72ರ ಹರೆಯದಲ್ಲಿಯೂ ಕೃಷಿ, ಹೈನುಗಾರಿಕೆಯಲ್ಲಿ ಇತರರಿಗೆ ಮಾದರಿ

ಕಣಜಾರಿನ ಅಂತೋನಿ ನಜರತ್‌ ಸಾಧನೆ

Team Udayavani, Dec 26, 2019, 5:06 AM IST

2412AJKE05

ನಾವು ಅದೆಷ್ಟು ಆಧುನಿಕಗೊಂಡರೂ ಉಣ್ಣುವ ಅನ್ನವನ್ನು ಸೃಷ್ಟಿಸಲಾರೆವು; ಆದ್ದರಿಂದಲೇ ಭೂಮಿಯ ಜತೆಗೆ ಒಡನಾಡುವ ಕೃಷಿಗೆ ಮಹತ್ವದ ಸ್ಥಾನ. ಇದೇ ಹಿನ್ನೆಲೆಯಲ್ಲಿ ಉದಯವಾಣಿಯು ಕಿಸಾನ್‌ ದಿನಾಚರಣೆಯ ಸಂದರ್ಭ ರೈತರ ಸಾಧನೆಯ ಚಿತ್ರಣ ನೀಡುವ “ಕೃಷಿ ಕಥನ’ವನ್ನು ಆರಂಭಿಸಿದೆ. ಈ ಹೊಸ ಸರಣಿಯು ಇನ್ನಷ್ಟು ಮಂದಿಗೆ ಪ್ರೇರಣೆಯಾಗಲೆಂದು ಸರಕಾರದಿಂದ ಪ್ರಶಸ್ತಿ ಪುರಸ್ಕಾರಗಳಿಂದ ಗುರುತಿಸಲ್ಪಟ್ಟ ರೈತರನ್ನು ಪರಿಚಯಿಸುವ ಪ್ರಯತ್ನ.

ಅಜೆಕಾರು: ಕೃಷಿಗೆ ಪೂರಕವಾಗಿ ಹೈನುಗಾರಿಕೆ ಇತ್ತೀಚಿನ ದಿನಗಳಲ್ಲಿ ಬೃಹತ್‌ ಮಟ್ಟದಲ್ಲಿ ಬೆಳೆಯುತ್ತಿದೆ. ಕೃಷಿಯ ಜತೆಗೆ ಹೈನುಗಾರಿಕೆ ಮಾಡುವುದರಿಂದ ಕೃಷಿಗೆ ಸಾವಯವ ಗೊಬ್ಬರ ದೊರಕುವುದಲ್ಲದೆ ಹಾಲಿನಿಂದ ಉತ್ತಮ ಲಾಭವನ್ನು ಪಡೆಯಬಹುದಾಗಿದೆ ಎಂಬುದನ್ನು 2 ದಶಕಗಳ ಹಿಂದೆಯೇ ಮನವರಿಕೆ ಮಾಡಿಕೊಂಡ ಕಣಜಾರುವಿನ ಅಂತೋನಿ ನಜರತ್‌ ಅವರು ಹೈನುಗಾರಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಪ್ರಗತಿಪರ ಕೃಷಿಕರಾಗಿ ಇತರ ಕೃಷಿಕರಿಗೆ ಮಾದರಿಯಾಗಿದ್ದಾರೆ.

ತಮ್ಮ 72ರ ಪ್ರಾಯದಲ್ಲಿಯೂ ಸುಮಾರು 25 ದನಗಳನ್ನು ಸಾಕುವ ಜತೆಗೆ 1 ಎಕ್ರೆ ಪ್ರದೇಶದಲ್ಲಿ ಭತ್ತ ಬೆಳೆದು ಮಾದರಿ ಕೃಷಿಕರಾಗಿದ್ದಾರೆ. ಸುಮಾರು 5 ಎಕ್ರೆ ಕೃಷಿ ಭೂಮಿಯನ್ನು ಹೊಂದಿರುವ ಇವರು 1 ಎಕ್ರೆ ಪ್ರದೇಶದಲ್ಲಿ ಅಡಿಕೆ, ಇತರ ಪ್ರದೇಶದಲ್ಲಿ ತೆಂಗು, ತರಕಾರಿ, ಮಲ್ಲಿಗೆ ಬೆಳೆದು ಪ್ರಗತಿಪರ ಕೃಷಿಕರಾಗಿ ದುಡಿಯುತ್ತಿದ್ದು 2017ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಉತ್ತಮ ಕೃಷಿಕ ಪ್ರಶಸ್ತಿ ಪಡೆದುಕೊಂಡಿದ್ದಾರೆ.

25 ಕ್ವಿಂಟಾಲ್‌ ಭತ್ತ
ಎಕರೆಗೆ ಸುಮಾರು 25 ಕ್ವಿಂಟಾಲ್‌ ಭತ್ತದ ಫ‌ಸಲು ಪಡೆಯುವ ಇವರು ಭತ್ತದ ಕೃಷಿಯಿಂದಲೂ ಸಾಕಷ್ಟು ಲಾಭ ಗಳಿಸಬಹುದು ಎಂದು ತೋರಿಸಿಕೊಟ್ಟಿದ್ದಾರೆ.

ಅಲ್ಲದೆ ವಿವಿಧ ತರಕಾರಿಗಳಾದ ಬೆಂಡೆ, ಅಲಸಂಡೆ, ಹೀರೆ, ಬಸಳೆ, ತೊಂಡೆ ಬೆಳೆದು ಲಾಭ ಪಡೆಯುತ್ತಿದ್ದಾರೆ. ಅಡಿಕೆ, ತೆಂಗು, ಮಲ್ಲಿಗೆ ಕೃಷಿಯಿಂದಲೂ ಲಾಭ ಗಳಿಸುತ್ತಿದ್ದಾರೆ.

ಹಟ್ಟಿ ಗೊಬ್ಬರವನ್ನು ಕೃಷಿಗೆ ಉಪಯೋಗಿಸುತ್ತಿದ್ದು ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ.

ವಿನೂತನ ಕೃಷಿ ಪದ್ಧತಿ
ತಂದೆ ಲೂಯಿಸ್‌ ನಜರತ್‌ ಕಾಲದಿಂದಲೂ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಇವರು ಅನಂತರದ ದಿನಗಳಲ್ಲಿ ವಿದೇಶದಲ್ಲಿ ದುಡಿದು 2 ದಶಕಗಳಿಂದ ತಮ್ಮ ಕೃಷಿ ಭೂಮಿಯಲ್ಲಿ ವಿನೂತನ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡಿದ್ದಾರೆ.

ಸಾವಯವ ಕೃಷಿ ಉತ್ತಮ
ಅವರು ಹೆಚ್ಚಾಗಿ ಕೃಷಿಗೆ ಹಸುರೆಲೆ, ಹಟ್ಟಿ ಗೊಬ್ಬರ, ಸುಡುಮಣ್ಣುಗಳನ್ನೇ ಹೆಚ್ಚಾಗಿ ಬಳಸುತ್ತಿದ್ದು ಸಾವಯವ ಕೃಷಿ ಉತ್ತಮ ಎಂದು ಹೇಳುತ್ತಾರೆ. ಪ್ರತಿಯೋರ್ವ ಕೃಷಿಕರು ಮಿಶ್ರಬೆಳೆ ಜತೆಗೆ ಹೈನುಗಾರಿಕೆ, ಆಡು, ಕೋಳಿ ಸಾಕಣೆ ಮಾಡಿದಲ್ಲಿ ಹೆಚ್ಚಿನ ಲಾಭವನ್ನು ಪಡೆಯಬಹುದಾಗಿದ್ದು, ಒಂದೇ ಕೃಷಿಯನ್ನು ಅವಲಂಬಿಸಿದರೆ ನಷ್ಟ ಸಂಭವಿಸಲಿದೆ ಎಂಬುದು ಅವರ ಅಭಿಪ್ರಾಯ.

ಪತ್ನಿ, ಮಕ್ಕಳ ಸಹಕಾರ
ಪತ್ನಿ ಸೆಲೇನಾ ನಜರತ್‌ ಹಾಗೂ ಇಬ್ಬರು ಮಕ್ಕಳು ಇವರ ಕೃಷಿ ಕಾರ್ಯಕ್ಕೆ ನಿರಂತರ ಸಹಕಾರ ನೀಡುತ್ತಿದ್ದಾರೆ. ಇವರಿಗೆ ಜಿಲ್ಲಾ ಉತ್ತಮ ಕೃಷಿಕ ಪ್ರಶಸ್ತಿಯ ಜತೆಗೆ ವಿವಿಧ ಸಂಘ, ಸಂಸ್ಥೆಗಳ ಸಮ್ಮಾನ ಸಂದಿವೆ.

ದಿನವೊಂದಕ್ಕೆ ಸರಾಸರಿ 200 ಲೀ. ಹಾಲು
ಜರ್ಸಿ, ಎಚ್‌ಎಫ್ ತಳಿಯ ಸುಮಾರು 25 ದನಗಳನ್ನು ಸಾಕುವ ಇವರು ದಿನವೊಂದಕ್ಕೆ ಸರಾಸರಿ 200 ಲೀಟರ್‌ ಹಾಲನ್ನು ಡೇರಿಗೆ ಹಾಕುತ್ತಿದ್ದಾರೆ. ಅತ್ಯಾಧುನಿಕ ದನದ ಹಟ್ಟಿಯನ್ನು ಹೊಂದಿರುವ ಇವರು ದನಗಳಿಗೆ ಹಸುರು ಮೇವನ್ನೇ ಹೆಚ್ಚಾಗಿ ಉಪಯೋಗಿಸುತ್ತಾರೆ. ತಮ್ಮ ಕೃಷಿ ಭೂಮಿಯಲ್ಲಿ ದನಗಳ ಮೇವಿಗಾಗಿಯೇ ಜಾಗವನ್ನು ಮೀಸಲಿಟ್ಟಿದ್ದು ಅಲ್ಲಿ ಹುಲ್ಲು ಬೆಳೆಸುತ್ತಾರೆ. ದನಗಳ ಜತೆಗೆ ಆಡು ಸಾಕಣೆ, ನಾಟಿಕೋಳಿ ಸಾಕಣೆ, ಮೊಲ ಸಾಕಣೆಯನ್ನು ಮಾಡುತ್ತಿದ್ದಾರೆ.

ಕೃಷಿ ಬಿಡುವುದು ಸರಿಯಲ್ಲ
ಕೃಷಿ ಭೂಮಿಯನ್ನು ಹಡಿಲು ಬಿಟ್ಟು ನಗರ ಪ್ರದೇಶದತ್ತ ವಲಸೆ ಹೋಗುವುದು ಸರಿಯಲ್ಲ. ಗ್ರಾಮೀಣ ಭಾಗದಲ್ಲಿರುವ ಫ‌ಲವತ್ತಾದ ಕೃಷಿ ಭೂಮಿಯಲ್ಲಿ ಯುವ ಸಮುದಾಯ ಭತ್ತ ಸಹಿತ ವಿವಿಧ ಕೃಷಿಯನ್ನು ಮಾಡಿ ಜತೆಗೆ ಹೈನುಗಾರಿಕೆಯಲ್ಲಿಯೂ ತೊಡಗಿಸಿಕೊಂಡಾಗ ಭವಿಷ್ಯದಲ್ಲಿ ಕಾಡಬಹುದಾದ ಆಹಾರದ ಕೊರತೆಯನ್ನು ನೀಗಿಸಬಹುದಾಗಿದೆ. ಕೃಷಿಕರು ಮಾರುಕಟ್ಟೆ ಸಮಸ್ಯೆಯನ್ನು ಹೊಂದಿದ್ದು, ಮಧ್ಯವರ್ತಿರಹಿತ ಮಾರುಕಟ್ಟೆ ದೊರೆತಲ್ಲಿ ಹೆಚ್ಚಿನ ಲಾಭ ಗಳಿಸಲು ಸಾಧ್ಯವಿದೆ.
-ಅಂತೋನಿ ನಜರತ್‌,
ಪ್ರಗತಿಪರ ಕೃಷಿಕ

ಹೆಸರು:ಅಂತೋನಿ ನಜರತ್‌
ಏನೇನು ಕೃಷಿ:ಭತ್ತ, ಅಡಿಕೆ, ತೆಂಗು, ಮಲ್ಲಿಗೆ, ತರಕಾರಿ, ಹಸುರು ಹುಲ್ಲು
ಎಷ್ಟು ವರ್ಷ 72
ಕೃಷಿ ಪ್ರದೇಶ ಸುಮಾರು 5 ಎಕ್ರೆ

-ಜಗದೀಶ ಅಜೆಕಾರು

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.