ಡಿಎಫ್ಒ ವಿರುದ್ಧ ಕ್ರಮಕ್ಕೆ ಜಿ.ಪಂ. ನಿರ್ಣಯ

ಅಭಿವೃದ್ಧಿಗೆ ಅಡ್ಡಿ, ಸಭೆಗೆ ಗೈರು ಆರೋಪ

Team Udayavani, Jan 29, 2020, 1:56 AM IST

shu-41

ಉಡುಪಿ: ಉಪ ಅರಣ್ಯ ಸಂರಕ್ಷಣಾಧಿ ಕಾರಿ ಅಭಿವೃದ್ಧಿ ಕೆಲಸಗಳಿಗೆ ಸಹಕರಿಸುತ್ತಿಲ್ಲ ಎಂದು ಜಿ.ಪಂ. ಸದಸ್ಯರು ಪಕ್ಷಭೇದ ಮರೆತು ಆರೋಪಿಸಿ ದ್ದಲ್ಲದೆ, ಸರ್ವಾನುಮತದ ನಿರ್ಣಯವನ್ನೂ ಕೈಗೊಂಡ ಘಟನೆ ಮಂಗಳವಾರ ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಜಿ.ಪಂ. ಸಾಮಾನ್ಯ ಸಭೆಯಲ್ಲಿ ನಡೆಯಿತು.

ಕಂದಾಯ, ಅರಣ್ಯ, ಗಣಿ ಇಲಾಖೆಯ ರಾಜ್ಯ ಸ್ತರದ ಪ್ರಧಾನ ಕಾರ್ಯದರ್ಶಿಗಳು ಡೀಮ್ಡ್ ಅರಣ್ಯದಿಂದ ಆಂಶಿಕ ಡೀಮ್ಡ್ ಅರಣ್ಯದ ಭಾಗವನ್ನು ಬೇರ್ಪಡಿಸಲು ಒಮ್ಮತದಿಂದ ತಳೆದ ನಿರ್ಣಯವನ್ನೂ ಜಿಲ್ಲೆಯಲ್ಲಿ ಈಡೇರಿಸಲು ಡಿಎಫ್ಒ ಸಿದ್ಧರಿಲ್ಲ. ಹೀಗಾದರೆ ಮರಳು ಸಮಸ್ಯೆ ತಲೆದೋರಿದಂತೆ ಜಲ್ಲಿ ಸಮಸ್ಯೆಯೂ ತಲೆದೋರುತ್ತದೆ. ಅವರು ಜಿ.ಪಂ. ಸಭೆಗೆ ಹಾಜರಾಗಲೂ ಸಿದ್ಧರಿಲ್ಲ. ಇವರ ವಿರುದ್ಧ ನಿರ್ಣಯ ತಳೆದು ರಾಜ್ಯ ಸರಕಾರದ ಗಮನಕ್ಕೆ ತರಬೇಕು ಎಂದು ಸದಸ್ಯರು ಆಗ್ರಹಿಸಿದರು.

ಅಕೇಶಿಯಾ ಕಾಡು
ಅರಣ್ಯ ಇಲಾಖೆಯವರು ಅವರ ಭೂಮಿಯಲ್ಲಿ ಕಾಡು ಬೆಳೆಸದೆ ಅಕೇಶಿಯಾ ಕಾಡು ಬೆಳೆಸುತ್ತಾರೆ. ಡೀಮ್ಡ್ ಅರಣ್ಯದ ಹೆಸರಿನಲ್ಲಿ ಅಭಿವೃದ್ಧಿ ಕೆಲಸ ಗಳಿಗೆ ವಿನಾ ಕಾರಣ ಅಡ್ಡಿ ಪಡಿಸುತ್ತಾರೆ ಎಂದು ಶಾಸಕ ರಘುಪತಿ ಭಟ್‌ ಆರೋಪಿಸಿದರು. ಪರಿಸರ ಸೂಕ್ಷ್ಮ ವಲಯದಂತೆ ಅಭಯಾ ರಣ್ಯದ ಗಡಿಯಿಂದ ಆದಷ್ಟು ಕಡಿಮೆ ಭೂಮಿಯನ್ನು (100-200 ಮೀ.) ಗುರುತಿಸಬೇಕು. ಈಗ ಒಂದು ಕಿ.ಮೀ. ಎಂದು ನಿರ್ಧರಿಸಿದ್ದಾರೆ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗು ತ್ತದೆ ಎಂದು ನಿರ್ಣಯ ಅಂಗೀಕರಿಸಲಾಯಿತು.

ಕಾರ್ಖಾನೆ ಕಾರ್ಮಿಕರಿಗೆ ಜನ್ಮ ದಿನಾಂಕ ಮತ್ತು ವಿದ್ಯಾರ್ಹತೆಯ ದಾಖಲೆ ಇಲ್ಲದೆ ಆಧಾರ್‌
ಕಾರ್ಡ್‌ ಪಡೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಪಿಎಫ್ ಮುಂತಾದ ಸೌಲಭ್ಯ ಪಡೆಯಲಾಗುತ್ತಿಲ್ಲ. ಇದಕ್ಕೆ ಪರಿಹಾರವಾಗಿ 2ನೇ ಶನಿವಾರ ಕೆಲವು ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಶಿಬಿರ ಏರ್ಪಡಿಸಲು ಅಧಿಕಾರಿಗಳಿಗೆ ಸಲಹೆ ನೀಡಲಾಯಿತು.

ವಿವಿಧ ಸ್ಥಾಯೀ ಸಮಿತಿಗಳ ಅಧ್ಯಕ್ಷರಾದ ಸುಮಿತ್‌ ಶೆಟ್ಟಿ ಕೌಡೂರು, ಅಧ್ಯಕ್ಷ ಪ್ರತಾಪ್‌ ಹೆಗ್ಡೆ ಮಾರಾಳಿ, ಶೋಭಾ ಜಿ. ಪುತ್ರನ್‌, ಸಿಇಒ ಪ್ರೀತಿ ಗೆಹಲೋತ್‌, ಉಪ ಕಾರ್ಯದರ್ಶಿ ಕಿರಣ್‌ ಪಡ್ನ್ಕರ್‌, ಯೋಜನಾ ನಿರ್ದೇಶಕ ಗುರುದತ್‌, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್‌ ರಾವ್‌ ಉಪಸ್ಥಿತರಿದ್ದರು.

ಸದಸ್ಯರಾದ ಬಾಬು ಶೆಟ್ಟಿ, ಜನಾರ್ದನ ತೋನ್ಸೆ, ಶಿಲ್ಪಾ ಸುವರ್ಣ, ದಿವ್ಯಶ್ರೀ ಅಮೀನ್‌, ಸುರೇಶ ಬಟವಾಡೆ, ಮೈರ್ಮಾಡಿ ಸುಧಾಕರ ಶೆಟ್ಟಿ, ಗೌರಿ ದೇವಾಡಿಗ, ಲಕ್ಷ್ಮೀ ಮಂಜು ಬಿಲ್ಲವ, ಚಂದ್ರಿಕಾ ಕೇಳ್ಕರ್‌, ಜ್ಯೋತಿ ಹರೀಶ್‌, ಉದಯ ಕೋಟ್ಯಾನ್‌, ಶಶಿಕಾಂತ ಪಡುಬಿದ್ರಿ, ರೋಹಿತ್‌ಕುಮಾರ್‌ ಶೆಟ್ಟಿ, ಜ್ಯೋತಿ ಎಂ. ಮೊದಲಾದವರು ಚರ್ಚೆಯಲ್ಲಿ ಪಾಲ್ಗೊಂಡರು.

ಅಕ್ರಮ ನಿರ್ಮಾಣಗಳ ವಿರುದ್ಧ ಕ್ರಮ
ಲೋಕಸಭಾ ಚುನಾವಣೆ ವೇಳೆ ಸ್ಥಗಿತಗೊಂಡ ಸರಕಾರಿ ಸ್ಥಳದಲ್ಲಿ ವಾಸಿಸುತ್ತಿರುವವರಿಗೆ 57 ನಮೂನೆ ಅರ್ಜಿಯನ್ನು ಮತ್ತೆ ಸ್ವೀಕರಿಸಬೇಕೆಂದು ನಿರ್ಣಯ ಅಂಗೀಕರಿಸಲಾಯಿತು. ರಾ.ಹೆ. ಇಕ್ಕೆಲಗಳಲ್ಲಿ ಅಕ್ರಮ ವಾಗಿ ತಲೆ ಎತ್ತಿದ ರಚನೆಗಳ ಬಗ್ಗೆ ಶೀಘ್ರವೇ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳುವುದಾಗಿ ರಾ.ಹೆ. ಅಧಿಕಾರಿಗಳು ಭರವಸೆ ನೀಡಿದರು.

ಕುಡಿಯುವ ನೀರು ಪೂರೈಸಿದವರಿಗೆ ಟೆಂಡರ್‌ನಂತೆ ಮೊತ್ತ ಪಾವತಿಯಾಗುತ್ತಿಲ್ಲ ಎಂದು ಸಭೆಯಲ್ಲಿ ಕೇಳಿಬಂದಾಗ ಇದರ ಬಗ್ಗೆ ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಲು ನಿರ್ಧರಿಸಲಾಯಿತು. ಸಂಧ್ಯಾಸುರಕ್ಷಾ ದಂತಹ ಸಾಮಾಜಿಕ ಪಿಂಚಣಿ ಯೋಜನೆಗಳು ವರ್ಷವಾದರೂ ಜಾರಿಯಾಗುತ್ತಿಲ್ಲ ಎಂದು ಕಳವಳ ವ್ಯಕ್ತವಾಯಿತು. ಇದಕ್ಕೆ ಕಾರಣವಾದ ಸರ್ವರ್‌ ಸಮಸ್ಯೆಯನ್ನು ರಾಜ್ಯ ಸರಕಾರದ ಗಮನಕ್ಕೆ ತರುವುದಾಗಿ ಅಧಿಕಾರಿಗಳು ತಿಳಿಸಿದರು.

ಪಡಿತರ ವಿಲೇ ಸಮಸ್ಯೆ
ಪಡಿತರ ಚೀಟಿ ವಿಲೇವಾರಿಗೆ ರಾಜ್ಯ ಮಟ್ಟದ ಸರ್ವರ್‌ ಸಮಸ್ಯೆ ಅಡ್ಡಿಯಾಗುತ್ತಿದೆ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ಅಭಿಪ್ರಾಯಪಟ್ಟ ಜಿ.ಪಂ., ಇದರ ಕುರಿತು ರಾಜ್ಯ ಮಟ್ಟದ ಅಧಿಕಾರಿಗಳ ಗಮನಕ್ಕೆ ತರಲು ನಿರ್ಧರಿಸಿತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.