Ganeshotsava ಇಂದು ಕರಾವಳಿಯಲ್ಲಿ ಗಣೇಶೋತ್ಸವದ ಸಡಗರ


Team Udayavani, Sep 19, 2023, 6:15 AM IST

Ganeshotsava ಇಂದು ಕರಾವಳಿಯಲ್ಲಿ ಗಣೇಶೋತ್ಸವದ ಸಡಗರ

ಉಡುಪಿ/ಮಂಗಳೂರು: ವರ್ಷಂಪ್ರತಿಯಂತೆ ಗಣೇಶೋತ್ಸವದ ಸಡಗರ ಬಂದಿದೆ. ಕರಾವಳಿಯಲ್ಲಿ ಕೆಲವೆಡೆ ಸಾರ್ವಜನಿಕ ಗಣೇಶೋತ್ಸವಗಳ ಸಂಖ್ಯೆ ಹೆಚ್ಚಿಗೆ, ಕೆಲವೆಡೆ ಕಡಿಮೆ ಆಗಿವೆ.

ಮಂಗಳೂರು ಪ್ರತಾಪನಗರದ ಸಂಘನಿಕೇತನದಲ್ಲಿ ಆರಂಭಿಸಿದ ಗಣೇಶೋತ್ಸವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಗಣೇಶೋತ್ಸವ. ಇಲ್ಲಿ 1948ರಲ್ಲಿ ಆರಂಭವಾಯಿತು. ಅನಂತರದ್ದು ಉಡುಪಿ ಕಡಿಯಾಳಿ ಗಣೇಶೋತ್ಸವ. ಇದು 1967ರಲ್ಲಿ. ಕಾಸರಗೋಡಿನ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನಡೆಯುತ್ತಿರುವ ಗಣೇಶೋತ್ಸವ ಕಾಸರಗೋಡು ಜಿಲ್ಲೆಯಲ್ಲಿ ಅತಿ ಹಿರಿದಾದುದು.

ಈ ವರ್ಷ ಉಡುಪಿ ಜಿಲ್ಲೆಯಲ್ಲಿ ಒಟ್ಟು 470, ದ.ಕ.ದಲ್ಲಿ 381 ಸಾರ್ವಜನಿಕ ಗಣೇಶೋತ್ಸವಗಳಿವೆ. ಇದರಲ್ಲಿ ಮಂಗಳೂರು ಕಮಿಷನರೆಟ್‌ ವ್ಯಾಪ್ತಿಯಲ್ಲಿ (ಮೂಲ್ಕಿ, ಮೂಡುಬಿದಿರೆ, ಉಳ್ಳಾಲ, ಸುರತ್ಕಲ್‌, ಪಣಂಬೂರು ಸೇರಿ) 166 ದ.ಕ. ಜಿಲ್ಲೆಯ ಗ್ರಾಮಾಂತರದಲ್ಲಿ 215 ಗಣೇಶೋತ್ಸವಗಳು ಇವೆ.

ಉಡುಪಿ ಜಿಲ್ಲೆ
ಉಡುಪಿ ನಗರ ಠಾಣೆ ವ್ಯಾಪ್ತಿಯಲ್ಲಿ 26, ಮಲ್ಪೆ 19, ಮಣಿಪಾಲ 17, ಬ್ರಹ್ಮಾವರ 44, ಕೋಟ 42, ಹಿರಿಯಡಕ 11, ಬೈಂದೂರು 46, ಗಂಗೊಳ್ಳಿ 29, ಕೊಲ್ಲೂರು 13, ಕುಂದಾಪುರ ನಗರ 34, ಕುಂದಾಪುರ ಗ್ರಾಮಾಂತರ 24, ಶಂಕರನಾರಾಯಣ 29, ಅಮಾಸೆಬೈಲು 9, ಕಾರ್ಕಳ ನಗರ 26, ಕಾರ್ಕಳ ಗ್ರಾಮಾಂತರ 26, ಅಜೆಕಾರು 12, ಹೆಬ್ರಿ 20, ಕಾಪು 16, ಶಿರ್ವ 13, ಪಡುಬಿದ್ರಿಯಲ್ಲಿ 14 ಗಣೇಶೋತ್ಸವಗಳಿವೆ.

ಮಂಗಳೂರು ನಗರ
ಮಂಗಳೂರು ಕಮಿಷನರೆಟ್‌ ವ್ಯಾಪ್ತಿಯಲ್ಲಿ ಈ ಬಾರಿ 6 ಗಣೇಶೋತ್ಸವಗಳು ಹೆಚ್ಚಾಗಿವೆ. ಮಂಗಳೂರು ಕೇಂದ್ರ ಉಪವಿಭಾಗದ ಉತ್ತರ ಪೊಲೀಸ್‌ ಠಾಣೆ 6, ದಕ್ಷಿಣ ಪೊಲೀಸ್‌ ಠಾಣೆ 16, ಉರ್ವ 4, ಬರ್ಕೆ 5, ಪೂರ್ವ 13, ಮಂಗಳೂರು ಉತ್ತರ (ಪಣಂಬೂರು) ಉಪವಿಭಾಗದ ಪಣಂಬೂರು 6, ಕಾವೂರು 16, ಬಜಪೆ 11, ಸುರತ್ಕಲ್‌ 14, ಮೂಲ್ಕಿ 18, ಮೂಡುಬಿದಿರೆ 28, ಮಂಗಳೂರು ದಕ್ಷಿಣ ಉಪವಿಭಾಗದ ಮಂಗಳೂರು ಗ್ರಾಮಾಂತರ 6, ಕಂಕನಾಡಿ ನಗರ 7, ಉಳ್ಳಾಲ 9, ಕೊಣಾಜೆ 7 ಸೇರಿ ಒಟ್ಟು 166 ಗಣೇಶೋತ್ಸವ ಆಚರಣೆಯಾಗಲಿದೆ.

ದ.ಕ. ಗ್ರಾಮಾಂತರ
ದ.ಕ. ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ 9 ಉತ್ಸವಗಳು ಹೆಚ್ಚಿಗೆ ಆಗಿ ಒಟ್ಟು 215 ಗಣೇಶೋತ್ಸವಗಳು ನಡೆಯಲಿವೆ. ವಿವರ ಇಂತಿವೆ: ಬಂಟ್ವಾಳ ನಗರ 11, ಬಂಟ್ವಾಳ ಗ್ರಾಮಾಂತರ 19, ವಿಟ್ಲ 21, ಬೆಳ್ತಂಗಡಿ 20, ಪುಂಜಾಲಕಟ್ಟೆ 6, ವೇಣೂರು 19, ಸುಬ್ರಹ್ಮಣ್ಯ10, ಸುಳ್ಯ17, ಕಡಬ 11, ಧರ್ಮಸ್ಥಳ 17, ಬೆಳ್ಳಾರೆ 18, ಪುತ್ತೂರು ನಗರ 15, ಪುತ್ತೂರು ಗ್ರಾಮಾಂತರ 15, ಉಪ್ಪಿನಂಗಡಿಯಲ್ಲಿ 16 ಗಣೇಶೋತ್ಸವಗಳಿವೆ.

ದ.ಕ.ದಲ್ಲಿ ಪ್ರಮುಖವಾದುದು ಮಂಗಳೂರು ಸಂಘನಿಕೇತನ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ, ಫರಂಗಿಪೇಟೆ, ಸುಳ್ಯ ಗಣೇಶೋತ್ಸವ. ಕಾಸರಗೋಡು ಜಿಲ್ಲೆಯಲ್ಲಿ ಕಾಸರಗೋಡು, ಕುಂಬಳೆ, ಮಂಜೇಶ್ವರ, ಬದಿಯಡ್ಕ, ಮುಳ್ಳೇರಿಯ, ಪೆರ್ಲದ ಉತ್ಸವಗಳು ಪ್ರಮುಖವಾದುದು. ಉಡುಪಿ ಜಿಲ್ಲೆಯಲ್ಲಿ ಕಡಿಯಾಳಿ, ಪರ್ಕಳ, ಬಾರಕೂರು ಮೊದಲಾದೆಡೆ ಹಿರಿಯ ಪೆಂಡಾಲುಗಳಲ್ಲಿ ಉತ್ಸವ ನಡೆಯುತ್ತಿದೆ.

ಪೊಲೀಸ್‌ ಬಂದೋಬಸ್ತ್
ವಿವಿಧ ಗಣೇಶೋತ್ಸವಗಳಲ್ಲಿ ಪೊಲೀಸ್‌ ಬಂದೋಬಸ್ತ್ ಒದಗಿಸಲು ಪೊಲೀಸ್‌ ಇಲಾಖೆ ಸಜ್ಜಾಗಿದೆ. ಸೂಕ್ಷ್ಮ, ಅತಿ ಸೂಕ್ಷ್ಮ, ಸಾಮಾನ್ಯ ಎಂಬ ವಿಭಾಗ ಮಾಡಿ ಅಲ್ಲಿಗೆ ಬಂದೋಬಸ್ತ್ ಒದಗಿಸಲಾಗುತ್ತದೆ. ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಿಗೆ ಹೆಚ್ಚಿನ ಗಮನ ಹರಿಸಲಾಗುತ್ತದೆ. ಜಿಲ್ಲೆಯಾದ್ಯಂತ ಸುಮಾರು 900 ಪೊಲೀಸರು ಬಂದೋಬಸ್ತ್ನಲ್ಲಿದ್ದಾರೆ. 3 ಕೆಎಸ್‌ಆರ್‌ಪಿ, 8 ಡಿಎಆರ್‌ ನಿಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ಗಣೇಶ ವಿಗ್ರಹಗಳಲ್ಲಿ ಆಕರ್ಷಣೆ
ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವಾಗ ಸಮಿತಿಯವರು ತಮ್ಮದೇ ಆದ ವಿಶೇಷ ಛಾಪು ಮೂಡಿಸಲು ಯತ್ನಿಸುತ್ತಾರೆ. ಒಂದೊಂದು ಕಡೆಒಂದೊಂದು ವೈಶಿಷ್ಟ್ಯ ಕಂಡುಬರುತ್ತದೆ. ಕೆಲವೆಡೆ ದಶಮಾನೋತ್ಸವ, ರಜತೋತ್ಸವ, ವಿಂಶತಿ ಉತ್ಸವದ ಕಾರಣ ಅದ್ದೂರಿಯಾಗಿ ಆಚರಿಸಲಾಗುತ್ತದೆ.

ಗಣೇಶೋತ್ಸವ ಬಂದೋಬಸ್ತು: ಪೊಲೀಸರಿಂದ ಪಥಸಂಚಲನ
ಮಂಗಳೂರು: ಗಣೇಶೋತ್ಸವ ಬಂದೋಬಸ್ತಿಗೆ ಸಂಬಂಧಿಸಿದಂತೆ ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್ವಾಲ್‌ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಪೊಲೀಸರಿಂದ ಪಥಸಂಚಲನ ನಡೆಯಿತು.

ನೆಹರೂ ಮೈದಾನದಿಂದ ಎ.ಬಿ. ಶೆಟ್ಟಿ ವೃತ್ತ – ಕ್ಲಾಕ್‌ ಟವರ್‌ – ಹಂಪನಕಟ್ಟೆ- ನವಭಾರತ ವೃತ್ತ – ಡೊಂಗರಕೇರಿ – ನ್ಯೂ ಚಿತ್ರಜಂಕ್ಷನ್‌ – ಕಾರ್‌ಸ್ಟ್ರೀಟ್‌ – ವೆಂಕಟರಮಣ ದೇವಸ್ಥಾನದ ವರೆಗೆ ಪಥಸಂಚಲನ ಸಾಗಿತು. ಮಂಗಳವಾರ ಆರಂಭವಾಗುವ ಸಾರ್ವಜನಿಕ ಗಣೇಶೋತ್ಸವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಧೈರ್ಯ ತುಂಬಿದರು.

ಉಪ ಆಯುಕ್ತರಾದ ಸಿದ್ಧಾರ್ಥ ಗೋಯಲ್‌, ಎಸಿಪಿಗಳಾದ ಗೀತಾ ಡಿ. ಕುಲಕರ್ಣಿ, ಮಹೇಶ್‌ ಕುಮಾರ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.