ಘೋಷಣೆಗಷ್ಟೇ ಬಾಕಿ ಪರಿಸರ ಸೂಕ್ಷ್ಮ ಪ್ರದೇಶ


Team Udayavani, Dec 12, 2019, 5:54 AM IST

sx-39

ಸದ್ದಿಲ್ಲದೆ ನಡೆದಿದೆ ಯೋಜನೆ ಕಾರ್ಯಸೂಚಿ | ಆಕ್ಷೇಪಣೆಗೆ ಈ ತಿಂಗಳ ಕೊನೆಯೇ ಗಡುವು
ಪಟ್ಟಿಯಲ್ಲಿವೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಸೋಮೇಶ್ವರ ಅಭಯಾರಣ್ಯ

ಕುಂದಾಪುರ: ಕೊಲ್ಲೂರು ಮೂಕಾಂಬಿಕಾ ಅಭಯಾರಣ್ಯ ಪ್ರದೇಶ ಪರಿಸರ ಸೂಕ್ಷ್ಮ ವಲಯ ಎಂದು ಘೋಷಣೆಯಾಗಿ ಎರಡು ವರ್ಷಗಳಾಗುತ್ತಾ ಬಂದಿದ್ದು, ಒಂದೆರಡು ತಿಂಗಳುಗಳಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಮತ್ತು ಸೋಮೇಶ್ವರ ಅಭಯಾರಣ್ಯ ಕೂಡ ಇದೇ ಪಟ್ಟಿಗೆ ಸೇರಲಿವೆ.

ಪರಿಸರ ಸೂಕ್ಷ್ಮ ವಲಯಗಳ ಘೋಷಣೆಗೆ ಸಂಬಂಧಿಸಿ 2006ರ ಡಿಸೆಂಬರ್‌ನಲ್ಲಿಯೇ ರಾಜ್ಯಗಳಿಗೆ ಸೂಚನೆ ನೀಡಲಾಗಿದ್ದರೂ ಕರ್ನಾಟಕ ಹಲವಾರು ರಾಜ್ಯಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ನ್ಯಾಯಾಲಯದ ಆದೇಶದ ಬಳಿಕ ದಿಢೀರ್‌ ಎಚ್ಚೆತ್ತಿದ್ದು, ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಮತ್ತು ಸೋಮೇಶ್ವರ ಅಭಯಾರಣ್ಯವನ್ನು ಇಎಸ್‌ರkುಡ್‌ (ಇಕೊ ಸೆನ್ಸಿಟಿವ್‌ ಝೋನ್‌) ಆಗಿ ಘೋಷಿಸಲು ಮುಂದಾಗಿದೆ. ಯಾವೆಲ್ಲ ಪ್ರದೇಶಗಳನ್ನು ಒಳಗೊಳ್ಳಲಿದೆ ಎಂಬ ನಕ್ಷೆಗಳನ್ನು ರಾಜ್ಯ ಅರಣ್ಯ ಇಲಾಖೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಆಕ್ಷೇಪಣೆ ಸಲ್ಲಿಸಲು ಇರುವ 60 ದಿನಗಳ ಕಾಲಾವಕಾಶ ಡಿಸೆಂಬರ್‌ ಅಂತ್ಯಕ್ಕೆ ಕೊನೆಗೊಳ್ಳಲಿದೆ. ಜನವರಿಯಲ್ಲಿ ಈ ಕುರಿತ ಸಭೆ ನಡೆದು ಅಧಿಸೂಚನೆ ಹೊರಬರಲಿದೆ. 2018ರ ಡಿ.11ರಂದು ಸುಪ್ರೀಂ ಕೋರ್ಟ್‌ ದೇಶದ 21 ರಾಷ್ಟ್ರೀಯ ಉದ್ಯಾನಗಳು ಮತ್ತು ವನ್ಯಜೀವಿ ಧಾಮಗಳ ಸುತ್ತಲಿನ 10 ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಲು ಸೂಚನೆ ನೀಡಿತ್ತು.

ಕೊಲ್ಲೂರು
ಕೊಲ್ಲೂರಿನ ಮೂಕಾಂಬಿಕಾ ಅಭಯಾರಣ್ಯವನ್ನು 2015ರಲ್ಲಿ ಪ್ರಕ್ರಿಯೆ ಆರಂಭಿಸಿ 2017ರ ಎಪ್ರಿಲ್‌ನಲ್ಲಿ ಪ.ಸೂ. ವಲಯವಾಗಿ ಘೋಷಿಸಲಾಗಿದೆ. ಶಿವಮೊಗ್ಗ, ಉಡುಪಿ ಜಿಲ್ಲೆಯ ಒಟ್ಟು 37 ಗ್ರಾಮಗಳು ಇದರ ವ್ಯಾಪ್ತಿಯಲ್ಲಿವೆ. ಕುಂದಾಪುರ ತಾಲೂಕಿನ ಹೊಸಂಗಡಿ, ಮಚ್ಚಟ್ಟು, ಉಳ್ಳೂರು, ಸಿದ್ದಾಪುರ, ಯಡಮೊಗೆ, ಹಳ್ಳಿಹೊಳೆ, ಬೆಳ್ಳಾಲ, ಆಜ್ರಿ, ಕೊಡ್ಲಾಡಿ, ಕರ್ಕುಂಜೆ, ಚಿತ್ತೂರು, ವಂಡ್ಸೆ, ನೂಜಾಡಿ, ಹಕೂìರು, ಆಲೂರು, ಕಾಲೊ¤àಡು, ನಾವುಂದ, ಗೋಳಿಹೊಳೆ, ಜಡ್ಕಲ್‌, ಕೊಲ್ಲೂರು, ಯಳಜಿತ್‌, ನುಕ್ಯಾಡಿ, ಹೊಸೂರು, ಮೂಡಿನಗದ್ದೆ ಗ್ರಾಮಗಳು ಸೇರಿವೆ.

ಏನಿದು ಸೂಕ್ಷ್ಮ ವಲಯ?
ಅರಣ್ಯ ಸಂರಕ್ಷಣೆಗೆ, ಅರಣ್ಯದ ಸುತ್ತ ನಡೆಯುವ ಅನಪೇಕ್ಷಿತ ಚಟುವಟಿಕೆಗಳ ತಡೆಗಾಗಿ
ಕೇಂದ್ರ ಸರಕಾರದ ಪರಿಸರ, ಅರಣ್ಯ ಇಲಾಖೆಯಿಂದ ಸೂಕ್ಷ್ಮ ವಲಯ ಘೋಷಣೆಯಾಗುತ್ತದೆ. ಅರಣ್ಯ ಪ್ರದೇಶದ 10 ಕಿ.ಮೀ. ಸುತ್ತಳತೆಯ ಪ್ರದೇಶಗಳ ಚಟುವಟಿಕೆಗಳು ಅರಣ್ಯ ಇಲಾಖೆ ನಿಯಂತ್ರಣಕ್ಕೆ ಒಳಪಡುತ್ತವೆ.

ಏನೆಲ್ಲ ನಿರ್ಬಂಧಗಳು?
ಘೋಷಿತ ಪ್ರದೇಶದ 10 ಕಿ.ಮೀ. ವ್ಯಾಪ್ತಿಯಲ್ಲಿ ರೆಸಾರ್ಟ್‌, ಹೊಟೇಲ್‌ ತೆರೆಯುವಂತಿಲ್ಲ. ಗಣಿಗಾರಿಕೆ, ಕೈಗಾರಿಕೆ, ಬೃಹತ್‌ ಜಲವಿದ್ಯುತ್‌ ಸ್ಥಾವರ, ಅಪಾಯಕಾರಿ ವಸ್ತುಗಳ ಉತ್ಪಾದನ ಘಟಕ, ಘನ, ದ್ರವ ತ್ಯಾಜ್ಯ ಘಟಕ, ಬೃಹತ್‌ ಪ್ರಮಾಣದ ಆಹಾರ ತಯಾರಿ ಘಟಕ, ಕೋಳಿಫಾರಂ ಘಟಕ, ಮರದ ಮಿಲ್ಲು, ಗಾಳಿಯಂತ್ರ ಸ್ಥಾಪನೆ, ಇಟ್ಟಿಗೆ ಶೋಧನೆ, ಕಟ್ಟಡ ನಿರ್ಮಾಣ ನಿಷೇಧವಾಗುತ್ತದೆ. ಕಾಡುತ್ಪತ್ತಿ ಸಂಗ್ರಹ, ವಿದ್ಯುದೀಕರಣ, ರಸ್ತೆ ಅಭಿವೃದ್ಧಿ ಇತ್ಯಾದಿ ಶರತ್ತಿನಲ್ಲಿ ಮಾಡಬಹುದಾಗಿದೆ. ಶಬ್ದ ಮಾಲಿನ್ಯ, ವಾಯು ಮಾಲಿನ್ಯದ ಚಟುವಟಿಕೆ ನಡೆಸುವಂತಿಲ್ಲ.

ಆತಂಕ
ಮನೆಗಳಿಗೆ, ಕೃಷಿ ಪಂಪ್‌ಸೆಟ್‌ಗೆ ವಿದ್ಯುದೀ ಕರಣವಾಗಬೇಕಾದರೆ ಭೂಮಿಯಡಿ ಕೇಬಲ್‌ ಹಾಕಿದರೆ ಮಾತ್ರ ಅವಕಾಶ. ಕೃಷಿ ಚಟುವಟಿಕೆಗೆ ರಾಸಾಯನಿಕ ಬಳಕೆಗೂ ನಿಷೇಧವಿದೆ. ಸಾವಯವ ಕೃಷಿಗೆ ಮಾತ್ರ ಅವಕಾಶ. ರಸ್ತೆ ಡಾಮರೀಕರಣ ಕಷ್ಟ. ಕೃಷಿಭೂಮಿಯನ್ನು ವಾಣಿಜ್ಯ ಉದ್ದೇಶಕ್ಕೆ ಪರಿವರ್ತಿಸುವಂತಿಲ್ಲ. ಪರಿಣಾಮವಾಗಿ ಭೂಮಿಯ ಬೆಲೆ ಇಳಿಯುತ್ತದೆ. ಈ ಭಾಗದ ಅನೇಕ ಪ್ರದೇಶಗಳಲ್ಲಿ ಕಸ್ತೂರಿರಂಗನ್‌ ವರದಿ ಪರಿಣಾಮವೂ ಇರಲಿದ್ದು, ಅದು ಜಾರಿಯಾದಾಗಲೂ ಇಂಥವೇ ಪರಿಣಾಮಗಳು ಆಗಲಿವೆ.

ಅಭಿವೃದ್ಧಿಯ ಮೇಲೆ ಪರಿಣಾಮ
ಇದು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಲಿದೆ. ಕೃಷಿ ಮಾಡದ, ನಿರುಪಯುಕ್ತ ಭೂಮಿಯಲ್ಲಿ ಅರಣ್ಯ ಬೆಳೆಸಬೇಕಾಗುತ್ತದೆ. ಇದರಿಂದಾಗಿ ವಲಯದ ವ್ಯಾಪ್ತಿಯನ್ನು ಒಂದು ಕಿ.ಮೀ.ಗೆ ಇಳಿಸಬೇಕು ಎಂದು ಬಲವಾದ ಕೂಗು ಇದೆ. ಕೊಲ್ಲೂರಿನಲ್ಲಿ 10.8 ಕಿ.ಮೀ. ವಿಸ್ತಾರಕ್ಕೆ ನಿಷೇಧ ಜಾರಿಯಾಗಿದೆ. ಹೊಟೇಲ್‌, ರೆಸಾರ್ಟ್‌ನಂತಹ ಸ್ಥಾಪನೆಗೆ 1 ಕಿ.ಮೀ. ಮಿತಿ ಹೇರಲಾಗಿದೆ. ವಾಹನಗಳ ಓಡಾಟಕ್ಕೆ ನಿಯಂತ್ರಣ ಬೀಳಲಿದೆ.

ಆಕ್ಷೇಪಣೆಗೆ ಕಾಲಾವಕಾಶ ನೀಡಿದ್ದು, ಅವಧಿ ಮುಗಿದ ಬಳಿಕ ಸಮಿತಿ ಸಭೆ ನಡೆಸಿ ಅನಂತರ ಘೋಷಣೆ ಜಾರಿಯಾಗಲಿದೆ. 10 ಕಿ.ಮೀ. ಮಿತಿಯನ್ನು 1 ಕಿ.ಮೀ.ಗೆ
ಇಳಿಸಬೇಕು ಎಂದು ಜನರ ಬೇಡಿಕೆಯಿದೆ.
– ಜಯಪ್ರಕಾಶ್‌ ಹೆಗ್ಡೆ, ಮಾಜಿ ಸಂಸದರು

ಮುಖ್ಯಮಂತ್ರಿಗಳು, ಸಂಸದರ ಜತೆ ಸೇರಿ 10 ಕಿ.ಮೀ. ಮಿತಿಯನ್ನು 1 ಕಿ.ಮೀ.ಗೆ ಇಳಿಸಲು ಪ್ರಯತ್ನಿಸಲಾಗುವುದು.
-ಬಿ.ಎಂ. ಸುಕುಮಾರ ಶೆಟ್ಟಿ, ಬೈಂದೂರು ಶಾಸಕರು

 ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.