Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

ಸಂಪೂರ್ಣ ಮುಳುಗಡೆಯಾದ ರಸ್ತೆ

Team Udayavani, Jul 5, 2024, 12:55 AM IST

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

ಕುಂದಾಪುರ: ಕೊಲ್ಲೂರು ಘಾಟಿ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಗುರುವಾರ ಬೆಳಗ್ಗಿನ ಜಾವ 3 ಗಂಟೆಯ ಸುಮಾರಿಗೆ ಸೌಪರ್ಣಿಕಾ ನದಿ ಪಾತ್ರದ ನಾವುಂದ ಗ್ರಾಮದ ಸಾಲುºಡಾ, ಅರೆಹೊಳೆ, ಕೆಳಾಬದಿ ಪ್ರದೇಶಗಳು ಜಲಾವೃತವಾಗಿವೆ.

ನೂರಕ್ಕೂ ಮಿಕ್ಕಿ ಮನೆಗಳು ಹೊರಗಿನ ಸಂಪರ್ಕವನ್ನು ಕಡಿತಗೊಂಡಿದ್ದು, ನೂರಾರು ಎಕ್ರೆ ನಾಟಿ ಮಾಡಿರುವ ಗದ್ದೆಗಳು ಜಲಾವೃತಗೊಂಡಿವೆ.

ನಾವುಂದದಿಂದ ಸಾಲ್ಬುಡಾ, ಅರೆಹೊಳೆ ಸಂಪರ್ಕ ರಸ್ತೆ ಸಂಪೂರ್ಣ ಮುಳುಗಡೆಯಾಗಿದೆ. ಜನರು ಪೇಟೆಗೆ ಬರಲು ದೋಣಿಯನ್ನೇ ಆಶ್ರಯಿ ಸಬೇಕಾಯಿತು. ಸಾಲುºಡಾ ಭಾಗದಲ್ಲಿ 30 ಹಾಗೂ ಅರೆಹೊಳೆ ಪ್ರದೇಶದಲ್ಲಿ 70ಕ್ಕೂ ಮಿಕ್ಕಿ ಮನೆಗಳಿವೆ. ಅವರೆಲ್ಲ ಇದೇ ರಸ್ತೆಯನ್ನು ಅವಲಂಬಿಸಿದ್ದರು.

ನಾಟಿ ಮಾಡಿದ ಗದ್ದೆ ಜಲಾವೃತ
ಅರೆಹೊಳೆ, ಸಾಲ್ಬುಡಾ ಭಾಗದಲ್ಲಿ ಕೆಲವು ದಿನಗಳ ಹಿಂದಷ್ಟೇ ನಾಟಿ ಮಾಡಿರುವ ನೂರಾರು ಗದ್ದೆಗಳು ಸಂಪೂರ್ಣ ಮುಳುಗಡೆಯಾಗಿವೆ. ಕೆಲವು ಗದ್ದೆಗಳಿಗೆ ಎರಡು ದಿನಗಳ ಹಿಂದಷ್ಟೇ ನಾಟಿ ಕಾರ್ಯ ಆಗಿತ್ತು. ಅವು ಕೊಳೆತು ಹೋಗುವ ಸಾಧ್ಯತೆಯಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಬಡಾಕೆರೆ, ಮರವಂತೆಯಲ್ಲೂ ನೆರೆ
ನಾಡ ಗ್ರಾಮದ ಚಿಕ್ಕಳ್ಳಿ, ಬಡಾಕೆರೆ, ಪಡುಕೋಣೆ, ಮರವಂತೆ, ಕುರು ಕುದ್ರು ಭಾಗದಲ್ಲೂ ಗದ್ದೆಗಳು ಜಲಾವೃತಗೊಂಡಿವೆ. ಪಡುಕೋಣೆ – ಮರವಂತೆ ರಸ್ತೆಯಲ್ಲೂ ಭಾರೀ ನೀರು ಹರಿಯುತ್ತಿತ್ತು.

ಎಸ್‌ಡಿಆರ್‌ಎಫ್‌ ತಂಡ ಆಗಮನ
ರಾಜ್ಯ ವಿಪತ್ತು ನಿರ್ವಹಣ ಪಡೆ (ಎಸ್‌ಡಿಆರ್‌ಎಫ್‌) ತಂಡ ಹಾಗೂ ಬೈಂದೂರಿನ ಅಗ್ನಿ ಶಾಮಕ ದಳದ ಸಿಬಂದಿ ಸಾಲುºಡಾಕ್ಕೆ ಬೆಳಗ್ಗೆಯೇ ಆಗಮಿಸಿದೆ. ಸ್ಥಳೀಯ ಯುವಕರು ಅಗತ್ಯವಿರುವವರನ್ನು ದೋಣಿ ಮೂಲಕ ಕರೆದೊಯ್ದರು. ತಾಲೂಕು ಆಡಳಿತದಿಂದ ನಾವುಂದದ ಶಾಲೆಯಲ್ಲಿ ಕಾಳಜಿ ಕೇಂದ್ರವನ್ನು ತೆರೆಯ ಲಾಗಿದೆ. ಬೈಂದೂರಿನ 6 ಕಡೆ ಕೇಂದ್ರ ತೆರೆಯಲು ಸಿದ್ಧತೆ ನಡೆಸಲಾಗಿದೆ.

ತಹಶೀಲ್ದಾರ್‌ ಭೇಟಿ
ಸಾಲ್ಬುಡಾ, ಅರೆಹೊಳೆ ಪ್ರದೇಶಕ್ಕೆ ಬೈಂದೂರು ತಹಶೀಲ್ದಾರ್‌ ಪ್ರದೀಪ್‌, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭಾರತಿ ಸಹಿತ ಪ್ರಮುಖರು ದೋಣಿಯಲ್ಲಿ ತೆರಳಿ ಸ್ಥಳೀಯರ ಸಂಕಷ್ಟ ಆಲಿಸಿದರು. ರಸ್ತೆಯನ್ನು ಎತ್ತರಗೊಳಿಸಲು ಮನವಿ ಮಾಡಿದ್ದರೂ ಇದನ್ನು ಗಂಭೀರವಾಗಿ ಪರಿಗಣಿಸದ ಬಗ್ಗೆ ಹಾಗೂ ದೋಣಿಗೆ ಸರಿಯಾದ ವ್ಯವಸ್ಥೆ ಕಲ್ಪಿಸದ ಕುರಿತು ಸ್ಥಳೀಯರು ಆಕ್ರೋಶ ಹೊರಹಾಕಿದರು.

ವೃದ್ಧರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯಾಸ
ಸಾಲ್ಬುಡಾದಲ್ಲಿ ಮುದುರ ಎಂಬ ವೃದ್ಧರೊಬ್ಬರು ಗುರುವಾರ ಬೆಳಗ್ಗೆ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಕರೆ ದೊಯ್ಯಲು ತೀವ್ರ ಪ್ರಯಾಸ ಪಡಬೇಕಾಯಿತು. ದೋಣಿ ಮೂಲಕ ಮನೆಯವರು ಹಾಗೂ ಊರವರು ಸೇರಿ ನಾವುಂದದ ಈಚೆ ಬದಿಗೆ ಕರೆದುಕೊಂಡು ಬಂದು, ಬಳಿಕ ಆಸ್ಪತ್ರೆಗೆ ದಾಖಲಿಸಲಾಯಿತು.

ಜಾನುವಾರುಗಳಿಗೆ ಸಂಕಷ್ಟ
ಸಾಲ್ಬುಡಾ ಹಾಗೂ ಅರೆಹೊಳೆ ಪ್ರದೇಶಗಳು ಸಂಪೂರ್ಣ ಮುಳುಗಡೆಯಾಗಿದ್ದು, ಇಲ್ಲಿನ ಮನೆಗಳನ್ನು ತುಸು ಎತ್ತರದ ಪ್ರದೇಶದಲ್ಲಿ ಕಟ್ಟಿರುವುದರಿಂದ ಮನೆಯೊಳಗೆ ನೀರು ನುಗ್ಗುವ ಸಾಧ್ಯತೆ ಇಲ್ಲ. ಆದರೆ ಮನೆಯಂಗಳ, ಬಾವಿಗಳು, ಜಾನುವಾರು ಕೊಟ್ಟಿಗೆಗಳಲ್ಲಿ ಭಾರೀ ಪ್ರಮಾಣದ ನೀರು ನಿಂತಿವೆ. ಇದರಿಂದ ಜಾನುವಾರುಗಳಿಗೆ ತುಂಬಾ ಸಮಸ್ಯೆಯಾಗುತ್ತಿದೆ. ಇಲ್ಲಿನ ಹೆಚ್ಚಿನ ಮನೆಗಳಲ್ಲಿ ಜಾನುವಾರುಗಳಿವೆ. ನೆರೆ ಬಂದಾಗ ಬಳಸಲು ನಾವುಂದ ಭಾಗದಲ್ಲಿ ತಾತ್ಕಾಲಿಕ ಶೆಡ್‌ ಮಾಡಬೇಕು ಎಂಬ ಸ್ಥಳೀಯರ ಬೇಡಿಕೆ ದೀರ್ಘ‌ ಕಾಲದಿಂದಿದೆ.

ಟಾಪ್ ನ್ಯೂಸ್

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue: ಕುಂದಾಪುರದಲ್ಲಿ 6 ತಿಂಗಳಲ್ಲಿ 76 ಮಂದಿಗೆ ಡೆಂಗ್ಯೂ

Dengue: ಕುಂದಾಪುರದಲ್ಲಿ 6 ತಿಂಗಳಲ್ಲಿ 76 ಮಂದಿಗೆ ಡೆಂಗ್ಯೂ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.