ವಿಫ‌ಲ ಕಾರ್ಯಾಚರಣೆ:ಪೆರ್ಣಂಕಿಲದಲ್ಲಿ ಹೆಣ್ಣು ಚಿರತೆ ಸಾವು


Team Udayavani, Feb 16, 2019, 12:30 AM IST

chirathe01.jpg

ಮಣಿಪಾಲ: ಉಡುಪಿ ತಾಲೂಕಿನ ಪೆರ್ಣಂಕಿಲ ಸಮೀಪದ ಅಂಗಾರಕಟ್ಟೆ ಕೇನೆಕುಂಜದಲ್ಲಿ ಯಾರೋ ಇಟ್ಟಿದ್ದ ಉರುಳಿಗೆ 4 ವರ್ಷ ಪ್ರಾಯದ ಹೆಣ್ಣು ಚಿರತೆಯೊಂದು ಸಿಲುಕಿದ್ದು, ಉರುಳು ಬಿಡಿಸಿ ಬಲೆಯಲ್ಲಿ  ಸೆರೆ ಹಿಡಿಯುವಷ್ಟರಲ್ಲಿ ಸಾವನ್ನಪ್ಪಿದ ಘಟನೆ ಫೆ. 15ರಂದು ಸಂಭವಿಸಿದೆ. 

ಉರುಳಿನಲ್ಲಿ ಚಿರತೆ ಸಿಲುಕಿರುವ ಬಗ್ಗೆ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಬೆಳಗ್ಗೆ ಮಾಹಿತಿ ನೀಡಿದ್ದು ಅವರು ಖಾಸಗಿ ವಾಹನದಲ್ಲಿ ಬೋನನ್ನು ತರಿಸಿಕೊಂಡು ಸ್ಥಳಕ್ಕಾಗಮಿಸಿದರು. 

ಅರಿವಳಿಕೆ ಇಲ್ಲದೆ ಸಮಸ್ಯೆ
ಚಿರತೆಯ ಸೊಂಟ ಉರುಳಿಗೆ ಸಿಲುಕಿದ್ದು ಅರಿವಳಿಕೆ ತಜ್ಞರು ಲಭ್ಯರಿಲ್ಲದ ಕಾರಣ ಬಲೆ ಬೀಸಿ ಚಿರತೆಯನ್ನು ಹಿಡಿದು ಉರುಳು ಬಿಡಿಸಬೇಕಾದ ಅನಿವಾರ್ಯತೆ ಅರಣ್ಯಾಧಿಕಾರಿಗಳದ್ದು. ಅರಣ್ಯಾಧಿಕಾರಿಗಳು ಅರ್ಧ ಗಂಟೆಗೂ ಹೆಚ್ಚು ಕಾಲ ಚಿರತೆಯನ್ನು ಹಿಡಿಯುವ ಪ್ರಯತ್ನ ಮಾಡಿದರೂ ಉರುಳಿನ ಬಿಗಿತ ಹಾಗೂ ಅರಿವಳಿಕೆ ಇಲ್ಲದೆ ಚಿರತೆ ಕೊಸರಾಡುತ್ತಿದ್ದುದರಿಂದ ಸೋತು ಸ್ಥಳದಲ್ಲೇ ಸಾವನ್ನಪ್ಪಿತು. ಗುರುವಾರ ರಾತ್ರಿ ಚಿರತೆ ಉರುಳಿಗೆ ಬಿದ್ದಿರುವ ಸಾಧ್ಯತೆ ಇದ್ದು ಕೊಸರಾಡುತ್ತಿದ್ದುದರಿಂದ ಅದಕ್ಕೆ ಘಾಸಿ ಉಂಟಾಗಿರುವ ಸಾಧ್ಯತೆಯೂ ಇದೆ. 

ಅರಣ್ಯಾಧಿಕಾರಿಗಳು ಚಿರತೆಯ ಶವವನ್ನು ಕೊಂಡೊಯ್ದಿದ್ದು ಮರಣೋತ್ತರ ಪರೀಕ್ಷೆ ಬಳಿಕ ಸುಡಲಿದ್ದಾರೆ ಎಂದು ತಿಳಿದು ಬಂದಿದೆ. 

ಬೋನು ಇಡಲು ಮನವಿ ಮಾಡಿದ್ದರು
ಪರಿಸರದ ನಾಯಿಗಳು ಚಿರತೆಗೆ ಆಹಾರವಾಗುತ್ತಿರುವ ಬಗ್ಗೆ ಸ್ಥಳೀಯರು ತಿಂಗಳ ಹಿಂದೆಯೇ ಅರಣ್ಯ ಇಲಾಖೆ ಗಮನಕ್ಕೆ ತಂದು ಬೋನು ಇರಿಸಲು ಮನವಿ ಮಾಡಿದ್ದರು. ಆದರೆ ಬೋನು ಇರಿಸಿರಲಿಲ್ಲ. ಈಗ ಹಂದಿ ಹಿಡಿಯಲು ಯಾರೋ ಮಾಡಿರಬಹುದಾದ ಉರುಳಿನಲ್ಲಿ ಚಿರತೆ ಸಿಲುಕಿದ್ದು ಸಾವನ್ನಪ್ಪುವಂತಾಗಿದೆ. ಕಾಡಿನಲ್ಲಿ ಆಹಾರವಿಲ್ಲದೆ ಚಿರತೆಗಳು ಊರಿಗೆ ಬಂದು ನಾಯಿಗಳನ್ನು ತಿನ್ನುತ್ತಿರುವ ಘಟನೆಗಳು ಈ ಪರಿಸರದಲ್ಲಿ ಆಗಾಗ ನಡೆಯುತ್ತಿರುತ್ತವೆ.  

ಜಿಲ್ಲೆಯಲ್ಲಿ ಅರಿವಳಿಕೆ ತಜ್ಞರಿಲ್ಲ
ಉಡುಪಿ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳು ದಾಳಿ ನಡೆಸಿದಾಗ, ಉರುಳಿನಲ್ಲಿ ಸಿಲುಕಿದಾಗ ಅಥವಾ ಮನೆ, ಕಟ್ಟಡಗಳನ್ನು ಹೊಕ್ಕಿದಾಗ ಅವುಗಳನ್ನು ಸೆರೆ ಹಿಡಿಯುವುದಕ್ಕೆ ಅರಿವಳಿಕೆ ನೀಡಿ ಪ್ರಜ್ಞೆ ತಪ್ಪಿಸಲು ಉಡುಪಿ ಜಿಲ್ಲೆಯ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ತಜ್ಞ ಪಶು ವೈದ್ಯರೇ ಇಲ್ಲ. ಅಗತ್ಯವಿದ್ದಾಗ ಮಂಗಳೂರಿನ ಪಿಲಿಕುಳ ಅಥವಾ ಶಿವಮೊಗ್ಗದಿಂದ ತಜ್ಞರನ್ನು ಕರೆಸಿಕೊಳ್ಳಬೇಕಾಗುತ್ತದೆ. ಅಲ್ಲಿಂದ ವೈದ್ಯರು ಬರುವಷ್ಟರಲ್ಲಿ ಇಲ್ಲಿ ಪರಿಸ್ಥಿತಿ ಕೈ ಮೀರಿರುತ್ತದೆ. ಜಿಲ್ಲೆಯಲ್ಲಿ ಒಬ್ಬರಾದರೂ ತಜ್ಞ ಪಶು ವೈದ್ಯರನ್ನು ಈ ನಿಟ್ಟಿನಲ್ಲಿ ತರಬೇತಿ ನೀಡಿ ನೇಲೆಸಲು ಅಧಿಕೃತರು ಸಂಪೂರ್ಣ ವಿಫ‌ಲರಾಗಿದ್ದಾರೆ. ಇದನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕಿದೆ. 

ಪಿಲಿಕುಳ ಹಾಗೂ ಶಿವಮೊಗ್ಗದಲ್ಲಿ ಅರಿವಳಿಕೆ ನೀಡಲು ತಜ್ಞ ಪಶುವೈದ್ಯರನ್ನು ನಿಯೋಜಿಸಲಾಗಿದೆ. ಅಗತ್ಯವಿದ್ದಲ್ಲಿ ಅಲ್ಲಿಂದ ವೈದ್ಯರನ್ನು ಕರೆಸಲಾಗುತ್ತದೆ. 
– ಲೋತ್‌ ಜಿ.,ಎಸಿಎಫ್,ಕುಂದಾಪುರ

ಟಾಪ್ ನ್ಯೂಸ್

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

12-raichur

Balaganur: ಮಣ್ಣೆತ್ತಿನ ಅಮವಾಸ್ಯೆ ಆಚರಣೆ ಇಂದು;ಶ್ರದ್ಧಾ ಭಕ್ತಿಯಿಂದ ಪೂಜೆ, ಚಿಣ್ಣರ ಸಂಭ್ರಮ

Magadi; A bear attacked a man on his way to the farm

Magadi; ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; ಗಂಭೀರ ಗಾಯ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.