‘ಕನ್ನಡದಲ್ಲೇ ಪ್ರಾಥಮಿಕ ಶಿಕ್ಷಣ ಸಿಗುವಂತಾಗಲಿ’
Team Udayavani, Jun 8, 2019, 6:00 AM IST
ಗಂಗೊಳ್ಳಿ: ನಮ್ಮ ದೈನಂದಿನ ಜೀವನದಲ್ಲಿ ಇಂಗ್ಲಿಷ್ ಆವಶ್ಯಕತೆ ಇದೆ ಎಂದು ಕನ್ನಡ ಭಾಷೆಯನ್ನು ನಿರ್ಲಕ್ಷಿಸುವುದು ಸರಿಯಲ್ಲ. ಮಾತೃ ಭಾಷೆಯ ಮೇಲೆ ಎಲ್ಲರಿಗೂ ಪ್ರೀತಿ, ಅಭಿಮಾನವಿರಬೇಕು ಎಂದು ಜಿ.ಪಂ. ಸದಸ್ಯೆ ಶೋಭಾ ಜಿ. ಪುತ್ರನ್ ಹೇಳಿದರು.
ಮೇಲ್ಗಂಗೊಳ್ಳಿ ಸರಕಾರಿ ಕಿ.ಪ್ರಾ. (ಹವೇ) ಶಾಲೆಯಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು.
ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಎಲ್ಲರೂ ಪ್ರಯತ್ನಿಸಬೇಕು. ಮಕ್ಕಳ ಕೊರತೆಯನ್ನು ಸ್ವಲ್ಪ ಮಟ್ಟಿಗೆ ನೀಗಿಸಲು ಪೂರ್ವ ಪ್ರಾಥಮಿಕ ತರಗತಿಗಳು ಸಹಕಾರಿಯಾಗುತ್ತವೆೆ ಎಂದರು.
ಗಂಗೊಳ್ಳಿ ರೋಟರಿ ಕ್ಲಬ್ನ ನಿಯೋಜಿತ ಅಧ್ಯಕ್ಷ ಶಿವಾನಂದ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಗಂಗೊಳ್ಳಿ ಪೊಲೀಸ್ ಠಾಣೆಯ ಎಸ್ಐ ವಾಸಪ್ಪ ನಾಯ್ಕ ಮತ್ತು ಮತ್ಸ್ಯೋದ್ಯಮಿ ಮಂಜುನಾಥ ಜಿ.ಟಿ. ಮಕ್ಕಳಿಗೆ ಪಠ್ಯ ಪುಸ್ತಕ, ನೋಟ್ ಪುಸ್ತಕ ಹಾಗೂ ಸ್ಕೂಲ್ ಬ್ಯಾಗ್ ವಿತರಿಸಿದರು.
ಗ್ರಾ.ಪಂ. ಸದಸ್ಯ ಬಿ. ರಾಘವೇಂದ್ರ ಪೈ, ಶಿಕ್ಷಕಿ ಸುನೀತಾ ದಿನೇಶ್, ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಚಂದ್ರಶೇಖರ ಎಸ್ಆರ್ಜಿ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿ.ಈಶ್ವರ, ಉಪಾಧ್ಯಕ್ಷ ನಾಗರಾಜ್ ಎಂ.ಜಿ. ಮೊದಲಾದವರು ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯ ರಮೇಶ ಮಹಾಲೆ ಸ್ವಾಗತಿಸಿದರು. ಸುಂದರ ಜಿ. ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Bengaluru; ಫ್ರಿಡ್ಜ್ ನಲ್ಲಿ ಯುವತಿಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.