Udupi ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹತ್ತರ ತೀರ್ಪು

ಸುಸ್ತಿದಾರ ಅಡವಿರಿಸಿದ ಬಂಗಾರ ಹಿಂದೆ ಪಡೆಯಲು ಅರ್ಹನಲ್ಲ

Team Udayavani, Sep 5, 2024, 6:30 AM IST

Udupi ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹತ್ತರ ತೀರ್ಪು

ಉಡುಪಿ: ಗ್ರಾಹಕನು ಸ್ಥಿರಾಸ್ತಿ ಅಡಮಾನ ಸಾಲ ಪಡೆದು ಸುಸ್ತಿದಾರನಾದಾಗ ಅದೇ ಸಂಸ್ಥೆಯಲ್ಲಿ ಅಡಮಾನವಿರಿಸಿದ ಬಂಗಾರದ ಸಾಲ ಸಂದಾಯ ಮಾಡಿದರೂ, ಅಡವಿರಿಸಿದ ಬಂಗಾರ ಹಿಂದೆ ಪಡೆಯಲು ಅರ್ಹನಲ್ಲ ಎಂದು ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮಹತ್ತರ ತೀರ್ಪು ನೀಡಿದೆ.

ಉಡುಪಿಯ ಗುರುಮಾಚಿದೇವ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿಯ ಶಾಖೆಯಲ್ಲಿ 2015ರ ಎ. 30ರಂದು ಸಂಸ್ಥೆಯ ಗ್ರಾಹಕರೊಬ್ಬರು 25 ಲ.ರೂ.ಆಸ್ತಿ ಅಡಮಾನ ಸಾಲ ಪಡೆದಿದ್ದರು. ಈ ಸಾಲವು ಸುಸ್ತಿಯಾಗಿದ್ದು, ಸಂಸ್ಥೆಯು ಸಾಲ ವಸೂಲಾತಿಗಾಗಿ ಕ್ರಮ ಕೈಗೊಂಡಿತ್ತು. ಈ ಬಗ್ಗೆ ಸಹಕಾರ ಸಂಘಗಳ ಉಪನಿಬಂಧಕರ ನ್ಯಾಯಾಲಯದಲ್ಲಿ ಅಸಲು ಮತ್ತು ಬಡ್ಡಿ ಪಾವತಿಸಲು ಸಾಲಗಾರನ ವಿರುದ್ಧ ಆದೇಶವಾಗಿದ್ದು, ಈ ಪ್ರಕರಣವು ಅಮಲ್ಜಾರಿ ಪ್ರಕ್ರಿಯೆಯಲ್ಲಿದೆ.

ಇದೇ ಗ್ರಾಹಕರು 2018ರ ಮಾ. 24ರಂದು ಸುಮಾರು 630 ಗ್ರಾಂ. ಬಂಗಾರದ ಒಡವೆಗಳನ್ನು ಅಡಮಾನವಿರಿಸಿ 16 ಲ.ರೂ. ಸಾಲ ಪಡೆದಿದ್ದು, ಆ ಸಾಲವನ್ನು ಚುಕ್ತ ಮಾಡಿ ತಾನು ಅಡವಿರಿಸಿದ ಬಂಗಾರವನ್ನು ತನಗೆ ನೀಡಬೇಕೆಂದು ಕೋರಿಕೊಂಡರು. ಆದರೆ ಸಂಸ್ಥೆಯು ಆಸ್ತಿ ಅಡಮಾನ ಸಾಲ ಸಂಪೂರ್ಣ ಸಂದಾಯ ಮಾಡಿದರೆ ಮಾತ್ರ ಅಡವಿರಿಸಿದ ಬಂಗಾರವನ್ನು ಹಿಂಪಡೆಯಲು ಅವಕಾಶವಿದೆ ಎಂದು ಹೇಳಿ ಗ್ರಾಹಕನ ಬೇಡಿಕೆಯನ್ನು ತಿರಸ್ಕರಿಸಿತ್ತು. ಈ ಬಗ್ಗೆ ಗ್ರಾಹಕನು ಉಡುಪಿಯ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮುಂದೆ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಅಧ್ಯಕ್ಷರ ಮೇಲೆ ದೂರು ದಾಖಲಿಸಿ, ತಾನು ಅಡಮಾನವಿಸಿರಿದ ಬಂಗಾರವನ್ನು ಹಿಂದಿರುಗಿಸಬೇಕು ಮತ್ತು ತನಗೆ 3 ಲ.ರೂ. ಮಾನಸಿಕ ವೇದನೆಯೊಂದಿಗೆ 10,000 ರೂ. ನೋಟಿಸಿನ ಖರ್ಚು ನೀಡಬೇಕೆಂದು ಕೇಳಿಕೊಂಡಿದ್ದರು.

ಉಭಯ ವಾದಗಳನ್ನು ಆಲಿಸಿದ ಆಯೋಗವು ದೂರುದಾರರು ಅಡವಿರಿಸಿದ ಚಿನ್ನಾಭರಣವನ್ನು ಸಂಸ್ಥೆಯಿಂದ ಹಿಂದೆ ಪಡೆಯಲು ಅರ್ಹರಲ್ಲವೆಂದು ಆ ದೂರನ್ನು ವಜಾಗೊಳಿಸಿ ಆದೇಶ ನೀಡಿದೆ. ಗುರುಮಾಚಿದೇವ ಸಂಸ್ಥೆಯ ಪರವಾಗಿ ಉಡುಪಿಯ ವಕೀಲ ಎಸ್‌. ಗುರುರಾಜ್‌ ಐತಾಳ್‌ ವಾದ ಮಂಡಿಸಿದ್ದರು.

ಸಂಸ್ಥೆಗೆ ಅಧಿಕಾರವಿದೆ: ಅಧ್ಯಕ್ಷರು
ಭಾರತೀಯ ಕರಾರು ಅಧಿನಿಯಮ ಕಲಂ 171ರಂತೆ ಯಾವುದೇ ಹಣಕಾಸು ಸಂಸ್ಥೆಯಲ್ಲಿ ಗ್ರಾಹಕನು ಸಾಲ ಪಡೆದು ಸುಸ್ತಿದಾರನಾದರೆ ಅಂತಹ ವ್ಯಕ್ತಿಗೆ ಸೇರಿದ ಚರ ಸೊತ್ತುಗಳನ್ನು ಕಾನೂನು ರೀತಿಯಲ್ಲಿ ಮುಟ್ಟಗೋಲು ಹಾಕಲು ಸಾಲ ನೀಡಿದ ಸಂಸ್ಥೆಗೆ ಅಧಿಕಾರವಿದೆ ಎಂದು ವಕೀಲ ಹಾಗೂ ಗುರುಮಾಚಿದೇವ ವಿ.ಸ.ಸ ನಿ. ಅಧ್ಯಕ್ಷ ಎಚ್‌. ಆನಂದ ಮಡಿವಾಳ ತಿಳಿಸಿದ್ದಾರೆ.

ಟಾಪ್ ನ್ಯೂಸ್

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

Traffic-Jam

Democracy Day: ಮಾನವ ಸರಪಳಿ; ಉಭಯ ಜಿಲ್ಲೆಗಳಲ್ಲಿ ವಾಹನ ಚಾಲಕರು, ಸಾರ್ವಜನಿಕರು ಹೈರಾಣು!

Udupi1

International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

1-mmmm

PM Modi ಕಿಡಿ ; ರೊಹಿಂಗ್ಯಾ ಜತೆ ಜೆಎಂಎಂ ಶಾಮೀಲಾಗಿದೆ

1-weewqeqwe

Bihar;ಹೊಲಕ್ಕೆ ನುಗ್ಗಿದ ರೈಲು ಎಂಜಿನ್‌: ನೆಟ್ಟಿಗರ ಕಟು ಟೀಕೆ

Malpe

Holiday: ಮಲ್ಪೆ ಬೀಚ್‌ನಲ್ಲಿ ಜನಸಂದಣಿ; ತಡೆಬೇಲಿ ದಾಟಿ ನೀರಿನಾಟದಲ್ಲಿ ನಿರತ ಪ್ರವಾಸಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi1

International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ

Malpe

Holiday: ಮಲ್ಪೆ ಬೀಚ್‌ನಲ್ಲಿ ಜನಸಂದಣಿ; ತಡೆಬೇಲಿ ದಾಟಿ ನೀರಿನಾಟದಲ್ಲಿ ನಿರತ ಪ್ರವಾಸಿಗರು

Karkala

Karkala: ಬಹುಭಾಷೆ, ಬಹುಶಿಸ್ತೀಯ ಶಿಕ್ಷಣ ಅತ್ಯಗತ್ಯ: ಪ್ರೊ.ಅನಿಲ್‌ ಸಹಸ್ರಬುದ್ಧೆ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

train-track

Landslide: ತುರ್ತು ಬ್ರೇಕ್‌ ಹಾಕಿದ ಕಾರಣ ತಪ್ಪಿದ ರೈಲು ದುರಂತ

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

1-ghhh

ಹೃದಯಾಘಾತ: ಶಾಲೆಯಲ್ಲೇ 3ನೇ ತರಗತಿ ವಿದ್ಯಾರ್ಥಿನಿ ಸಾ*ವು

Traffic-Jam

Democracy Day: ಮಾನವ ಸರಪಳಿ; ಉಭಯ ಜಿಲ್ಲೆಗಳಲ್ಲಿ ವಾಹನ ಚಾಲಕರು, ಸಾರ್ವಜನಿಕರು ಹೈರಾಣು!

CBI

Trainee doctor ಹ*ತ್ಯೆ ಕೇಸು: ಮಾಜಿ ಪ್ರಿನ್ಸಿ ಸಂದೀಪ್‌ 17ರ ವರೆಗೆ ಸಿಬಿಐ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.