“ನಿತ್ಯ ರಕ್ತ ಸ್ಪಂದನ’ಕ್ಕೆ ಚಾಲನೆ 5 ಸಾವಿರ ರಕ್ತದಾನಿಗಳ ನೋಂದಣಿ ಗುರಿ


Team Udayavani, Jul 12, 2017, 2:10 AM IST

blood.jpg

ಉಡುಪಿ: ಉಡುಪಿ ಜಿಲ್ಲಾ ನಾಗರಿಕ ಸಮಿತಿ ಮತ್ತು ಜೋಸ್‌ ಅಲುಕ್ಕಾಸ್‌ ಆಭರಣ ಮಳಿಗೆ ಇವರ ಜಂಟಿ ಆಶ್ರಯದಲ್ಲಿ ರಕ್ತ ಗುಂಪು ವಿಂಗಡಣೆ ಹಾಗೂ ತುರ್ತು ಸಂದರ್ಭಗಳಲ್ಲಿ ರಕ್ತದ ಆವಶ್ಯಕತೆ ಇದ್ದಾಗ ರಕ್ತ ಒದಗಿಸಲು ಸ್ವಯಂ ಪ್ರೇರಿತ ರಕ್ತದಾನಿಗಳಿಂದ ಹೆಸರು ನೋಂದಾಯಿಸುವ “ನಿತ್ಯ ರಕ್ತ ಸ್ಪಂದನ’ ಸಂಘಟನೆಗೆ ಚಿತ್ತರಂಜನ್‌ ಸರ್ಕಲ್‌ ಬಳಿ ಇರುವ ಜೋಸ್‌ ಅಲುಕ್ಕಾಸ್‌ ಆಭರಣ ಮಳಿಗೆಯಲ್ಲಿ ಚಾಲನೆ ನೀಡಲಾಯಿತು.

“ನಿತ್ಯ ರಕ್ತ ಸ್ಪಂದನೆ’ ಕಾರ್ಯಕ್ರಮದಡಿ ವರ್ಷಾಂತ್ಯದೊಳಗೆ 5 ಸಾವಿರ ರಕ್ತದಾನಿಗಳನ್ನು ನೋಂದಣಿ ಮಾಡುವ ಗುರಿ ಹೊಂದಲಾಗಿದೆ. ಈ ಮೂಲಕ ತುರ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ರಕ್ತದಾನ ಮಾಡಲಾಗುವುದು ಎಂದು ಸಮಾಜ ಸೇವಕ, ನಿತ್ಯ ರಕ್ತ ಸ್ಪಂದನೆ ಸಂಯೋಜಕ ನಿತ್ಯಾನಂದ ವಳಕಾಡು ಅವರು ಹೇಳಿದರು.

“ರಕ್ತ ಭಾಗ್ಯ ಕೊಡಿ’
ರಕ್ತದಾನ ಮಾಡಿದರೂ, ರಕ್ತ ಕೊಡುವವರಿಂದ ಸರಕಾರಿ ಆಸ್ಪತ್ರೆಯಲ್ಲಿ 1,550 ರೂ. ಹಣ ಪಡೆಯಲಾಗುತ್ತಿದೆ. ಹಿಂದೆ 700 ರೂ. ಇದ್ದಿತ್ತು. ಯಾವುದೇ ಕಾರಣಕ್ಕೂ ಈ ಹಣ ಪಡೆಯುವುದನ್ನು ನಿಲ್ಲಿಸಬೇಕು. ಅಗತ್ಯವಾಗಿ ಪಡೆಯಲೇ ಬೇಕಿದ್ದರೆ ಹಿಂದಿನ ದರವನ್ನೇ ನಿಗದಿಪಡಿಸಬೇಕು. ಸರಕಾರ ಎಲ್ಲ ಭಾಗ್ಯಗಳನ್ನೂ ಕೊಡುತ್ತಿರುವಂತೆ ಹಣ ಪಡೆಯುವುದನ್ನು ನಿಲ್ಲಿಸಿ ರಕ್ತ ಭಾಗ್ಯ ಕೊಡಬೇಕು. ರಕ್ತದಾನ ಶಿಬಿರಗಳಲ್ಲಿ ರಕ್ತದಾನ ಮಾಡಿದಾತ ಮತ್ತೆ 
ಆತನಿಗೇ ರಕ್ತ ಬೇಕಿದ್ದರೆ ಸಿಗುವುದಿಲ್ಲ. 

ಮತ್ತೆ ಆತನೂ ಹಣ ಕೊಟ್ಟು ರಕ್ತ ಪಡೆಯಬೇಕು. ಕೆಲ ಸಂದರ್ಭಗಳಲ್ಲಿ ಹಣ ಕೊಟ್ಟರೂ ಅವರ ಗುಂಪಿನ ರಕ್ತ ಸಿಗುವುದಿಲ್ಲ. ಈ ಕಾರಣದಿಂದ ರಕ್ತದಾನಿಗಳ ರಕ್ತದ ಗುಂಪಿನ ವರ್ಗೀಕರಣ ಮಾಡಿಕೊಂಡು ತುರ್ತು ಸಂದರ್ಭದಲ್ಲಿ ಅಗತ್ಯತೆ ಇರುವವರಿಗೆ ನಮ್ಮ ನಿತ್ಯ ರಕ್ತ ಸ್ಪಂದನ ಗುಂಪಿನ ಸದಸ್ಯರಿಂದಲೇ ರಕ್ತದಾನ ಮಾಡಿಸಲಾಗುವುದು ಎಂದು ವಳಕಾಡು ತಿಳಿಸಿದರು.

“ಪರೀಕ್ಷೆಗಾಗಿ ಹಣ’
ಜಿಲ್ಲಾ ಸರ್ಜನ್‌ ಡಾ| ಮಧುಸೂದನ್‌ ನಾಯಕ್‌ ಅವರು ಸಂಘಟನೆಗೆ ಚಾಲನೆಯನ್ನು ನೀಡಿ ಮಾತನಾಡಿ ರಕ್ತದಾನಿಗಳು ರಕ್ತ ಕೊಟ್ಟರೂ, ರಕ್ತ ಪಡೆದವರಿಂದ ಹಣ ಪಡೆಯುವುದು ಅದು ಅತ್ಯುನ್ನತ ಮಟ್ಟದ ರಕ್ತ ಪರೀಕ್ಷೆ ನಡೆಸಲು. ರಕ್ತದಲ್ಲಿ ದೋಷವಿದ್ದರೆ ಅದನ್ನು ಯಾರಿಗೂ ಕೊಡಲು ಬರುವುದಿಲ್ಲ. ಹಾಗಾಗಿ ರಕ್ತ ಪಡೆದ ಅನಂತರ ಅದನ್ನು ಸೂಕ್ಷ್ಮವಾಗಿ ಪರೀಕ್ಷಿಸಲಾಗುತ್ತದೆ. ಇದಕ್ಕಾಗಿ ಸರಕಾರದ ಸುತ್ತೋಲೆಂತೆಯೇ ಹಣ ಪಡೆಯಲಾಗುತ್ತಿದೆ. ಬಿಪಿಎಲ್‌ ಕಾರ್ಡುದಾರರಿಗೆ ಉಚಿತವಾಗಿ ನೀಡಲಾಗುತ್ತಿದೆ ಎಂದು ಹೇಳಿದ ಅವರು, ರಕ್ತದಾನ ಶಿಬಿರಗಳನ್ನು ನಡೆಸಿ ಆಸ್ಪತ್ರೆಯಲ್ಲಿ ಹೆಚ್ಚುವರಿ ರಕ್ತವನ್ನು ಸಂಗ್ರಸಿಡುವುದಕ್ಕಿಂತಲೂ ಅಗತ್ಯವಾಗಿರುವ ರಕ್ತವನ್ನು ದಾನಿಗಳಿಂದ ತತ್‌ಕ್ಷಣ ಪಡೆದು ರೋಗಿಗಳಿಗೆ ನೀಡುವುದು ಸರಿಯಾದ ಕ್ರಮ ಎಂದರು.

ಮಹಾಲಕ್ಷ್ಮೀ ಕೋ-ಆಪರೇಟಿವ್‌ ಸೊಸೈಟಿಯ ಮ್ಯಾನೇಜರ್‌ ರತ್ನಾ ಎಸ್‌. ಬಂಗೇರ, ಅಮೃತ್‌ ಲ್ಯಾಬೊರೇಟರಿಯ ಎ. ರಾಘವೇಂದ್ರ ಕಿಣಿ, ಜೋಸ್‌ ಅಲುಕ್ಕಾಸ್‌ ಮಳಿಗೆಯ ಮ್ಯಾನೇಜರ್‌ ಫ್ರೆಡ್‌ ಆ್ಯಂಟೋನಿ ಉಪಸ್ಥಿತರಿದ್ದರು. 
ತೃಷಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಜೋಸ್‌ ಅಲುಕ್ಕಾಸ್‌ ಸಂಸ್ಥೆಯ 34 ಮಂದಿ ಸಿಬಂದಿ ಸ್ಪಯಂಪ್ರೇರಿತ ರಕ್ತದಾನಕ್ಕೆ ಹೆಸರು ನೋಂದಾಯಿಸಿದರು. ಈ ಪಟ್ಟಿಯನ್ನು ನಿತ್ಯಾನಂದ ವಳಕಾಡು ಅವರು ಸರ್ಜನ್‌ ಡಾ| ಮಧುಸೂದನ ನಾಯಕ್‌ ಅವರಿಗೆ ಹಸ್ತಾಂತರಿಸಿದರು.

ಟಾಪ್ ನ್ಯೂಸ್

Tragedy: ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳು ಸೇರಿ ಒಂದೇ ಕುಟುಂಬದ ಐವರ ಶವ ಪತ್ತೆ…

Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ

2-bng

Bengaluru: ಹೂಡಿಕೆ ನೆಪದಲ್ಲಿ 6 ಕೋಟಿ ವಂಚನೆ: 10 ಜನ ಸೆರೆ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

HD-Kumaraswamy

Congress Government: ಪೊಲೀಸ್‌ ಅಧಿಕಾರಿಗಳ ವಿರುದ್ಧ ಇಂದು ಎಚ್‌ಡಿಕೆ ದಾಖಲೆ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Tragedy: ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳು ಸೇರಿ ಒಂದೇ ಕುಟುಂಬದ ಐವರ ಶವ ಪತ್ತೆ…

Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ

2-bng

Bengaluru: ಹೂಡಿಕೆ ನೆಪದಲ್ಲಿ 6 ಕೋಟಿ ವಂಚನೆ: 10 ಜನ ಸೆರೆ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.