ಕಳಪೆ ಕಾಮಗಾರಿ: ಹದಗೆಟ್ಟ ಅಂಪಾರು – ಕ್ರೋಢಬೈಲೂರು ರಸ್ತೆ


Team Udayavani, Jul 4, 2018, 2:05 AM IST

amparu-road-3-7.jpg

ಕ್ರೋಢಬೈಲೂರು: ಕ್ರೋಢ ಬೈಲೂರಿಗೆ ಸಂಪರ್ಕ ಕಲ್ಪಿಸುವ ಅಂಪಾರು – ಹೊಸೂರು – ಕ್ರೋಢ ಬೈಲೂರು ರಸ್ತೆ ಹಾಗೂ ಶಾನ್ಕಟ್ಟು – ಕೊಂಡಳ್ಳಿ – ಕ್ರೋಢಬೈಲೂರು ರಸ್ತೆ ಕಳಪೆ ಕಾಮಗಾರಿಯಿಂದಾಗಿ ಸಂಪೂರ್ಣ ಹದಗೆಟ್ಟು ಹೋಗಿದ್ದು, ಇದರಿಂದ ಈ ಭಾಗದಲ್ಲಿ ನಿತ್ಯ ಸಂಚರಿಸುವ ನೂರಾರು ಮಂದಿ ತೊಂದರೆ ಅನುಭವಿಸುತ್ತಿದ್ದಾರೆ. ಶಾನ್ಕಟ್ಟು ಮಾರ್ಗವಾಗಿ ಕೊಂಡಳ್ಳಿ ಮೂಲಕ ಕ್ರೋಢಬೈಲೂರಿಗೆ 6 ಕಿ.ಮೀ. ಅಂತರವಿದ್ದರೆ, ಅಂಪಾರು ಮಾರ್ಗವಾಗಿ ಹೊಸೂರು ಮೂಲಕ ಕ್ರೋಢಬೈಲೂರಿಗೆ ಕೇವಲ 2 ಕಿ.ಮೀ. ದೂರವಿದೆ. ಆದರೆ ವಿಪರ್ಯಾಸವೆಂದರೆ ಈ ಎರಡೂ ರಸ್ತೆಗಳಲ್ಲಿ ಈಗ ಹೊಂಡ – ಗುಂಡಿಗಳದ್ದೇ ಕಾರುಬಾರು.

ಕಳಪೆ ಕಾಮಗಾರಿ
ಅಂಪಾರು – ಕ್ರೋಢ ಬೈಲೂರು ರಸ್ತೆಯು ಕಳಪೆ ಕಾಮಗಾರಿಯಿಂದಾಗಿ ಡಾಮರೀಕರಣಗೊಂಡ ಅತ್ಯಲ್ಪ ಸಮಯದಲ್ಲೇ ತೀವ್ರ ಹದಗೆಟ್ಟು ಹೋಗಿದೆ. ಈ ರಸ್ತೆಯ 500 ಮೀಟರ್‌ನಷ್ಟು ದೂರ ಇನ್ನೂ ಕೂಡ ಡಾಮರೀಕರಣ ಆಗಿಲ್ಲ. ಬಾಕಿ ಉಳಿದ ಭಾಗ ಡಾಮರೀಕರಣಗೊಂಡ 2 ವರ್ಷಗಳಷ್ಟೇ ಆಗಿದೆ. ಇನ್ನೂ ಶಾನ್ಕಟ್ಟು ಕೊಂಡಳ್ಳಿ – ಕ್ರೋಢಬೈಲೂರು ರಸ್ತೆ ದುರಸ್ತಿಯಾಗದೇ 4-5 ವರ್ಷಗಳೇ ಆಗಿವೆ. ಈ ಭಾಗದಿಂದ ಅನೇಕ ಮಂದಿ ವಿದ್ಯಾರ್ಥಿಗಳು ಸೇರಿದಂತೆ ಕೆಲಸಕ್ಕಾಗಿ ಶಂಕರನಾರಾಯಣ ಕಡೆಗೆ ಸಂಚರಿಸುತ್ತಾರೆ. ಪ್ರತಿ ದಿನ ಕ್ರೋಢಬೈಲೂರಿಗೆ 1 ಸರಕಾರಿ ಹಾಗೂ 2 ಖಾಸಗಿ ಬಸ್‌ಗಳು ಈ ಹೊಂಡ – ಗುಂಡಿಗಳ ರಸ್ತೆಯಲ್ಲಿಯೇ ನಿತ್ಯ 5 ಟ್ರಿಪ್‌ ನಲ್ಲಿ ಸಂಚರಿಸುತ್ತವೆ.


ಬಂದ ಅನುದಾನ ಬೇರೆ ರಸ್ತೆಗೆ?

ಅಂಪಾರು- ಕ್ರೋಢಬೈಲೂರು ರಸ್ತೆ ಅಭಿವೃದ್ಧಿಗೆ 2 ಕೋಟಿ ರೂಪಾಯಿ ಅನುದಾನ ಬಂದಿದ್ದರೂ, ಅದನ್ನು ಈ ರಸ್ತೆಗೆ ಬಳಸದೇ ಬೇರೆ ರಸ್ತೆಗೆ ನೀಡಿ, ಈ ಭಾಗಕ್ಕೆ ವಂಚಿಸಿದ್ದಾರೆ ಎನ್ನುವ ಆರೋಪ ಕ್ರೋಢಬೈಲೂರು ನಾಗರಿಕರದು.

ಸಂಚಾರವೇ ದುಸ್ತರ
ಈ ರಸ್ತೆಯಲ್ಲಿ ದಿನಂಪ್ರತಿ ನೂರಾರು ವಾಹನಗಳು ಸಂಚರಿಸುತ್ತವೆ. ಈಗ ಹೊಂಡ – ಗುಂಡಿಗಳಿಂದಾಗಿ ಸಂಚರಿಸಲು ಸಾಧ್ಯವೇ ಇಲ್ಲದಂತಾಗಿದೆ. ಶೀಘ್ರ ಸಂಬಂಧಪಟ್ಟವರು ದುರಸ್ತಿಪಡಿಸಲು ಮುಂದಾಗಲಿ. 
– ಭುಜಂಗ ಶೆಟ್ಟಿ, ಕ್ರೋಢಬೈಲೂರು

ದೂರಿತ್ತರೂ ಪ್ರಯೋಜನವಿಲ್ಲ
ಶಾನ್ಕಟ್ಟು – ಕೊಂಡಳ್ಳಿ- ಕ್ರೋಢಬೈಲೂರು ರಸ್ತೆಯು ಕಳಪೆ ಕಾಮಗಾರಿಯಿಂದಾಗಿ ತೀರಾ ಹದಗೆಟ್ಟು ಹೋಗಿದೆ. ಈ ಕುರಿತು ಜನಪ್ರತಿನಿಧಿಗಳಿಗೆ ದೂರು ನೀಡಿದರೂ, ಅವರದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಈ ರಸ್ತೆ ದುರಸ್ತಿಯಾಗದೇ 4-5 ವರ್ಷಗಳೇ ಕಳೆದಿವೆ. 
– ಚಂದ್ರಶೇಖರ ಶೆಟ್ಟಿ, ಕೊಂಡಳ್ಳಿ 

ರಸ್ತೆ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಕೆ
ಅಂಪಾರು- ಕ್ರೋಢಬೈಲೂರು ರಸ್ತೆ ಡಾಮರಾಗಿದ್ದರೂ, ಇಲ್ಲಿ ರಸ್ತೆ ಬದಿ ಮರಗಳೆಲ್ಲ ಹೆಚ್ಚಾಗಿರುವುದಿರಿಂದ ನೀರು ರಸ್ತೆಗೆ ಬಿದ್ದು ಹಾಳಾಗುತ್ತಿದೆ. ಇನ್ನೂ ಶಂಕರನಾರಾಯಣ ಗ್ರಾ.ಪಂ. ವ್ಯಾಪ್ತಿಯಲ್ಲಿ ಡಾಮರಾಗಿದೆ.ಆದರೆ ಅಂಪಾರು ಗ್ರಾ.ಪಂ. ವಾಪ್ತಿಯಲ್ಲಿ ಡಾಮರೇ ಆಗಿಲ್ಲ. ಈ ರಸ್ತೆಯ ಕಾಂಕ್ರಿಟೀಕರಣಕ್ಕೆ ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಬೇರೆ ಯಾವ ಅನುದಾನವೂ ಬಂದಿಲ್ಲ. 
– ಸದಾಶಿವ ಶೆಟ್ಟಿ, ಶಂಕರನಾರಾಯಣ ಗ್ರಾ.ಪಂ. ಅಧ್ಯಕ್ಷರು

— ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.