![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 24, 2023, 9:24 PM IST
ಉಡುಪಿ: ಕಸ್ಟಮರ್ ಕೇರ್ ಸಿಬಂದಿ ಹೆಸರಿನಲ್ಲಿ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ.ವಂಚಿಸಿದ ಘಟನೆ ನಡೆದಿದೆ.
ಉಡುಪಿಯ ಪ್ರಶಾಂತ ಅವರು ಎಟಿಎಂನಲ್ಲಿ ಹಣ ಬಾರದಿದ್ದಾಗ ಕಸ್ಟಮರ್ ಕೇರ್ ಸಂಖ್ಯೆಗೆ ಕರೆ ಮಾಡಿದ್ದರು. ಕರೆ ಸ್ವೀಕರಿಸಿದ ವ್ಯಕ್ತಿ ತಾನು ಎ.ಟಿ.ಎಂ. ಸಿಬಂದಿ ಎಂದು ಹೇಳಿ ಪ್ರಶಾಂತ ಅವರಿಂದ ಕಾರ್ಡ್ ವಿವರ ಪಡೆದು ಹಂತ ಹಂತವಾಗಿ ಒಟ್ಟು 3,95,000ರೂ.ಗಳನ್ನು ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಗೆ ಲಕ್ಷಾಂತರ ರೂ.ವಂಚನೆ
ಉಡುಪಿ: ಟೆಲಿಗ್ರಾಮ್ ಆ್ಯಪ್ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ತಾನು ಜೆಲಿಟಾ ಇಂಡಿಯಾ ಪೈ.ಲಿ. ಕಂಪೆನಿಯವನೆಂದು ನಂಬಿಸಿ ಮಹಿಳೆಯೊಬ್ಬರಿಂದ ಲಕ್ಷಾಂತರ ರೂ.ಗಳನ್ನು ಆನ್ಲೈನ್ ಮೂಲಕ ವರ್ಗಾಯಿಸಿಕೊಂಡ ಘಟನೆ ನಡೆದಿದೆ.
ರೇಣುಕಾ ಅವರಿಗೆ ಟೆಲಿಗ್ರಾಮ್ ಮೂಲಕ ಸಂದೇಶ ಕಳುಹಿಸಿದ ವ್ಯಕ್ತಿ ಆ ಕಂಪೆನಿಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶದ ಹಣ ನೀಡುವುದಾಗಿ ನಂಬಿಸಿದ್ದನು. ಹಣ ಪಾವತಿಸಲು ವಿವಿಧ ಬ್ಯಾಂಕ್ ಖಾತೆಗಳನ್ನು ನೀಡಿದ್ದನು. ಅದರಂತೆ ರೇಣುಕಾ ಅವರು ಆತ ಸೂಚಿಸಿದ ಅಕೌಂಟ್ಗಳಿಗೆ ಹಂತಹಂತವಾಗಿ ಒಟ್ಟು 1,35,000 ರೂ.ಗಳನ್ನು ಜಮೆ ಮಾಡಿದ್ದರು. ಆದರೆ ಆರೋಪಿಗಳು ಲಾಭಾಂಶವನ್ನು ನೀಡದೇ ಜಮೆ ಮಾಡಿದ ಹಣವನ್ನೂ ಹಿಂತಿರುಗಿಸದೇ ಮೋಸ ಮಾಡಿದ್ದಾರೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.