![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 4, 2020, 8:57 AM IST
ಮಲ್ಪೆ, ಡಿ. 3: ಇಲ್ಲಿನ ಕೊಳ ರಸ್ತೆ ಹನುಮಾನ್ ನಗರದ ಸಮೀಪ ತೋಡಿನಲ್ಲಿ ಕೊಳಚೆ ನೀರು ಹಲವು ಸಮಯದಿಂದ ನಿಂತೇ ಇದ್ದು ಪರಿಸರದಲ್ಲಿ ಅಸಹನೀಯ ವಾತಾವರಣ ಸೃಷ್ಟಿಯಾಗಿದೆ.
ಕೊಳಚೆ ನೀರು ನಿಂತಿರುವುದರಿಂದ ಸೊಳ್ಳೆ ಕಾಟ ಮಿತಿ ಮೀರಿದ್ದು ಸಾಂಕ್ರಾಮಿಕ ರೋಗದ ಭಯ ಕಾಡಿದೆ. ಈ ಭಾಗದಲ್ಲಿ 100ಕ್ಕೂ ಅಧಿಕ ಮನೆಗಳಿದ್ದು ನಿವಾಸಿಗಳು ನರಕಯಾತನೆ ಅನುಭವಿಸುತ್ತಿ ದ್ದಾರೆ. ಮಾರ್ಗದಲ್ಲಿ ಸಂಚರಿಸುವ, ಬೀಚ್ಗೆ ಬರುವ ಪ್ರವಾಸಿಗರಿಗೂ ದುರ್ವಾಸನೆ ಮೂಗಿಗೆ ಬಡಿಯುತ್ತಿದೆ.
ತೋಡಿನಲ್ಲಿ ತ್ಯಾಜ್ಯರಾಶಿ :
ಕೊಳ ಹನುಮಾನ್ನಗರ ಭಾಗದಲ್ಲಿ ತೋಡಿನಲ್ಲಿ ಹರಿದು ಬರುವ ನೀರು ಮಲ್ಪೆ ಬಂದರು ಪಕ್ಕದ ತೋಡಿನ ಮೂಲಕ ಹೊಳೆಯನ್ನು ಸೇರುತ್ತವೆ. ಆದರೆ ತೋಡಿ
ನಲ್ಲಿ ತ್ಯಾಜ್ಯ ರಾಶಿಗಳು ಮತ್ತು ಹೂಳು ತುಂಬಿಕೊಂಡಿರುವುದರಿಂದ ನೀರು ಸರಿಯಾಗಿ ಹರಿದು ಹೋಗುತ್ತಿಲ್ಲ. ತ್ಯಾಜ್ಯ ತೆರವುಗೊಳಿಸುವ ಕಾರ್ಯವೂ ನಡೆದಿಲ್ಲ. ಈ ಹಿಂದೆ ನಗರಸಭೆ ಪ್ರತಿವರ್ಷ ಮಳೆಗಾಲಕ್ಕೆ ಮುನ್ನ ಇಲ್ಲಿನ ತೋಡಿನ ಹೂಳು ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗುತ್ತಿತ್ತು. ಕಳೆದ ಎರಡು ವರ್ಷದಿಂದ ಈ ಕೆಲಸ ನಡೆದಿಲ್ಲ.
ಗಂಭೀರವಾಗಿ ಪರಿಗಣಿಸಿ :
ಆಡಳಿತ ಇಲ್ಲಿನ ಸಮಸ್ಯೆಯನ್ನು ಗಂಭೀರವಾಗಿ ಗಣನೆಗೆ ತೆಗೆದುಕೊಂಡು ತೋಡು ಸ್ವತ್ಛಗೊಳಿಸುವ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಇಲ್ಲಿನ ನಾಗರಿಕರು ಆಗ್ರಹಿಸಿದ್ದಾರೆ.
ಸೂಕ್ತ ಕ್ರಮ :
ರಸ್ತೆ ಬದಿಯಲ್ಲಿ ವೀಡ್ ಕಟ್ಟಿಂಗ್ ಕೆಲಸ ನಡೆಯುತ್ತಿದೆ. ಆದ್ಯತೆ ಮೇರೆಗೆ ಚರಂಡಿಗಳ ಸ್ವತ್ಛತೆ ಕೆಲಸ ಕೈಗೊಳ್ಳಲಾಗುತ್ತದೆ. ಮಲ್ಪೆ ಹನುಮಾನ್ನಗರ ಬಳಿ ಚರಂಡಿಯಲ್ಲಿ ಕೊಳಚೆ ನೀರು ನಿಂತಿರುವ ಸಮಸ್ಯೆ ಇರುವುದರಿಂದ ಶುಕ್ರವಾರವೇ ಸ್ಥಳ ಪರಿಶೀಲನೆ ಮಾಡಿ ಶೀಘ್ರ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉಡುಪಿ ನಗರಸಭೆಯ ಆರೋಗ್ಯ ನಿರೀಕ್ಷಕ ಶಶಿರೇಖಾ ಅವರು ತಿಳಿಸಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.