayavani, Mar 6, 2019, 1:00 AM IST

molahalli.jpg

ಕೋಟ: ಗ್ರಾಮೀಣ ಭಾಗದ ಹಲವೆಡೆ ಅಕ್ರಮ ಮರಳುಗಾರಿಕೆ ರಾಜಾರೋಷವಾಗಿ ನಡೆಯುತ್ತಿದ್ದು, ಸರಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. 

ಕೋಟ ಪೊಲೀಸ್‌ ಠಾಣೆ ವ್ಯಾಪ್ತಿಯ ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಹಲವೆಡೆ ಈ ದಂಧೆ ನಡೆಯುತ್ತಿದ್ದು, ಹಲವು ಬಾರಿ ದಾಳಿ ನಡೆಸಿದ್ದರೂ ಅಕ್ರಮ ಮರಳುಗಾರಿಕೆ ನಿಂತಿಲ್ಲ.

ಎರಡು ದಿನದ ಹಿಂದಷ್ಟೇ ನೂತನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್‌ ನೇತೃತ್ವದಲ್ಲಿ ದಾಳಿ ನಡೆಸಿ 10 ದೋಣಿ, 1 ಲಾರಿ, 2 ಕಾರುಗಳೊಂದಿಗೆ ಹಲವರನ್ನು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನಿಲ್ಲದ ಅಕ್ರಮ ವ್ಯವಹಾರ
ಮೊಳಹಳ್ಳಿ ಗ್ರಾ.ಪಂ. ವ್ಯಾಪ್ತಿಯ ವಿವಿಧೆಡೆ ಹಲವು ವರ್ಷದಿಂದ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು, 2017ರಿಂದ ಇಲ್ಲಿಯ ತನಕ ಸುಮಾರು 10ಕ್ಕೂ ಹೆಚ್ಚು ಬಾರಿ ದಾಳಿ ನಡೆದಿದೆ. ಹಲವು ಸಂದರ್ಭಗಳಲ್ಲಿ  ಆರೋಪಿಗಳು ಪರಾರಿಯಾದ್ದರಿಂದ ಮರಳು ಮತ್ತು ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಕೆಲವರ ವಿರುದ್ಧ  ಮೂರಕ್ಕೂ ಹೆಚ್ಚು ಪ್ರತ್ಯೇಕ ಪ್ರಕರಣಗಳು ಕೋಟ ಠಾಣೆಯ ವ್ಯಾಪ್ತಿಯಲ್ಲಿವೆ.

ಅಕ್ರಮ ಮರಳುಗಾರಿಕೆ ತಡೆಯಲು ಕೈಲ್ಕೇರಿ ಹಾಗೂ ಮರತ್ತೂರು ಭಾಗದಲ್ಲಿ ಪೊಲೀಸ್‌ ಹಾಗೂ ಗಣಿ ಇಲಾಖೆಯ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿತ್ತು. ಆದರೆ ಈ ಚೆಕ್‌ಪೋಸ್ಟ್‌ಗಳಿಂದಲೂ ಏನೂ ಪ್ರಯೋಜನವಾಗಿಲ್ಲ.

ಠಾಣೆಯಿಂದ ದೂರ
ಕೋಟ ಪೊಲೀಸ್‌ ಠಾಣೆಯಿಂದ ಹಾರ್ದಳ್ಳಿ- ಮಂಡಳ್ಳಿ, ಆವರ್ಸೆ, ಮೊಳಹಳ್ಳಿ ಹೊಂಬಾಡಿ-ಮುಂದಾಡಿ ಮುಂತಾದ ಗ್ರಾಮಗಳು 30 ಕಿ.ಮೀ.ಗಿಂತ ಅಧಿಕ ದೂರದಲ್ಲಿದ್ದು, ಈ ಪ್ರದೇಶಕ್ಕೆ ಹೋಗುವುದು ಕಷ್ಟ. ಹೀಗಾಗಿ ದೂರು ಬಂದ ಮೇಲೂ ಪೊಲೀಸರಿಗೆ ಸ್ಥಳಗಳಿಗೆ ತಲುಪಲು ಕನಿಷ್ಠ ಮುಕ್ಕಾಲು ಗಂಟೆ ಬೇಕು. ಅಷ್ಟರಲ್ಲಿ ಅಕ್ರಮ ದಂಧೆ ಯಲ್ಲಿ ತೊಡಗಿದವರು ಪರಾರಿಯಾಗಿ ರುತ್ತಾರೆ. ಹಾಗಾಗಿ ಎಷ್ಟೇ ದಾಳಿ ನಡೆಸಿದರೂ ದಂಧೆ ನಿಲ್ಲುತ್ತಿಲ್ಲ ಎಂಬುದು ಸಾರ್ವಜನಿಕ ವಲಯದ ಅಭಿಪ್ರಾಯ.

ಮರಳು ಕೊರತೆಯನ್ನೇ ಬಂಡವಾಳ ವಾಗಿಸಿಕೊಂಡ ದಂಧೆಕೋರರು ಮೂರು ಯುನಿಟ್‌ ಮರಳಿಗೆ 15ರಿಂದ 20 ಸಾವಿರ ರೂ. ವರೆಗೆ  ವಸೂಲಿ ಮಾಡುತ್ತಿದ್ದು, ಸರಕಾರಕ್ಕೆ ಕೋಟ್ಯಂತರ ರೂ. ನಷ್ಟವಾಗುತ್ತಿದೆ.

ಅಕ್ರಮ ಮರಳುಗಾರಿಕೆಯನ್ನು ಮಟ್ಟ ಹಾಕಲು ಗಣಿ ಇಲಾಖೆ, ಆರ್‌ಟಿಒ ಹಾಗೂ ಪೊಲೀಸರ ಸಮನ್ವಯದ ಕಾರ್ಯಾಚರಣೆ ಬೇಕಿದೆ. ಸ್ಥಳೀಯ ಪೊಲೀಸರು ಅಕ್ರಮ ತಡೆಯುವಲ್ಲಿ ವಿಫಲರಾದರೆ ಹಾಗೂ ಅಕ್ರಮದ ಕುರಿತು ಮತ್ತೆ ದೂರುಗಳು ಬಂದರೆ ಜಿಲ್ಲಾ ಮಟ್ಟದಿಂದ ಸೂಕ್ತ ತಂಡವನ್ನು ನಿಯೋಜಿಸಲಾಗುವುದು.
– ನಿಶಾ ಜೇಮ್ಸ್‌ , ಎಸ್ಪಿ

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.