Udupi: ಜೀನ್ ಚಿಕಿತ್ಸೆ, ನಿಖರ ಔಷಧ ಸಮ್ಮೇಳನ: ಡಾ| ಕೃಷ್ಣಪ್ರಸಾದ್ ಕೂಡ್ಲು ಅವರಿಗೆ ಸಮ್ಮಾನ
Team Udayavani, Sep 27, 2024, 1:24 AM IST
ಉಡುಪಿ: ಜೆನೆಟಿಕ್ಸ್ ಆ್ಯಂಡ್ ಜೀನ್ ಥೆರಪಿ ಸಂಸ್ಥೆ ಹಾಗೂ ಬೆಂಗಳೂರಿನ ನಾರಾಯಣ ನೇತ್ರಾಲಯ ಫೌಂಡೇಶನ್ ಆಶ್ರಯ ದಲ್ಲಿ ಆನುವಂಶಿಕ ಅಸ್ವಸ್ಥತೆ, ರೋಗ ನಿರ್ಣಯ ಹಾಗೂ ನಿಖರವಾದ ಔಷಧ ಪ್ರಯೋಗ ವಿಷಯಗಳ ಬಗ್ಗೆ ರಾಷ್ಟ್ರೀಯ ಮಟ್ಟದ ಸಮ್ಮೇಳನ ಬೆಂಗಳೂರಿನಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ನೇತ್ರ ಚಿಕಿತ್ಸಾ ಸಂಶೋಧನೆಯಲ್ಲಿ ನೀಡಿದ ಕೊಡುಗೆಯನ್ನು ಪರಿಗಣಿಸಿ ಸಮ್ಮೇ ಳನದಲ್ಲಿ ಆಹ್ವಾನಿತ ಅತಿಥಿಯಾಗಿ ಭಾಗವಹಿಸಿದ ಪ್ರಸಾದ್ ನೇತ್ರಾಲಯ ಸಮೂಹ ಕಣ್ಣಿನ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕ ಡಾ| ಕೃಷ್ಣಪ್ರಸಾದ್ ಕೂಡ್ಲು ಅವರನ್ನು ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳಾದ ಡಾ| ಡಿ. ವೈ. ಚಂದ್ರಚೂಡ್ ಗೌರವಿಸಿದರು.
ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಕೂಡ್ಲಿಗಿ ಶಾಸಕ ಡಾ| ಶ್ರೀನಿವಾಸ್ ಎನ್. ಟಿ., ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ನಾರಾಯಣ ನೇತ್ರಾಲಯದ ಚೇರ್ಮನ್ ಡಾ| ರೋಹಿತ್ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.