“ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವುದಿಲ್ಲ’


Team Udayavani, Apr 22, 2018, 6:30 AM IST

210418use1b.jpg

ಉಡುಪಿ: ಚುನಾವಣಾ ಕಣದಿಂದ ಹಿಂದೆ ಸರಿಯುವುದಿಲ್ಲ. ಸ್ಪರ್ಧಿಸಲು ಸಂಕಲ್ಪ ಮಾಡಿದ್ದೇನೆ. ಹಾಗಾಗಿ ಎರಡನೇ ಮಾತಿಲ್ಲ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶನಿವಾರದಂದು ನಾಮಪತ್ರ ಸಲ್ಲಿಸಿದ ಶೀರೂರು ಮಠಾಧೀಶ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರು ತಿಳಿಸಿದ್ದಾರೆ.

ಪಕ್ಷೇತರನಾದರೂ ಬಿಜೆಪಿಗೇ ಲಾಭ
ನಾಮಪತ್ರ ಸಲ್ಲಿಕೆಗೂ ಮೊದಲು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅನಂತರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, “ನಾನು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೆ. ಟಿಕೆಟ್‌ ಸಿಗುವ ವಿಶ್ವಾಸವಿತ್ತು. ಆದರೆ ಈಗ ಬೇರೆಯವರಿಗೆ ಟಿಕೆಟ್‌ ನೀಡಲಾಗಿದೆ. ಹಾಗಾಗಿ ಪಕ್ಷೇತರ ನಾಗಿ ಸ್ಪರ್ಧಿಸುತ್ತಿದ್ದೇನೆ. ನರೇಂದ್ರ ಮೋದಿ, ಅಮಿತ್‌ ಶಾ ಮತ್ತು ಯೋಗಿ ಆದಿತ್ಯನಾಥ್‌ ಅವರ ಮೇಲೆ ಭರವಸೆ ಇಟ್ಟಿದ್ದೇನೆ. ಪಕ್ಷೇತರನಾಗಿ ಸ್ಪರ್ಧಿಸಿದರೂ ನರೇಂದ್ರ ಮೋದಿಯವರಿಗೇ ಲಾಭ’ ಎಂದು ಹೇಳಿದರು.

“ನರೇಂದ್ರ ಮೋದಿಯವರು ಬಂದು ನಾಮಪತ್ರ ವಾಪಸ್ಸು ಪಡೆಯಲು ಹೇಳಿದರೆ ನಿರ್ಧಾರ ಪುನರ್‌ ಪರಿಶೀಲಿಸುತ್ತೀರಾ?’ ಎಂದು ಪ್ರಶ್ನಿಸಿದಾಗ “ಕೊನೆ ಕ್ಷಣದಲ್ಲಿ ನರೇಂದ್ರ ಮೋದಿ ಅವರು ಬಂದು ಮಾತನಾಡಿದರೆ ಆಗ ನೋಡೋಣ..’ ಎಂದು ಶೀರೂರು ಶ್ರೀ ಹೇಳಿದರು.

ನಾನೂ ಬಿಜೆಪಿಯವನು
ನಾನು 41 ವರ್ಷಗಳಿಂದ ಬಿಜೆಪಿಗೆ ಮತ ಹಾಕುತ್ತಿದ್ದೇನೆ. ಬಿಜೆಪಿ ಮತ ಹಾಕುವವರೆಲ್ಲರೂ ಬಿಜೆಪಿಯವರೇ. ನನಗೆ ಗೆಲ್ಲುವ ವಿಶ್ವಾಸ ಇದೆ. ಉಡುಪಿ ಜನತೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಒಂದು ವೇಳೆ ಬಿಜೆಪಿಯಿಂದ ಬಿ-ಫಾರಂ ಸಿಕ್ಕಿದರೆ ಇನ್ನೂ ಕೂಡ ಬಿಜೆಪಿಯಿಂದ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಶೀರೂರು ಶ್ರೀ ಹೇಳಿದರು. 

ಕಾಂಗ್ರೆಸ್‌ ಬೆಂಬಲಿಸಿಲ್ಲ
ನನ್ನ ಸ್ಪರ್ಧೆಯಿಂದ ಕಾಂಗ್ರೆಸ್‌ಗೆ ಲಾಭ ಎಂದು ಕೆಲವು ಜನರು ತಪ್ಪು ತಿಳಿದುಕೊಂಡಿದ್ದಾರೆ. ನಾನು ಕೆಲವರ ಜತೆ ವಿಶ್ವಾಸದಲ್ಲಿ ಇರು ವುದನ್ನೇ ಜನ ತಪ್ಪಾಗಿ ತಿಳಿದುಕೊಂಡಿದ್ದಾರೆ. ನಾನು ಈ ಹಿಂದೊಮ್ಮೆ ಕಾಂಗ್ರೆಸ್‌ ಕಾರ್ಯ ಕ್ರಮಕ್ಕೆ ಹೋದದ್ದು ಅಚಾನಕ್‌. ಯಾವುದೋ ಕಾರ್ಯಕ್ರಮಕ್ಕೆ ಹೋದಾಗ ಸಿಕ್ಕಿಬಿದ್ದಿದ್ದೆ ಅಷ್ಟೆ ಎಂದು ಶೀರೂರು ಶ್ರೀಗಳು ಹೇಳಿದರು. 

ದೇಗುಲದಿಂದ ಚುನಾವಣಾಧಿಕಾರಿ ಕಚೇರಿವರೆಗೆ…
ಸುಮಾರು 12 ಗಂಟೆಯ ವೇಳೆಗೆ ಕಡಿಯಾಳಿ ದೇಗುಲಕ್ಕೆ ಆಗಮಿಸಿ ದೇವರ ದರ್ಶನಗೈದ ಶೀರೂರು ಶ್ರೀಗಳು ಅಲ್ಲಿ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆದು ಸೀಯಾಳ ಕುಡಿದು ಅಲ್ಲಿಂದ ಹೊರಟು ಬನ್ನಂಜೆಯಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ 12.25ರ ವೇಳೆಗೆ ತಲುಪಿದರು. 12.30ಕ್ಕೆ ನಾಮಪತ್ರ ಸಲ್ಲಿಸುವುದಾಗಿ ನಿಗದಿಯಾಗಿದ್ದರೂ ನಾಮಪತ್ರ ದಾಖಲೆಗಳಿಗೆ ಸಹಿ ಹಾಕುವುದು, ದಾಖಲೆಗಳ ಕ್ರೋಢೀಕರಣ ಸೇರಿದಂತೆ ವಿವಿಧ ಪ್ರಕ್ರಿಯೆಗಳು ನಡೆಯಬೇಕಾಗಿದ್ದ ಕಾರಣದಿಂದ ಚುನಾವಣಾಧಿಕಾರಿಗಳ ಕಚೇರಿಯ ಪಕ್ಕದಲ್ಲೇ ಇದ್ದ ಕಚೇರಿಯಲ್ಲಿ ಕುಳಿತು ವಿಶ್ರಾಂತಿ ಪಡೆದರು. ಅಲ್ಲಿಯೂ ಸೀಯಾಳ ಕುಡಿದು ದಣಿವಾರಿಸಿಕೊಂಡರು. ಅವರ ಬೆಂಬಲಿಗರು ಉಪಚರಿಸಿದರು. 1.30ರ ವೇಳೆಗೆ ನಾಮಪತ್ರ ಸಲ್ಲಿಸಿದರು. ದಾಖಲೆಗಳ ಪರಿಶೀಲನೆಗಳು ಮುಗಿದು 2 ಗಂಟೆಯ ಸುಮಾರಿಗೆ ಚುನಾವಣಾಧಿಕಾರಿಗಳಿ ಕಚೇರಿಯಿಂದ ನಿರ್ಗಮಿಸಿದರು. 

“ಕಳೆದ 3 ದಿನಗಳಿಂದ ನೇಮೋತ್ಸವ ಇದ್ದುದರಿಂದ ಬಳಲಿಕೆ ಇದೆ ಅಷ್ಟೆ. ಶೀಘ್ರದಲ್ಲೇ ಪತ್ರಿಕಾಗೋಷ್ಠಿ ಕರೆದು ಸ್ಪರ್ಧೆ ಕುರಿತು ಮತ್ತಷ್ಟು ವಿವರ ನೀಡುತ್ತೇನೆ’ ಎಂದು ಶ್ರೀಗಳು ಈ ಸಂದರ್ಭದಲ್ಲಿ ತಿಳಿಸಿದರು.  

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.