ನಿಮ್ಮನ್ನು ತಿನ್ನುವುದೇ ನಿಮ್ಮನ್ನು ಕೊಲ್ಲುತ್ತದೆ:ಡಾ| ಬಿ.ಎಂ.ಹೆಗ್ಡೆ


Team Udayavani, Feb 25, 2017, 2:08 PM IST

bm-hegde.jpg

ಉಡುಪಿ: “ನೀವು ತಿಂದದ್ದು ನಿಮ್ಮನ್ನು ಕೊಲ್ಲುವುದಿಲ್ಲ. ನಿಮ್ಮನ್ನು ತಿನ್ನುವುದೇ ನಿಮ್ಮನ್ನು ಕೊಲ್ಲುತ್ತದೆ’ – ಇದು ಹೆಸರಾಂತ ವೈದ್ಯ ಡಾ| ಬಿ.ಎಂ. ಹೆಗ್ಡೆ ಅವರ ಹೇಳಿಕೆ. 

ಕುತ್ಪಾಡಿ ಆಯುರ್ವೇದ ಕಾಲೇಜಿನಲ್ಲಿ ಸ್ವಸ್ಥವೃತ್ತ ವಿಭಾಗದ ಸ್ನಾತಕೋತ್ತರ ವಿಭಾಗ ಶುಕ್ರವಾರ ಆಯೋಜಿಸಿದ ಆಯುರ್ವೇದ ಪಥ್ಯ-ಪೌಷ್ಟಿಕತೆ ಕುರಿತ “ಆಹಾರ ಮಂಥನ 2017′ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮಲ್ಲಿ ಹುಟ್ಟುವ ದ್ವೇಷ, ಕ್ರೋಧವೇ ಮೊದಲಾದ ಕೆಟ್ಟ ಚಿಂತನೆಗಳು ನಮ್ಮನ್ನು ಕೊಲ್ಲುತ್ತವೆ ಎಂದರು.

ಔಷಧದಿಂದಲೇ ಹೆಚ್ಚು ಸಾವು
ಪ್ರಪಂಚದಲ್ಲಿ ಅತಿ ಹೆಚ್ಚು ಸಾವು ಉಂಟಾಗುತ್ತಿರುವುದು ಔಷಧಿಗಳ ಅಡ್ಡಪರಿಣಾಮದಿಂದ. ಒಂದು ಔಷಧಿ ಅಡ್ಡಪರಿಣಾಮ ಗೊತ್ತಿರುತ್ತದೆ. ಒಂದಕ್ಕಿಂತ ಹೆಚ್ಚು ಔಷಧಿಗಳ ಅಡ್ಡಪರಿಣಾಮವನ್ನು ಅಧ್ಯಯನ ನಡೆಸಲು ಸಾಧ್ಯವಾಗಿಲ್ಲ. ಆದರೆ ಇದಾವುದನ್ನೂ ಮಾಧ್ಯಮಗಳು ಬೆಳಕುಚೆಲ್ಲುತ್ತಿಲ್ಲ. ಇದಕ್ಕೆ ಔಷಧಿ ಕಂಪೆನಿಗಳ ಲಾಬಿಯೇ ಕಾರಣ. ಸಮಗ್ರ ಚಿಕಿತ್ಸೆಯಾದ ಆಯುರ್ವೇದದಲ್ಲಿ ಮನಸ್ಸಿಗೆ ಚಿಕಿತ್ಸೆ ಕೊಡುವ “ಮೈಂಡೋಸ್ಕೋಪಿ’ ಕುರಿತು ಇನ್ನಷ್ಟು ಸಂಶೋಧನೆಗಳಾಗಬೇಕು ಎಂದರು. 

ಅಮೆರಿಕದಲ್ಲಿ ವೈದ್ಯಕೀಯ ಕೋರ್ಸ್‌ ಓದಿದ ಬಳಿಕ ಒಪಿಎಚ್‌ ಕೋರ್ಸ್‌ ನಲ್ಲಿ ಇತರ ವೈದ್ಯಕೀಯ ಪದ್ಧತಿಗಳ ಅಧ್ಯಯನ ನಡೆಯುತ್ತದೆ. ಆದರೆ ಇದರಲ್ಲಿ ಆಯುರ್ವೇದ ಸೇರಿಲ್ಲ. ಭಾರತ ಸರಕಾರ ಇದುವರೆಗೂ ಮಾನ್ಯತೆ ನೀಡದೇ ಇರುವುದು ಇದಕ್ಕೆ ಕಾರಣ. ಈಗ ಅದರ ಬಗ್ಗೆ ಪ್ರಯತ್ನ ನಡೆಯುತ್ತಿದೆ ಎಂದು ಡಾ| ಹೆಗ್ಡೆ ಹೇಳಿದರು. 

ಆರೋಗ್ಯವೆಂದರೇನು?
ಕೆಲಸ ಮಾಡಲು ಲವಲವಿಕೆ ಇದ್ದರೆ ಅದುವೇ ಆರೋಗ್ಯ. ಲವಲವಿಕೆ ಇಲ್ಲದಿದ್ದರೆ ಅನಾರೋಗ್ಯ. ಅನುಭವವನ್ನು ಅವಲೋಕನ ನಡೆಸಿ ಸಂಶೋಧಕರಾಗಬೇಕು ಎಂದು ಅವರು ಹೇಳಿದರು. 

ಪ್ರಾಂಶುಪಾಲ ಡಾ| ಶ್ರೀಕಾಂತ ಯು. ಅಧ್ಯಕ್ಷತೆ ವಹಿಸಿದ್ದರು. ವಿಚಾರ ಸಂಕಿರಣದ ಸಂಘಟನ ಕಾರ್ಯದರ್ಶಿ ಡಾ| ಬಿ.ಆರ್‌. ದೊಡ್ಡಮನಿ ಸ್ವಾಗತಿಸಿದರು. ಪ್ರಾಧ್ಯಾಪಕರಾದ ಡಾ| ರವೀಂದ್ರ ಅಂಗಡಿ, ಡಾ| ಅಮಲಾ ಕಾರ್ಯಕ್ರಮ ನಿರ್ವಹಿಸಿ ಡಾ| ವಿಜಯ ಬಿ. ನೆಗಲೂರ್‌ ವಂದಿಸಿದರು. 

ಮಧುಮೇಹವೂ ಕೃತಕ ಹಾಲೂ…
ಪ್ರಕೃತಿಯಲ್ಲಿ ಒಂದು ಪ್ರಾಣಿ ಇನ್ನೊಂದು ಪ್ರಾಣಿಯ ಹಾಲು ಕುಡಿಯುವುದಿಲ್ಲ. ಆದರೆ ಮನುಷ್ಯ ಮಾತ್ರ ದನದ ಹಾಲು ಕುಡಿಯುತ್ತಾನೆ. ಈಗೀಗ ದನಗಳಿಗೆ ಚುಚ್ಚುಮದ್ದು, ರಾಸಾಯನಿಕ ಆಹಾರಗಳನ್ನು ಕೊಟ್ಟ ಪರಿಣಾಮ ಅದರ ಹಾಲು ಕುಡಿದು ಮನುಷ್ಯನಿಗೆ ಅನಾರೋಗ್ಯ ಕಾಡುತ್ತಿದೆ. ಕಳೆದ ಕೆಲವು ವರ್ಷಗಳಿಂದ “ಬಿ’ ಮಧುಮೇಹ ಜಾಸ್ತಿಯಾಗಲು ಇದು ಕಾರಣ. ಹಾಲು ಕುಡಿಯುವುದಾದರೆ ದೇಸೀ ದನದ ಹಾಲು ಕುಡಿಯಿರಿ. ಹಾಲಿಗಿಂತಲೂ ತುಪ್ಪ ಶ್ರೇಷ್ಠ. ಆದರೆ ಪಶ್ಚಿಮದವರು ಇದರಿಂದ ಕೊಲೆಸ್ಟ್ರಾಲ್‌ ಹೆಚ್ಚುತ್ತದೆ ಎನ್ನುತ್ತಾರೆ. ಶೇ. 90 ಕೊಲೆಸ್ಟ್ರಾಲ್‌ ಉತ್ಪಾದನೆಯಾಗುವುದು ಲಿವರ್‌ನಲ್ಲಿ. “ನಿಮ್ಮ ಮನಸ್ಸು ನಿಮ್ಮದಲ್ಲ, ನೀವೇ ಮನಸ್ಸು’, “ಮಕ್ಕಳು ನಿಮ್ಮದಲ್ಲ, ನಿಮ್ಮ ಮೂಲಕ ಮಕ್ಕಳು’ ಎಂದು ಹೇಳುವ ಕ್ವಾಂಟಂ ಫಿಸಿಕ್ಸ್‌ ಸಿದ್ಧಾಂತ ಮನಸ್ಸಿಗೆ ಕೊಡಬೇಕಾದ ಮಹತ್ವಕ್ಕೆ ಪೂರಕವಾಗುತ್ತದೆ ಎಂದು ಡಾ| ಬಿ.ಎಂ.ಹೆಗ್ಡೆ ಹೇಳಿದರು.

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.