ಕುಂಭಾಸಿ ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ


Team Udayavani, Sep 30, 2019, 5:28 AM IST

2909TKE1-1

ತೆಕ್ಕಟ್ಟೆ: ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿರುವ ಪ್ರತಿ ತಾಲೂಕಿಗೆ ಒಂದರಂತೆ ಗ್ರಾ.ಪಂ.ಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದ್ದು ಈ ಬಾರಿ ಕುಂದಾಪುರ ತಾಲೂಕಿನ ಕುಂಭಾಸಿ ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ ದೊರೆತಿದೆ.

2018-19ನೇ ಸಾಲಿನ ಪ್ರಗತಿಯ ನ್ನಾಧರಿಸಿ, ಸಾಂಸ್ಥಿಕ ಮತ್ತು ಪ್ರಗತಿ ಸೂಚ್ಯಂಕ ಗಳನ್ನೊಳಗೊಂಡ ಮಾರ್ಗಸೂಚಿಗಳನ್ನೊಳ ಗೊಂಡ 150 ಅಂಕಗಳ ಪ್ರಶ್ನಾವಳಿಗಳನ್ನು ಪಂಚ ತಂತ್ರಾಂಶದಿಂದ ಉತ್ತರಿಸುವ ಮೂಲಕ ಗ್ರಾ.ಪಂ.ಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅದರಲ್ಲಿ ರಾಜ್ಯದಲ್ಲಿ 5,925 ಗ್ರಾ.ಪಂ.ಗಳು ಅರ್ಜಿ ಸಲ್ಲಿಸಿದ್ದವು. ಈ ಗ್ರಾ.ಪಂ.ಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿರುವ ತಾಲೂಕಿಗೆ ಐದು ಗ್ರಾ.ಪಂ.ಗಳನ್ನು ಪ್ರಾಥಮಿಕ ಹಂತದಲ್ಲಿ ಆಯ್ಕೆ ಮಾಡಿ ಅನಂತರ ಜಿ.ಪಂ.ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮಾರ್ಗದರ್ಶನದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದ ಆಯ್ಕೆ ಸಮಿತಿಯ ಮೂಲಕ ತಾಲೂಕಿಗೆ ಒಂದರಂತೆ ಗ್ರಾ.ಪಂ.ಗಳನ್ನು ಪುರಸ್ಕಾರಕ್ಕಾಗಿ ಆಯ್ಕೆ ಮಾಡಲಾಗಿದೆ .

2010ರಲ್ಲಿ ಸುವರ್ಣ ಗ್ರಾಮ ಯೋಜನೆ ಅಡಿಯಲ್ಲಿ ಅನುದಾನ ದೊರೆತಿದೆ. ಗ್ರಾಮವು ಸುಮಾರು ಐದು ಸಾವಿರಕ್ಕೂ ಅಧಿಕ ಜನಸಂಖ್ಯೆಯನ್ನು ಹೊಂದಿದೆ. ತೆರಿಗೆ ಸಂಗ್ರಹದಲ್ಲಿ ಗರಿಷ್ಠ ಪ್ರಮಾಣದಲ್ಲಿ ಸಂಗ್ರಹಿಸುತ್ತಿದ್ದು, ಗ್ರಾಮದಲ್ಲಿ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಿಂದ ಎಸ್‌ಎಲ್‌ಆರ್‌ ಘಟಕವನ್ನು ನಿರ್ಮಾಣ ಮಾಡಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸುವ ನಿಟ್ಟಿನಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿದೆ. ಕುಡಿಯುವ ನೀರಿನ ಪಂಪ್‌ ಚಾಲನೆಗೆ ಮೊಬೈಲ್‌ ಆ್ಯಪ್‌ ಬಳಕೆ ಮಾಡಲಾಗುತ್ತಿದೆ, ದಾರಿದೀಪಗಳ ವಿದ್ಯುತ್‌ ಅಪವ್ಯಯವಾಗದಂತೆ ಟೈಮರ್‌ ಅಳವಡಿಸಲಾಗಿದೆ, ವಸತಿ ಯೋಜನೆ ಹಾಗೂ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಿಂದ ಫಲಾನುಭವಿಗಳಿಗೆ ಕುಡಿಯುವ ನೀರಿನ ಬಾವಿ, ದನದ ಕೊಟ್ಟಿಗೆ ಸೇರಿದಂತೆ ಸರಕಾರದ ವಿವಿಧ ಅನುದಾನಗಳನ್ನು ಸಂಪೂರ್ಣ ಬಳಕೆ ಮಾಡಿದ ಹೆಗ್ಗಳಿಕೆ ಕುಂಭಾಸಿ ಗ್ರಾಮ ಪಂಚಾಯತ್‌ನದ್ದು.

ಜನ ಸ್ಪಂದನೆ
ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಜಯರಾಮ ಶೆಟ್ಟಿ, ಕಾರ್ಯದರ್ಶಿ ನೀಲು ಅವರ ಮಾರ್ಗದರ್ಶನದಂತೆ ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಶ್ರೀವಾಣಿ ಅಡಿಗ, ಉಪಾಧ್ಯಕ್ಷರಾಗಿ ಮಹಾಬಲೇಶ್ವರ ಆಚಾರ್‌ ಕುಂಭಾಸಿ, ಸದಸ್ಯರಾದ ರಾಧಾದಾಸ್‌, ಕಮಲಾಕ್ಷ ಪೈ, ರಾಘವೇಂದ್ರ ಮೊಗವೀರ, ಲಕ್ಷ್ಮಣ ಕಾಂಚನ್‌, ರಾಘವೇಂದ್ರ ಪೂಜಾರಿ, ಸಾಲು, ಸುಕನ್ಯಾ ಶೆಟ್ಟಿ, ಶ್ರೀಲತಾ ಪೂಜಾರಿ, ಗುರುರಾಜ್‌, ಬಾಬು, ಶಾರದಾ ಪೂಜಾರಿ, ಪುಷ್ಪಲತಾ ಹಾಗೂ ಸಿಬಂದಿ ಅವರು ಜನಸೇವೆಗಾಗಿ ಸದಾ ಸ್ಪಂದಿಸುತ್ತಿದ್ದಾರೆ.

ಅ. 2ರಂದು ಪ್ರಶಸ್ತಿ ಪ್ರದಾನ
ಸರಕಾರ ಶಿಫಾರಸು ಮಾಡಲಾದ ಗ್ರಾಮ ಪಂಚಾಯ ತ್‌ಗಳನ್ನು ಗಾಂಧಿ ಜಯಂತಿಯಂದು ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಿದೆ.

ಗ್ರಾಮಸ್ಥರಿಂದ ಸಹಕಾರ
ಗ್ರಾಮದ ಮೂಲ ಸಮಸ್ಯೆಗಳಿಗೆ ಗ್ರಾ.ಪಂ. ಸರ್ವ ಸದಸ್ಯರು ಸದಾ ಸ್ಪಂದಿಸುವ ಜತೆಗೆ ತ್ಯಾಜ್ಯ ಮುಕ್ತ ಗ್ರಾಮವನ್ನಾಗಿಸಬೇಕು ಎನ್ನುವ ಉದ್ದೇಶಕ್ಕೆ ಪೂರಕವಾಗಿ ಗ್ರಾಮಸ್ಥರಿಂದ ಪೂರ್ಣ ಪ್ರಮಾಣದ ಸಹಕಾರ ದೊರೆತಿರುವುದರಿಂದ ಕುಂಭಾಸಿ ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ ಗೌರವ ಸಂದಿದೆ.
– ಮಹಾಬಲೇಶ್ವರ ಆಚಾರ್‌,ಉಪಾಧ್ಯಕ್ಷರು,ಗ್ರಾ.ಪಂ. ಕುಂಭಾಸಿ

ಆಯ್ಕೆಯಿಂದ ಸಂತಸ
2018 -19 ನೇ ಸಾಲಿನ ಗ್ರಾ.ಪಂ.ನ ಪ್ರಗತಿಯನ್ನು ಆಧರಿಸಿ, ಕುಂದಾಪುರ ತಾಲೂಕಿನ ಸುಮಾರು ಐದು ಗ್ರಾ.ಪಂ.ಗಳಲ್ಲಿಯೇ ಅತೀ ಹೆಚ್ಚು ಅಂಕ ಗಳಿಸಿದ ಕುಂಭಾಸಿ ಗ್ರಾ.ಪಂ.ಆಯ್ಕೆಯಾಗಿರುವುದು ಸಂತಸ ತಂದಿದೆ. ಸಂಘಟನಾತ್ಮಕ ಕಾರ್ಯದಿಂದಾಗಿಯೇ ಇಂದು ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ ದೊರೆತಿದೆ.
-ಜಯರಾಮ ಶೆಟ್ಟಿ, ಪಿಡಿ ಒ

ಟಾಪ್ ನ್ಯೂಸ್

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

puttige

Udupi; ಗೀತಾರ್ಥ ಚಿಂತನೆ-49: ಕೊನೆಯಲ್ಲೂ ಧೃತರಾಷ್ಟ್ರನ ಲಾಭದ ದೃಷ್ಟಿ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.