Doddanagudde: ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶ್ರೀ ಚಕ್ರ ಮಂಡಲ ಪೂಜೆ ಸಂಪನ್ನ


Team Udayavani, Aug 30, 2024, 3:06 PM IST

Doddanagudde: ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶ್ರೀ ಚಕ್ರ ಮಂಡಲ ಪೂಜೆ ಸಂಪನ್ನ

ಉಡುಪಿ: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಏಕಕಾಲ ಶ್ರೀ ಚಕ್ರ ಮಂಡಲ ಪೂಜೆಯು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ, ಕುಕ್ಕಿಕಟ್ಟೆ ವೇದಮೂರ್ತಿ ರಾಘವೇಂದ್ರ ತಂತ್ರಿ ಗಳವರ ಪ್ರಧಾನತ್ವದಲ್ಲಿ ಬಹು ವಿಜೃಂಭಣೆಯಿಂದ ಸಂಪನ್ನಗೊಂಡಿತು…

ಆ ಪ್ರಯುಕ್ತ ಕ್ಷೇತ್ರದಲ್ಲಿ ಬೆಳಿಗ್ಗೆ ದೇವತಾ ಪ್ರಾರ್ಥನೆ, ನಂತರ ಶಾಸ್ತ್ರೋಕ್ತವಾದ ಅರಣಿಮಥನದಿಂದ ಅಗ್ನಿ ಜನನ ಗೊಳಿಸಿ ಆದ್ಯ ಗಣಪತಿಯಾಗ ನೆರವೇರಿಸಲಾಯಿತು..

ಶ್ರೀ ಚಕ್ರ ಮಂಡಲ ಪೂಜೆಗೆ ವಿಶೇಷವಾಗಿ ರಚಿಸಲಾದ ಪುಷ್ಪಾಲಂಕೃತ ಮಂಟಪದೊಳಗೆ ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ದೀಪ ಪ್ರಜ್ವಲಿಸಿ, ಪಂಚವರ್ಣಾತ್ಮಕವಾಗಿ ಬಿಂದುವನ್ನು ಇಟ್ಟು ಶ್ರೀಚಕ್ರ ಮಂಡಲ ರಚನೆಗೆ ಚಾಲನೆ ನೀಡಿದರು.

ಸಂಜೆ ಗಂಟೆ ಆರರಿಂದ ಶ್ರೀ ಚಕ್ರ ಮಂಡಲ ಪೂಜೆ ಆರಂಭಗೊಂಡಿತು. ಪೂಜೆಯಲ್ಲಿ ಪುಷ್ಪಾರ್ಚನೆಗೆ ವಿಶೇಷ ಪ್ರಾಧಾನ್ಯತೆ ಇದ್ದು ಸುಗಂಧ ಭರಿತ ವಿಧ ವಿಧದ ಪುಷ್ಪಗಳಿಂದ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕಿಯಾದ ಶ್ರೀ ರಾಜರಾಜೇಶ್ವರಿಯನ್ನು ಲಲಿತಾ ಸಹಸ್ರ ನಾಮ ಸಹಿತ ವಿವಿಧ ಸ್ತುತಿಗಳಿಂದ ಸ್ತುತಿಸಿ ಅರ್ಚನೆ ನೆರವೇರಿಸಲಾಯಿತು..

ಶಾಸ್ತ್ರಗಳು ಉಲ್ಲೇಖಿಸಿದಂತೆ ವಿಶೇಷವಾಗಿ ನವ ನೈವೇದ್ಯಗಳನ್ನು ಆಕೆಗೆ ಸಮರ್ಪಿಸಿ ಶೋಡಸ ಆರತಿಯನ್ನು ಬೆಳಗಿಸಿ ಚೆಂಡೆ ವಾದ್ಯ ನಾದದೊಂದಿಗೆ ಅಷ್ಟಾವದನ ಸಹಿತವಾಗಿ ಆರಾಧಿಸಲಾಯಿತು.

ವಿಶೇಷವಾಗಿ ಸಮರ್ಥಿಸಲ್ಪಡುವ ಅಷ್ಟಾವಧಾನ ಸೇವೆಯಲ್ಲಿ ಸಂಗೀತ ಸೇವೆಯನ್ನು ಶ್ರೀಮತಿ ಚಂದ್ರಕಲಾ ಶರ್ಮ, ಯಕ್ಷಗಾನ ಸೇವೆಯನ್ನು ಶ್ರೀಮತಿ ಊರು ಭಾಗ್ಯಲಕ್ಷ್ಮಿ, ಪಂಚವಾದ್ಯ ಸಹಿತ ರುದ್ರನಾದ ಸೇವೆಯನ್ನು ನಾಗೇಂದ್ರ ಕುಡುಪು, ನಾದಸ್ವರ ವಾದನ ಸೇವೆ ಶ್ರೀಯುತ ಮುರಳಿದರ ಮುದ್ರಾಡಿ ಮತ್ತು ತಂಡದವರು ನೃತ್ಯ ಸೇವೆಯನ್ನು ವಿದುಷಿ ಕುಮಾರಿ ಅನ್ವಿತಾ ಹಾಗೂ ಚತುರ್ವೇದ ಸಹಿತ ವಿವಿಧ ಸೇವೆಯನ್ನು ವಿಪ್ರೊತ್ತಮರು ನೆರವೇರಿಸಿದರು…

ಪೂಜೆಯ ಅಂಗವಾಗಿ ಬ್ರಾಹ್ಮಣ ಸುವಾಸಿನಿ ಆರಾಧನೆ ಕನ್ನಿಕರಾದನೆ ಬ್ರಹ್ಮಚಾರಿ ಆರಾಧನೆ ದಂಪತಿ ಪೂಜೆ ಆಚಾರ್ಯ ಪೂಜೆಗಳು ಸಂಪನ್ನಗೊಂಡು ಮಧ್ಯಾಹ್ನ ಹಾಗೂ ರಾತ್ರಿ ವಿಶೇಷ ಮೃಷ್ಟಾನ್ನ ಸಂತರ್ಪಣೆ ನೆರವೇರಿತು.

ಇಹದಲ್ಲಿ ಸುಖ ಪರದಲ್ಲಿ ಮೋಕ್ಷವನ್ನು ಕರುಣಿಸುವಂತಹ ಬಹು ವಿಶಿಷ್ಟವೂ ಅಪರೂಪವು ಬಹು ಫಲಪ್ರದವು ಆದಂತಹ ಈ ಶ್ರೀಚಕ್ರ ಮಂಡಲ ಪೂಜೆಯು ಚೆನ್ನೈನ ಶ್ರೀಯುತ ವಾಸುದೇವನ್ ಮತ್ತು ಕುಟುಂಬಸ್ಥರ ಪರವಾಗಿ ಪ್ರಾಯಶ್ಚಿತ್ತ ಪೂರ್ವಕವಾಗಿ ಕ್ಷೇತ್ರದಲ್ಲಿ ಸಂಪನ್ನಗೊಂಡಿತು.

ಶ್ರೀಚಕ್ರ ಆರಾಧಕರಿಂದಲೇ ನಡೆಸಲ್ಪಡುವ ಈ ವಿಶಿಷ್ಟ ಪೂಜೆಯು ಪ್ರಾಜ್ಞವಿಪ್ರವರ್ಗದ ಸಹಕಾರದಿಂದ ನೋಡುಗರನ್ನು ಭಕ್ತಿ ಪರವಶಗೊಳಿಸಿ ರೋಮಾಂಚನಗೊಳ್ಳುವಂತೆ ಸಂಪನ್ನಗೊಂಡಿತು.

ಈ ವಿಶೇಷ ಪೂಜೆಯ ನೇತೃತ್ವವನ್ನು ವೇದಮೂರ್ತಿ ವಿಕ್ಯಾತ್ ಭಟ್ ವಹಿಸಿದ್ದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.