ಅವಧಿ ಮುಗಿಯುತ್ತಾ ಬಂದರೂ ನಡೆಯದ ನಾಡದೋಣಿ ಮೀನುಗಾರಿಕೆ


Team Udayavani, Jul 15, 2018, 6:00 AM IST

1407mle3.gif

ಮಲ್ಪೆ: ಕಡಲಲ್ಲಿ ಎದ್ದ ತೂಫಾನ್‌ ಇನ್ನೂ ತಗ್ಗಿಲ್ಲ. ಬಿರುಸಾದ ಸಮುದ್ರ ಸಹಜಸ್ಥಿತಿಗೆ ಬರದೇ ಇದ್ದರಿಂದ ನಾಡದೋಣಿ ಮೀನುಗಾರಿಕೆಗೆ ಈ ಬಾರಿ ಕಾಲ ಕೂಡಿ ಬರಲೇ ಇಲ್ಲ. 

ಹಿಂದೆಲ್ಲ ಇದೇ ಅವಧಿಯಲ್ಲಿ ಮೀನುಗಾರರು ಬಲೆ ತುಂಬ ಮೀನು ಹಿಡಿದು ತರುತ್ತಿದ್ದರು. ಈ ಬಾರಿ ದೋಣಿ ಇಳಿಸಲೇ ಆಗಿಲ್ಲ.  ಇದೀಗ ಮಳೆಗಾಲದ ನಾಡದೋಣಿ ಮೀನುಗಾರಿಕೆ ಅವಧಿಯೂ ಮುಗಿಯುತ್ತಾ ಬಂದಿದ್ದು, ಸಾಲದ ಹೊರೆಯಲ್ಲಿರುವ ನಾವು ದಿಕ್ಕೇ ತೋಚದಂತಾಗಿದ್ದೇವೆ ಎನ್ನುತ್ತಾರೆ ಸಾಂಪ್ರದಾಯಿಕ ನಾಡ ಟ್ರಾಲ್‌ದೋಣಿ ಮೀನುಗಾರ ಪುರಂದರ ಕೋಟ್ಯಾನ್‌.

ಮುಗಿಯದ ಮಳೆಯಬ್ಬರ
ಈ ಬಾರಿ ಕರಾವಳಿ ತೀರದುದ್ದಕ್ಕೂ ನಿರಂತರವಾಗಿ ಸುರಿಯುತ್ತಿರುವ ಮಳೆ ಸಾಂಪ್ರದಾಯಿಕ ನಾಡದೋಣಿ ಮೀನುಗಾರರನ್ನು ಕಂಗಾಲಾಗಿಸಿವೆ.  ನಾಡದೋಣಿ ಮೀನುಗಾರರಿಗೆ ಕಡಲಿಗಿಳಿಯಲು ಸಾಧ್ಯವಾಗುತ್ತಿಲ್ಲ. ಜೂನ್‌ 1ರಿಂದ ಜು.31ರವರೆಗೆ 60 ದಿನಗಳು ನಾಡದೋಣಿ ಮೀನುಗಾರಿಕೆಗೆ ಅವಕಾಶವಿದ್ದರೂ ಈಗಾಗಲೇ 45ದಿನಗಳು ಕೈತಪ್ಪಿ ಹೋಗಿವೆ. ಆ. 1ರಿಂದ ಯಾಂತ್ರಿಕ ಮೀನುಗಾರಿಕೆ ಆರಂಭಗೊಳ್ಳುತ್ತಿರುವುದರಿಂದ ಇನ್ನು ಕೇವಲ ಬೆರಳೆಣಿಕೆ ದಿನಗಳು ಮಾತ್ರ ಉಳಿದಿದೆ. 

ಸಾಮಾನ್ಯವಾಗಿ ಪುನರ್ವಸು, ಪುಷ್ಯ ಮಳೆ ಆರಂಭಗೊಂಡಾಗ ನಾಡದೋಣಿ ಗಳಿಗೆ ಉತ್ತಮ ಮೀನುಗಾರಿಕೆ ಆಗುತ್ತಿತ್ತು. ಕಳೆದ ವರ್ಷದಲ್ಲಿ ಜುಲೈ ತಿಂಗಳ ಪ್ರಥಮ ವಾರದಲ್ಲೇ ಹೇರಳ ಪ್ರಮಾಣದಲ್ಲಿ ಸಿಗಡಿ ಮೀನುಗಳು ನಾಡದೋಣಿ ಬಲೆ ಬಿದ್ದಿದ್ದವು. ಈಗ ಕಡಲಿಗಿಳಿದರೆ  ಮೀನು ಸಿಗುವ ಲಕ್ಷಣ ಇದೆ. ಆದರೆ ಮಳೆಗಾಳಿಯಿಂದಾಗಿ ಸಮುದ್ರಕ್ಕೆ ಇಳಿಯಲು ಸಾಧ್ಯವಾಗುತ್ತಿಲ್ಲ. ಸಂಕ್ರಮಣದ ಬಳಿಕ ಮೀನುಗಾರಿಕೆಗೆ ಪೂರಕವಾಗಬಹುದು ಎನ್ನುತ್ತಾರೆ ಮೀನುಗಾರರಾದ ಕೃಷ್ಣ ಸುವರ್ಣ. 

ಹೆಚ್ಚಿನ ಕಾಲಾವಕಶಕ್ಕೆ ಆಗ್ರಹ 
ಮಲ್ಪೆ ಬಂದರು ವ್ಯಾಪ್ತಿಯಲ್ಲಿ 650ಕ್ಕೂ ಹೆಚ್ಚು ಸಾಂಪ್ರದಾಯಿಕ ನಾಡ ಟ್ರಾಲ್‌ದೋಣಿಗಳು ಮಳೆಗಾಲದ ಮೀನುಗಾರಿಕೆ ನಡೆಸುತ್ತಿವೆ.  ಬಹುತೇಕ ದೋಣಿಗಳು ಸಾಲ ಮಾಡಿ ಮೀನುಗಾರಿಕೆಗೆ ತೊಡಗಿದ್ದು ಸಾಲ ಮರುಪಾವತಿ ಹೇಗೆ ಎಂಬ ಚಿಂತೆಯಲ್ಲಿದೆ.  ಈ ಹಿನ್ನೆಲೆಯಲ್ಲಿ ಆಗಸ್ಟ್‌ ತಿಂಗಳಲ್ಲಿ 15 ದಿನ ಹೆಚ್ಚುವರಿಯಾಗಿ ಮೀನುಗಾರಿಕೆಗೆ ಅವಕಾಶ ನೀಡಬೇಕು. ಅಲ್ಲಿವರೆಗೆ ಯಾಂತ್ರೀಕೃತ ಮೀನುಗಾರಿಕೆ ಬೇಡ ಎನ್ನುವುದು ಮೀನುಗಾರರ ಸಂಘದ ಆಗ್ರಹವಾಗಿದೆ.  

ಸ್ಥಿತಿ ದುಸ್ತರ 
ಮೊದಲೇ ಮೀನಿಗೆ ಕೆಮಿಕಲ್‌ ಬಳಸಿದ್ದಾರೆ ಎಂಬ ಭಯದಿಂದ ಗ್ರಾಹಕರು ದೂರ ಸರಿದಿದ್ದಾರೆ. ಅದಕ್ಕೆ ಸರಿಯಾಗಿ ಮೀನುಗಾರಿಕೆಗೆ ಹೋಗಲು ಸಮುದ್ರ ಬಿಡುತ್ತಿಲ್ಲ. ಒಟ್ಟಿನಲ್ಲಿ ಮಳೆಗಾಲದಲ್ಲಿ ನಾಡದೋಣಿ ಮೀನುಗಾರಿಕೆಯನ್ನೇ ನಂಬಿ ಬದುಕುತ್ತಿದ್ದ ನಮ್ಮ ಸ್ಥಿತಿ ದುಸ್ತರವಾಗಿದೆ.
– ಆನಂದ ಸಾಲ್ಯಾನ್‌,ಮಲ್ಪೆ

ಮಲ್ಪೆಯಲ್ಲಿ ಮತ್ಸ್ಯಮೇಳ
ಒಂದೆಡೆ ನಾಡದೋಣಿ ಕಡಲಿಗೆ ಇಳಿಯದೆ ಮೀನಿಗೆ ಬರ. ಇನ್ನೊಂದೆಡೆ ಮೀನು ಕೊಳ್ಳುವ ಗ್ರಾಹಕರು ಕೆಮಿಕಲ್‌ ಭಯದಿಂದ ಹಿಂದೇಟು ಹಾಕುತ್ತಿರುವುದು ಮೀನು ಮಾರಾಟಗಾರರನ್ನು ಆತಂಕಕ್ಕೀಡು ಮಾಡಿವೆ. ಭಯ ಹೋಗಲಾಡಿಸಲು ಮುಂದಿನ ದಿನದಲ್ಲಿ ಮಲ್ಪೆಯಲ್ಲಿ ಮತ್ಸéಮೇಳ ಆಯೋಜಿಸಲಾಗುವುದು. 
– ಯಶಪಾಲ್‌ ಸುವರ್ಣ
ಅಧ್ಯಕ್ಷ , ಮೀನುಮಾರಾಟ ಫೆಡರೇಶನ್‌ 

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

1-asdsdas

Yakshagana; ಖ್ಯಾತ ಪ್ರಸಾಧನ ಕಲಾವಿದ ಬಾಲಕೃಷ್ಣ ನಾಯಕ್‌ ವಿಧಿವಶ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.