![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 6, 2022, 7:15 PM IST
ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆ ಹಾಗೂ ಜಿಲ್ಲೆಯಲ್ಲಿ ಆಗುತ್ತಿರುವ ಮಳೆಯ ಪರಿಸ್ಥಿತಿಯ ಅನುಗುಣವಾಗಿ ಶಾಲಾ ಕಾಲೇಜುಗಳಿಗೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ರಜೆಯನ್ನು ಘೋಷಿಸಿ, ಆದೇಶಿಸುತ್ತಿರುವ ಆದೇಶ ಪ್ರತಿಯಲ್ಲಿನ ದಿನಾಂಕಗಳನ್ನು ತಿದ್ದುಪಡಿ ಮಾಡಿ , ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ದ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ನಗರದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಜಿಲ್ಲಾ ದಂಡಾಧಿಕಾರಿಗಳು ಜುಲೈ 1 ರಂದು ಜಿಲ್ಲಾ ವ್ಯಾಪ್ತಿಯಲ್ಲಿ ಮಳೆ ಹೆಚ್ಚಳವಾಗಿರುವ ಕಾರಣ ಹಾಗೂ
ಹವಾಮಾನ ಇಲಾಖೆಯ ಮುನ್ಸೂಚನೆ ಆಧರಿಸಿ ರಜೆಯನ್ನು ಘೋಷಿಸಿ 2022 ರ ಜೂನ್ 30 ರಂದು ಸಂಜೆ ಹೊರಡಿಸಿದ್ದ ಆದೇಶದ ಪ್ರತಿಯನ್ನು ಸಮಾಜದಲ್ಲಿನ ಕೆಲವು ಕಿಡಗೇಡಿಗಳು ಆದೇಶದ ದಿನಾಂಕವನ್ನು ಡಿಜಿಟಲೀಕರಣದಿಂದ ತಿದ್ದುಪಡಿ ಮಾಡಿ ಜುಲೈ 5 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಆದೇಶದ ಕಾನೂನುಬಾಹಿರ ನಕಲಿ ತಿದ್ದುಪಡಿ ಪತ್ರವನ್ನು ಜುಲೈ 4 ರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಪ್ರಸರಣಗೊಳಿಸಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಠಿಸಿರುತ್ತಾರೆ. ಆದರೆ ಅಂದು ಸಂಜೆ ಹೆಬ್ರಿ ತಾಲೂಕಿನ ವ್ಯಾಪ್ತಿಗೆ ಮಾತ್ರ ರಜೆ ಘೋಷಿಸಿ ಜಿಲ್ಲಾಡಳಿದಿಂದ ರಜೆ ಘೋಷಿಸಲಾಗಿತ್ತು.
ಇಂತಹ ಸಮಾಜಘಾತುಕ ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲಿಸಿ , ತನಿಖೆ ನಡೆಸಿ , ಕಾನೂನಿನಡಿ ಕ್ರಮ ಕೈಗೊಳ್ಳಲು ಜಿಲ್ಲಾ ಸೆನ್ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದ್ದು, ಎಫ್ಐಆರ್. ದಾಖಲಾಗಿದೆ. ಈ ಪ್ರಕರಣ ಬಗ್ಗೆ ಅನುಮಾನಾಸ್ಪದ ವ್ಯಕ್ತಿಗಳಿದ್ದಲ್ಲಿ ಮಾಹಿತಿಯನ್ನು ಸೆನ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ದೂ.ಸಂ.9480805410 ಗೆ ನೀಡುವಂತೆ ಕೋರಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.