ಉಭಯ ಜಿಲ್ಲೆಯಲ್ಲಿ 3,300 ಎಕರೆ ಸರಕಾರಿ ಭೂಮಿ ಒತ್ತುವರಿ ತೆರವು 


Team Udayavani, Jun 3, 2022, 6:06 AM IST

ಉಭಯ ಜಿಲ್ಲೆಯಲ್ಲಿ 3,300 ಎಕರೆ ಸರಕಾರಿ ಭೂಮಿ ಒತ್ತುವರಿ ತೆರವು 

ಉಡುಪಿ: ಗೋಮಾಳ ಸಹಿತವಾಗಿ ಸರಕಾರಿ ಭೂಮಿ ಒತ್ತುವರಿ ತೆರವು ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಉಭಯ ಜಿಲ್ಲೆಗಳಲ್ಲಿ 3,300 ಎಕರೆಗೂ ಅಧಿಕ ಭೂಮಿಯನ್ನು ಸ್ವಾಧೀನಕ್ಕೆ ಪಡೆಯಲಾಗಿದೆ.

ರಾಜ್ಯದಲ್ಲಿ ಒಟ್ಟು 62,72,812 ಎಕರೆ ಸರಕಾರಿ ಭೂಮಿಯಿದ್ದು, ಅದರಲ್ಲಿ 14,25,464 ಎಕರೆ ಒತ್ತುವರಿಯಾಗಿದೆ. ಈಗಾಗಲೇ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‌ ಮೂಲಕ ಸಂಬಂಧಪಟ್ಟವರಿಗೆ ನೋಟಿಸ್‌ ನೀಡಿ, ವಿಚಾರಣೆ ನಡೆಸಿ ಒತ್ತುವರಿ ತೆರವುಗೊಳಿಸಲಾಗುತ್ತಿದೆ.

ಒತ್ತುವರಿ ಗುರುತಿಸಲು ಮತ್ತು ನಿಗಾವಣೆಗೆ ಸರಕಾರಿ ಜಮೀನು ಸಂರಕ್ಷಣ ಸಮಿತಿಯನ್ನು ಸರಕಾರ ಈಗಾಗಲೇ ನೇಮಿಸಿದೆ. ಸಮಿತಿಯ ಸಲಹೆಯನುಸಾರ ಸರಕಾರದ ಹಂತದಲ್ಲಿ ಒತ್ತುವರಿ ತೆರವಿಗೆ ಸಂಬಂಧಿಸಿ ಸೂಚನೆ ಬರಲಿದೆ. ಅದರಂತೆ ಜಿಲ್ಲೆ, ತಾಲೂಕು ಹಂತದಲ್ಲಿ ಅನುಷ್ಠಾನ ಮಾಡಲಾಗುತ್ತದೆ. ಖಾಲಿ ಇರುವ ಸರಕಾರಿ ಜಮೀನುಗಳನ್ನು ಗುರುತಿಸಿ ನಾಮಫ‌ಲಕ ಅಳವಡಿಸುವುದು ಮತ್ತು ಆವಶ್ಯಕತೆ ಇರುವಲ್ಲಿ ತಂತಿ ಬೇಲಿ ಹಾಕುವ ಕಾರ್ಯವನ್ನು ಇಲಾಖೆ ಮಾಡುತ್ತಿದೆ ಎಂದು ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಉಭಯ ಜಿಲ್ಲೆಯ ಒತ್ತುವರಿ ಮಾಹಿತಿ:

ಉಡುಪಿ ಜಿಲ್ಲೆಯಲ್ಲಿ ಲಭ್ಯವಿರುವ 2,59,868 ಎಕರೆ ಸರಕಾರಿ ಭೂಮಿಯಲ್ಲಿ 1,11,499 ಎಕರೆ ಒತ್ತುವರಿಯಾಗಿದ್ದು, ಇದರಲ್ಲಿ 2021ರ ಡಿಸೆಂಬರ್‌ ಅಂತ್ಯಕ್ಕೆ 3512 ಎಕರೆ ಒತ್ತುವರಿ ತೆರವಿಗೆ ಬಾಕಿ ಉಳಿದೆ. ದಕ್ಷಿಣ ಕನ್ನಡದಲ್ಲಿ ಲಭ್ಯವಿರುವ 5,63,046 ಎಕರೆ ಸರಕಾರಿ ಭೂಮಿಯಲ್ಲಿ 64,521 ಎಕರೆ ಒತ್ತುವರಿಯಾಗಿದ್ದು, 2021ರ ಡಿಸೆಂಬರ್‌ ಅಂತ್ಯಕ್ಕೆ 13,218 ಎಕರೆ ಒತ್ತುವರಿ ತೆರವಿಗೆ ಬಾಕಿ ಉಳಿದಿದೆ. ಒಟ್ಟಾರೆಯಾಗಿ ಉಭಯ ಜಿಲ್ಲೆಗಳ 16,730 ಎಕರೆ ಒತ್ತುವರಿ ತೆರವಿಗೆ ಬಾಕಿಯಿದೆ. 2013ರಿಂದ ಈಚೆಗೆ ಎರಡು ಜಿಲ್ಲೆಗಲ್ಲಿ 3,300 ಎಕರೆ ಒತ್ತುವರಿ ತೆರವು ಮಾಡಲಾಗಿದೆ. ಉಳಿದಂತೆ 2013ರ ಮೊದಲು ತೆರವು ಪ್ರಕ್ರಿಯೆ ನಡೆದಿದೆ.

ಅಕ್ರಮ ಸಕ್ರಮ :

ಸರಕಾರಿ ಭೂಮಿಯನ್ನು ಹಲವು ವಿಧಗಳಲ್ಲಿ ಒತ್ತುವರಿ ಮಾಡಿಕೊಳ್ಳಲಾಗಿದೆ. ನಿವೇಶನ ರಹಿತರು, ದಾಖಲೆ ಇಲ್ಲದೆ ಹಲವು ವರ್ಷಗಳಿಂದ ಮನೆ ಮಾಡಿಕೊಂಡು ಕುಟುಂಬ ಸಮೇತರಾಗಿ ವಾಸವಿರುವ ಕಡೆಗಳಲ್ಲಿ ಅವರಿಗೆ ಹಕ್ಕುಪತ್ರ ನೀಡುವ ಪ್ರಕ್ರಿಯೆಯೂ ನಡೆಯುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಸಹಿತವಾಗಿ ವಿವಿಧ ಜಿಲ್ಲೆಗಳಲ್ಲಿ 94ಸಿ, 50-53ರ ಅಡಿಯಲ್ಲಿ ಹೆಚ್ಚು ಜಮೀನು ಒತ್ತುವರಿಯಾಗಿದೆ. ಕೆಲವೊಂದು ಪ್ರಕರಣಗಳು ಸದ್ಯ ನ್ಯಾಯಾಲಯದಲ್ಲಿ ವಿಚಾರಣ ಹಂತದಲ್ಲಿದೆ. ಇಂತಹ ಅಕ್ರಮ ಸಕ್ರಮ ಪ್ರಕರಣಗಳಲ್ಲಿ ತೆರವುಗೊಳಿಸದೆ ಹಕ್ಕುಪತ್ರ ನೀಡಲಾಗುವುದು.

ಒತ್ತುವರಿ ತೆರವು ಕಾರ್ಯ ತಹಶೀಲ್ದಾರ್‌ ಹಂತದಲ್ಲಿ ನಡೆಯುತ್ತಿರುತ್ತದೆ. ಸ್ಥಳೀಯವಾಗಿ ಬಂದಿರುವ ದೂರುಗಳನ್ವಯ ಸರಕಾರಿ ದಾಖಲೆಗಳನ್ನು ಪರಿಶೀಲಿಸಿ ಮುಂದಿನ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ. ಗೋಮಾಳ ಅಥವಾ ಸರಕಾರಿ ಜಮೀನು ಒತ್ತುವರಿಗೆ ಅವಕಾಶ ಇರುವುದಿಲ್ಲ. – ಕೂರ್ಮಾ ರಾವ್‌ ಎಂ.,  ಉಡುಪಿ ಜಿಲ್ಲಾಧಿಕಾರಿ

 

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.