ದಾನದಿಂದ ಸುಖ ಪ್ರಾಪ್ತಿ: ಸತೀಶ್‌ ಕಿಣಿ ಬೆಳ್ವೆ


Team Udayavani, Sep 12, 2017, 7:55 AM IST

1109side4-Helth-Camp.jpg

ಸಿದ್ದಾಪುರ: ಸಮಾಜದಿಂದ ಸಾಕಷ್ಟು ಪಡೆದಿದ್ದೇವೆ. ಸಮಾಜದಿಂದ ಪಡೆದುದರಲ್ಲಿ ಸ್ವಲ್ಪವಾದರೂ ಸಮಾಜಕ್ಕೆ ಕೊಡಬೇಕು. ಕೊಡುವುದರಲ್ಲಿ ಇರುವ ಸುಖ ಪಡೆಯುವುದರಲ್ಲಿ ಇಲ್ಲ ಎಂದು ಎಂದು ಬೆಳ್ವೆ ಸಂದೇಶ್‌ ಕಿಣಿ ಮೆಮೋರಿಯಲ್‌ ಚಾರಿಟೆಬಲ್‌ ಫೌಂಡೇಶನ್‌ ಅಧ್ಯಕ್ಷ ಬಿ. ಸತೀಶ್‌ ಕಿಣಿ ಬೆಳ್ವೆ ಅವರು ಹೇಳಿದರು.

ಅವರು ಬೆಳ್ವೆ ಸಂದೇಶ್‌ ಕಿಣಿ ಮೆಮೋರಿಯಲ್‌ ಚಾರಿಟೆಬಲ್‌ ಫೌಂಡೇಶನ್‌, ಲಯನ್ಸ್‌ ಕ್ಲಬ್‌ ಸಂತೆಕಟ್ಟೆ, ಕಸ್ತೂರ್ಬಾ ಹಾಸ್ಪಿಟಲ್‌ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಫೌಂಡೇಶನ್‌ ಸಭಾಂಗಣದಲ್ಲಿ  ನಡೆದ ಬೃಹತ್‌ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಂತೆಕಟ್ಟೆ ಲಯನ್ಸ್‌ ಕ್ಲಬ್‌ನ ಅಧ್ಯಕ್ಷ ಜೀಸನ್‌ ಡಯಾಸ್‌ ಬೃಹತ್‌ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಸಂಘ- ಸಂಸ್ಥೆಗಳು ಹಮ್ಮಿಕೊಳ್ಳು ವ ವೈದ್ಯಕೀಯ ಚಿಕಿತ್ಸೆಯ ಉಚಿತ ಸೇವೆಗಳು ಗ್ರಾಮೀಣ ಭಾಗದ ಜನತೆಗೆ ಪ್ರಯೋಜನವಾಗಲಿದೆ. ಸಂಸ್ಥೆಗಳ ಉತ್ತಮ ಸೇವೆಯು, ಗೌರವವನ್ನು ಹೆಚ್ಚಿಸುವುದರೊಂದಿಗೆ ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗಲಿವೆ ಎಂದರು.

ಬೆಳ್ವೆ ಸಂದೇಶ್‌ ಕಿಣಿ ಮೆಮೋರಿಯಲ್‌ ಚಾರಿಟೆಬಲ್‌ ಫೌಂಡೇಶನ್‌ ಟ್ರಸ್ಟಿ ಬಿ. ಉಮೇಶ್‌ ಕಿಣಿ ಬೆಳ್ವೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಮಣಿಪಾಲ ಕಸ್ತೂರ್ಬಾ ಹಾಸ್ಪಿಟಲ್‌ ಕಣ್ಣಿನ ತಜ್ಞ ಡಾ| ಕಿರಣ್‌, ಸಮುದಾಯ ಆರೋಗ್ಯ ವಿಭಾಗದ ಡಾ| ಅರ್ಪಣಾ, ಮಧುಮೇಹ ವಿಭಾಗದ ಡಾ| ಶುಭಾ ಜಿ. ಮಯ್ಯ, ಡಾ| ಅನ್ನಾ, ಸಂತೆಕಟ್ಟೆ ಲಯನ್ಸ್‌ ಕ್ಲಬ್‌ ಪ್ರಾಂತೀಯ ಅಧ್ಯಕ್ಷ ಅಶೋಕ ಕುಮಾರ್‌ ಶೆಟ್ಟಿ, ಸುದರ್ಶನ ನಾಯಕ್‌, ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕ ಹರಿಶ್ಚಂದ್ರ ಆಚಾರ್ಯ, ಆವರ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ಉಮೇಶ್‌ ಶೆಟ್ಟಿ, ಶಿಬಿರದ ಸಂಯೋಜಕ ನೀತಿನ್‌, ನಿರ್ದೇಶಕರಾದ ಬಿ. ಗೋಪಾಲಕೃಷ್ಣ ಕಿಣಿ, ಬಿ. ಹರೀಶ ಕಿಣಿ, ಬಿ. ಗೋಕುಲ್‌ ಕಿಣಿ ಮತ್ತಿತತರು ಉಪಸ್ಥಿತರಿದ್ದರು.

ಶಿಬಿರದಲ್ಲಿ ಮಣಿಪಾಲ ಕಸ್ತೂರ್ಬಾ ಹಾಸ್ಪಿಟಲ್‌ನ ನುರಿತ ವೈದ್ಯರಿಂದ ಕಣ್ಣಿನ ತಪಾಸಣೆ, ಮಧುಮೇಹ, ಆಹಾರ ಮತ್ತು ಪತ್ಯೆ, ಮಹಿಳೆಯರಿಗೆ ಆರೋಗ್ಯ ತಪಾಸಣೆ ಮತ್ತು ವೈದ್ಯಕೀಯ ಸಲಹೆಗಳನ್ನು ನೀಡಲಾಯಿತು. ಸುಮಾರು 400ಕ್ಕೂ ಹೆಚ್ಚು ಜನರು ಶಿಬಿರದಿಂದ ಪ್ರಯೋಜನ ಪಡೆದರು. ಕಣ್ಣಿನ ತಪಾಸಣೆಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆದರು. ಇದರಲ್ಲಿ 110 ಜನರಿಗೆ ಕನ್ನಡಕದ ಆವಶ್ಯಕತೆ ಇದ್ದು, ಫೌಂಡೇಶನ್‌ ಉಚಿತವಾಗಿ ಕನ್ನಡಕವನ್ನು ನೀಡುವ ಭರವಸೆ ನೀಡಿದರು.

ಬಿ. ಗೋಕುಲ್‌ ಕಿಣಿ ಸ್ವಾಗತಿಸಿ, ಮಂಜುನಾಥ ಹಿಲಿಯಾಣ ಕಾರ್ಯಕ್ರಮ ನಿರೂಪಿಸಿದರು. ಬಿ. ಹರೀಶ ಕಿಣಿ ವಂದಿಸಿದರು.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.