ಹೊನ್ನಾಳ ಶಾಲೆ ಉಳಿಸಲು ಹಳೆ ವಿದ್ಯಾರ್ಥಿಗಳ ಶತ ಪ್ರಯತ್ನ


Team Udayavani, Jun 10, 2018, 6:00 AM IST

0606bvre8.jpg

ಬ್ರಹ್ಮಾವರ: ಗ್ರಾಮೀಣ ಪರಿಸರದ ಸರಕಾರಿ ಶಾಲೆಯೊಂದನ್ನು ಹೇಗೆ ಉಳಿಸಬಹುದು ಎನ್ನುವುದಕ್ಕೆ ಹೊನ್ನಾಳ ಸರಕಾರಿ ಶಾಲಾ ಹಳೆ ವಿದ್ಯಾರ್ಥಿಗಳು ಮಾದರಿಯಾಗಿದ್ದಾರೆ.

ಆಂಗ್ಲ ಮಾಧ್ಯಮ ಶಾಲೆಗಳ ಕಾರಣದಿಂದ ಗ್ರಾಮದ ಅನುದಾನಿತ ಶಾಲೆಯೊಂದು ಕಣ್ಣು ಮುಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಗ್ರಾಮದ ಯುವಕರ ಪಡೆ, ಈಗಿರುವ ಸರಕಾರಿ ಶಾಲೆಯನ್ನು ಉಳಿಸಲು ಶತ ಪ್ರಯತ್ನ ನಡೆಸುತ್ತಿದೆ.  

ಮೂಲ ಸೌಕರ್ಯ
ಶತಮಾನ ಕಂಡ ಹೊನ್ನಾಳ ಸರಕಾರಿ ಉರ್ದು ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿರುವುದನ್ನು ಹಳೆ ವಿದ್ಯಾರ್ಥಿ ಸಂಘ ಮನಗಂಡಿದೆ. ಇದಕ್ಕಾಗಿ ದಾನಿಗಳ ನೆರವಿನಿಂದ ಶಾಲೆಗೆ ಅಗತ್ಯ ಇರುವ ಮೂಲ ಸೌಕರ್ಯ ಒದಗಿಸುತ್ತಿದೆ ಅಲ್ಲದೇ ಈ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿ, ಯುಕೆಜಿ ಯನ್ನು ಆರಂಭಿಸಿದೆ.

ಶಾಲೆಯ ಹಿನ್ನೆಲೆ
1914ರಲ್ಲಿ ಖಾಸಗಿ ಕಟ್ಟಡದಲ್ಲಿ ಸ್ಥಾಪನೆಗೊಂಡ ಈ ಶಾಲೆಯು ಆರಂಭದಲ್ಲಿ 5ನೇ ತರಗತಿವರೆಗೆ, ಮುಂದೆ ಸ್ವಂತ ಕಟ್ಟಡದ ಬಳಿಕ ಏಳನೇ ತರಗತಿವರೆಗೆ ಆರಂಭಿಸಿತು. ಗ್ರಾಮಸ್ಥರೇ ಖರೀದಿಸಿದ ಸುಮಾರು 60 ಸೆಂಟ್ಸ್‌ ಜಾಗದಲ್ಲಿ ಸರಕಾರ ಕಟ್ಟಡ ನಿರ್ಮಿಸಿತ್ತು. ಪ್ರಸ್ತುತ ಈ ಶಾಲೆಯಲ್ಲಿ ಒಟ್ಟು ನಾಲ್ಕು ಶಿಕ್ಷಕರು ಹಾಗೂ 82 ಮಕ್ಕಳಿದ್ದಾರೆ. ಹಿಂದಿನ ವರ್ಷ 91 ಮಕ್ಕಳು ಕಲಿಯುತ್ತಿದ್ದರು. ಮುಂದಿನ ಶೈಕ್ಷಣಿಕ ವರ್ಷಕ್ಕೆ ಒಂದನೆ ತರಗತಿಗೆ ಈ ವರೆಗೆ ಏಳು ಮಂದಿ ದಾಖಲಾಗಿದ್ದಾರೆ.

ಹಳೆ ವಿದ್ಯಾರ್ಥಿ ಸಂಘ ರಚನೆ
ದಾಖಲಾತಿ ಕುಸಿತದಿಂದಾಗಿ ಸೊರಗುತ್ತಿರುವ ಶಾಲೆ ಉಳಿಸಲು ಹಳೆ ವಿದ್ಯಾರ್ಥಿಗಳು ಮುಂದಾದರು. ಇದಕ್ಕಾಗಿ ಹೊನ್ನಾಳ, ದುಬೈ, ಸೌದಿ ಅರೆಬಿಯಾ, ಕುವೈಟ್‌, ಒಮನ್‌ ಘಟಕಗಳನ್ನು ಸ್ಥಾಪಿಸಿದರು. ಈ ಶಾಲೆಗೆ ಹೊನ್ನಾಳ, ಬೈಕಾಡಿ, ಕುಕ್ಕುಡೆ, ಗಾಂಧಿನಗರಗಳಿಂದ ಎಲ್ಲ ಧರ್ಮಗಳ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಇವರಿಗೆ ಅನುಕೂಲವಾಗಲು ಹಳೆ ವಿದ್ಯಾರ್ಥಿ ಸಂಘ ದುಬೈ ಘಟಕದ ಅಧ್ಯಕ್ಷ ಅಶ#ಕ್‌ ಜೆ. ನೇತೃತ್ವದಲ್ಲಿ ಶಾಲಾ ವಾಹನವನ್ನು ಖರೀದಿಸಲಾಗಿದೆ. ದಾನಿಗಳ ನೆರವಿನಿಂದ ರಂಗಮಂದಿರ, ಕುಡಿಯುವ ನೀರಿನ ವ್ಯವಸ್ಥೆಯನ್ನು ಶಾಲೆಗೆ ಒದಗಿಸಲಾಗಿದೆ. 

ಶಾಲೆಗಾಗಿ ಕ್ರಿಕೆಟ್‌ ಪಂದ್ಯಾಟ
ಮುಂದೆ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಯನ್ನು ಆರಂಭಿಸಲು ಚಿಂತಿಸಿದ ಸಂಘ ಅದಕ್ಕಾಗಿ ಹಣ ಸಂಗ್ರಹಿಸಲು ಯೋಜನೆ ಹಾಕಿಕೊಂಡಿತು. ಕಳೆದ ವರ್ಷದಿಂದ ಹೊನ್ನಾಳ ಕ್ರಿಕೆಟ್‌ ಪ್ಲೇಯರ್ ಸಹಯೋಗದಲ್ಲಿ ಎರಡು ಕ್ರಿಕೆಟ್‌ ಪಂದ್ಯಾಟ ನಡೆಸಿ ಕ್ರಮವಾಗಿ 2 ಲಕ್ಷ ಹಾಗೂ ಒಂದು ಲಕ್ಷ ರೂ. ಸಂಗ್ರಹಿಸಿತು.

ದುಡಿಮೆಯ ಪಾಲು
ಗಲ್ಫ್ ದೇಶಗಳಲ್ಲಿ ದುಡಿಯುತ್ತಿರುವ ವಿವಿಧ ಘಟಕಗಳ ಸದಸ್ಯರು ತಮ್ಮ ದುಡಿಮೆಯಲ್ಲಿ ನೆರವು ನೀಡಿ ಶಾಲೆಯಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಯನ್ನು ಆರಂಭಿಸಿದ್ದು, ಈವರೆಗೆ ಎಲ್‌ಕೆಜಿಗೆ 20 ಹಾಗೂ ಯುಕೆಜಿಗೆ 14 ಮಕ್ಕಳು ಸೇರ್ಪಡೆ ಗೊಂಡಿದ್ದಾರೆ. ಸಂಘದ ವತಿಯಿಂದ ಈ ಎರಡು ತರಗತಿಗೆ ಶಿಕ್ಷಕರನ್ನು ಮತ್ತು ಓರ್ವ ಗುಮಾಸ್ತನನ್ನು ನೇಮಕ ಮಾಡಲಾಗಿದೆ.

ಮುಖ್ಯೋಪಾಧ್ಯಾಯರೇ ಇಲ್ಲ!
ಪ್ರಸ್ತುತ ಈ ಶಾಲೆಗೆ ಮುಖ್ಯೋಪಾಧ್ಯಾಯರೇ ಇಲ್ಲ. ಶಾಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ನಡೆಸಿದ್ದ ಆಗಿನ ಮುಖ್ಯೋಪಾಧ್ಯಾಯ ಇಮಾಮ್‌ ಸಾಹೇಬ್‌ ಟಂಕಸಾಲಿ ಮೂರು ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ಅವರ ಅನಂತರ ಮುಖ್ಯೋಪಾಧ್ಯಾಯರ ನೇಮಕ ಆಗಿಲ್ಲ. ಈಗ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಮೆಹಬೂಬಿ ಪಣಿಬಂದ್‌ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಶಾಲೆಗೆ ಮುಖ್ಯೋಪಾಧ್ಯಾಯರ ನೇಮಕ ಹಾಗೂ ಸುಸಜ್ಜಿತ ಮೈದಾನ ಆಗಬೇಕು ಎನ್ನುವುದು ಗ್ರಾಮಸ್ಥರ ಪ್ರಮುಖ ಬೇಡಿಕೆಯಾಗಿದೆ.

ಮುಖ್ಯ ಶಿಕ್ಷಕರ ನೇಮಕ
ನೀತಿ ಸಂಹಿತೆ ಮುಗಿದ ತತ್‌ಕ್ಷಣ ಜೂ.18ರಿಂದ ಅರ್ಹತೆ ಇರುವ ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರ ಭಡ್ತಿ ಪ್ರಕ್ರಿಯೆ ನಡೆಯಲಿದೆ.ಆಗ ಈ ಶಾಲೆಯನ್ನು ಕೂಡ ಗಣನೆಗೆ ತೆಗೆದುಕೊಳ್ಳಲಾಗುವುದು. 
– ಶೇಷಶಯನ ಕಾರಿಂಜ ಡಿಡಿಪಿಐ, ಉಡುಪಿ

ವಾರ್ಷಿಕ 6 ಲಕ್ಷ ರೂ.
ಎಲ್‌ಕೆಜಿ, ಯುಕೆಜಿಗೆ ನೇಮಕ ಮಾಡಿರುವ ಶಿಕ್ಷಕರ, ಗುಮಾಸ್ತರ, ಶಾಲಾ ವಾಹನದ ಚಾಲಕರ ವೇತನ, ಡೀಸೆಲ್‌ ಖರ್ಚು ಸೇರಿದಂತೆ ವರ್ಷಕ್ಕೆ ಆರು ಲಕ್ಷ ರೂ.ವರೆಗೆ ವೆಚ್ಚ ಆಗುತ್ತದೆ. ಅದನ್ನೆಲ್ಲ ಸಂಘವೇ ಭರಿಸುತ್ತದೆ. ಒಟ್ಟಾರೆ ಶಾಲೆಯ ಉಳಿವು ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ನಮ್ಮ ಉದ್ದೇಶ 
– ಆರಿಫ‌ುಲ್ಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ

ಉಳಿಸುವ ಪ್ರಯತ್ನ
ಈ ಗ್ರಾಮದಲ್ಲಿ ಬಡವರೇ ಹೆಚ್ಚಿನ ಸಂಖ್ಯೆಯಲ್ಲಿದ್ದು ಇವರಿಗೆ ಖಾಸಗಿ ಶಿಕ್ಷಣ ಗಗನ ಕುಸುಮವಾಗಿದೆ. ಈ ಸರಕಾರಿ ಶಾಲೆಯನ್ನು ಉಳಿಸಿಕೊಳ್ಳದಿದ್ದರೆ ಗ್ರಾಮದ ಮಕ್ಕಳು ಸರಕಾರಿ ಶಾಲೆಗಾಗಿ 8 ಕಿ.ಮೀ. ದೂರದ ಬ್ರಹ್ಮಾವರಕ್ಕೆ ಹೋಗಬೇಕು. ಈ ಎಲ್ಲ ಕಾರಣಕ್ಕಾಗಿ ಇದ್ದ ಸರಕಾರಿ ಶಾಲೆಯನ್ನು ಉಳಿಸುವ ಪ್ರಯತ್ನವನ್ನು ನಾವೆಲ್ಲ ಮಾಡುತ್ತಿದ್ದೇವೆ.
 - ಎಚ್‌. ಸುಬಾನ್‌ ಅಹ್ಮದ್‌, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ

– ಪ್ರವೀಣ್‌ ಮುದ್ದೂರು

ಟಾಪ್ ನ್ಯೂಸ್

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.