![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 2, 2023, 7:00 AM IST
ಉಡುಪಿ: ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಗ್ರಾಮೀಣ ಭಾಗದಲ್ಲಿ ವಾರಕ್ಕೆ 2 ಎರಡು ದಿನ ನೀರು ಪೂರೈಕೆಯೂ ಕಷ್ಟವಾಗುತ್ತಿದೆ. ನಗರ ಪ್ರದೇಶದ ಪರಿಸ್ಥಿತಿಯೂ ಭಿನ್ನವಾಗಿಲ್ಲ.
ಜಿಲ್ಲೆಯ 155 ಗ್ರಾ.ಪಂ.ಗಳಲ್ಲಿ 46 ಗ್ರಾ.ಪಂಗಳು ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಿಸುತ್ತಿವೆ. ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಅನುದಾನದ ಕೊರತೆಯಿಂದ ಕೆಲವು ಗ್ರಾ.ಪಂ.ಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ಪೂರೈಕೆಯೂ ಕಷ್ಟವಾಗುತ್ತಿದೆ.
ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸರಕಾರದಿಂದ ಅನುದಾನ ಬರುತ್ತಿಲ್ಲ. ಚುನಾವಣೆ ಹಿನ್ನೆಲೆಯಲ್ಲಿ ಬರಪೀಡಿತ ತಾಲೂಕುಗಳ ಘೋಷಣೆಯೂ ಆಗಿಲ್ಲ. ಹೀಗಾಗಿ ಗ್ರಾ.ಪಂ.ಗಳು ತಮ್ಮ ಸ್ವಂತ ನಿಧಿಯಲ್ಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಾದ ಅನಿವಾರ್ಯ ಸೃಷ್ಟಿಯಾಗಿದೆ.
ಬೋರ್ ಕೊರೆಯಲು ಅವಕಾಶ ಇಲ್ಲ
ಜಲ ಜೀವನ್ ಮಿಷನ್ ಅಡಿಯಲ್ಲಿ ಜಿಲ್ಲೆಯಲ್ಲಿ 31 ಬೋರ್ವೆಲ್ಗಳನ್ನು ಕೊರೆಯಲಾಗಿದೆ. ಅದರಲ್ಲಿ 28 ಫಲ ನೀಡಿದ್ದು, 3ರಲ್ಲಿ ನೀರು ಸಿಕ್ಕಿಲ್ಲ. ಈಗ ಹೊಸದಾಗಿ 148 ಬೋರ್ವೆಲ್ ಕೊರೆಯಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ನೀತಿಸಂಹಿತೆ ಹಿನ್ನೆಲೆಯಲ್ಲಿ ಅನುಮತಿ ಸಿಕ್ಕಿಲ್ಲ.
ಮೇ ಮೊದಲ ವಾರದೊಳಗೆ ಮಳೆ ಬಾರದೇ ಇದ್ದರೆ ಸಮಸ್ಯೆ ಇನ್ನಷ್ಟು ಉಲ್ಬಣಗೊಳ್ಳಲಿದೆ. ಉಡುಪಿ ನಗರದಲ್ಲೂ ನೀರಿನ ಸಮಸ್ಯೆ ದಿನೇದಿನೆ ಹೆಚ್ಚುತ್ತಿದೆ. ಎರಡು-ಮೂರು ದಿನಕ್ಕೆ ಒಮ್ಮೆ ನೀರು ಬಿಡಲಾಗುತ್ತಿದೆ. ಸ್ವರ್ಣಾ ನದಿಯ ಒಡಲು ಬರಿದಾಗುತ್ತಿದೆ. ಬಿಸಿಲಿನ ತಾಪವೂ ಹೆಚ್ಚಿರುವುದರಿಂದ ಅಣೆಕಟ್ಟು ಪ್ರದೇಶದಲ್ಲಿ ಶೇಖರಿಸಿರುವ ನೀರು ಹೆಚ್ಚಿನ ಪ್ರಮಾಣದಲ್ಲಿ ಆವೆಯಾಗುತ್ತಿವೆ. ಜಿಲ್ಲೆಯ ಕುಂದಾಪುರ, ಕಾರ್ಕಳ, ಬೈಂದೂರು ಹಾಗೂ ಕಾಪು ಭಾಗದಲ್ಲಿ ಸಮಸ್ಯೆ ಹೆಚ್ಚಿದೆ. ಎಲ್ಲದಕ್ಕೂ ಮಳೆಯೇ ಪರಿಹಾರ ಎಂಬಂತಾಗಿದೆ.
ನಿರ್ವಹಣೆ ಸವಾಲು
ರಾಜ್ಯ ಸರಕಾರದಿಂದ ಕುಡಿಯುವ ನೀರಿನ ನಿರ್ವಹಣೆಗೆ ಗ್ರಾ.ಪಂ.ಗಳಿಗೆ ಅನುದಾನ ಬಾರದೇ ಇರುವುದರಿಂದ ಸ್ವಂತ ಆದಾಯ ಕಡಿಮೆ ಇರುವ ಪಂಚಾಯತ್ಗಳು ಟ್ಯಾಂಕರ್ ನೀರು ಪೂರೈಕೆಗೆ ಕಷ್ಟಪಡುತ್ತಿವೆ. ಆದಾಯ ಚೆನ್ನಾಗಿರುವ ಗ್ರಾ.ಪಂ.ಗಳು ಹೇಗೂ ನಿರ್ವಹಣೆ ಮಾಡುತ್ತಿವೆ. ನೀರಿನ ಮೂಲವೇ ಬರಿದಾಗುತ್ತಿರುವುದರಿಂದ ನೀರು ಎಲ್ಲಿಂದ ಹೊಂದಿಸಿ ಮನೆ ಮನೆಗೆ ಒದಗಿಸುವುದು ಎಂಬ ಚಿಂತೆ ಬಹುತೇಕ ಗ್ರಾ.ಪಂ.ಗಳಲ್ಲಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.