ಆಳ ಸಮುದ್ರದಲ್ಲಿ ಭಾರೀ ಗಾಳಿ: ಮತ್ತೆ ಮೀನುಗಾರಿಕೆಗೆ ಅಡ್ಡಿ

ಕಡಲಿಗಿಳಿಯಲು ಮೀನುಗಾರರು ಹಿಂದೇಟು ; ಗಂಟೆಗೆ 38 ಕಿ.ಮೀ.ಗೂ ಹೆಚ್ಚು ವೇಗದಲ್ಲಿ ಬೀಸುವ ಗಾಳಿ

Team Udayavani, Mar 16, 2020, 5:25 AM IST

ಆಳ ಸಮುದ್ರದಲ್ಲಿ ಭಾರೀ ಗಾಳಿ: ಮತ್ತೆ ಮೀನುಗಾರಿಕೆಗೆ ಅಡ್ಡಿ

ಗಂಗೊಳ್ಳಿ/ ಮರವಂತೆ: ಆಳ ಸಮುದ್ರದಲ್ಲಿ ಮತ್ತೆ ಮೀನುಗಾರಿಕೆಗೆ ಪೂರಕ ವಾತಾವರಣವಿಲ್ಲದ ಕಾರಣ ಕಳೆದ ಕೆಲ ದಿನಗಳಿಂದ ಮೀನುಗಾರಿಕೆ ಸ್ತಬ್ಧವಾಗಿದೆ. ಮೊದಲೇ ಮತ್ಸ್ಯಕ್ಷಾಮದಿಂದ ತತ್ತರಿಸಿ ಹೋಗಿರುವ ಮೀನು ಗಾರರು, ಈಗ ಸಮುದ್ರ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಗಾಳಿ ಬೀಸುತ್ತಿರುವುದರಿಂದ ಹೆಚ್ಚಿನ ಮೀನುಗಾರರು ಕಡಲಿಗಿಳಿಯಲು ಹಿಂದೇಟು ಹಾಕುತ್ತಿದ್ದಾರೆ.

ಈ ವೇಳೆಗೆ ಸಮುದ್ರದಲ್ಲಿ ಗಾಳಿ ಪ್ರಮಾಣ ಗಂಟೆಗೆ 10 ರಿಂದ 15 ಕಿ.ಮೀ. ಹೆಚ್ಚೆಂದರೆ 20 ಕಿ.ಮೀ. ಬೀಸುತ್ತಿದ್ದರೆ, ಮೀನುಗಾರಿಕೆಗೆ ತೆರಳಬಹುದು. ಆದರೆ ಈಗ ಗಂಟೆಗೆ 38 ಕಿ.ಮೀ. ಗೂ ಹೆಚ್ಚು ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಈ ವೇಳೆ ಮೀನುಗಾರಿಕೆಗೆ ತೆರಳುವುದು ಅಪಾಯಕಾರಿಯಾಗಿದೆ.

ಆಳ ಸಮುದ್ರ ಮೀನುಗಾರಿಕೆಗೆ ತೆರಳಿದಾಗ ವಿಪರೀತ ಗಾಳಿ ಉಂಟಾದರೆ, ಬೋಟುಗಳ ದಿಕ್ಕು ತಪ್ಪಿ, ಎಲ್ಲಿಂದ ಎಲ್ಲಿಗೋ ಹೋಗುವ ಅಪಾಯವೂ ಇರುತ್ತದೆ. ಆ ಕಾರಣಕ್ಕೆ ಹೆಚ್ಚಿನ ಮೀನುಗಾರರು ಸುರಕ್ಷತೆ ದೃಷ್ಟಿಯಿಂದ ಮೀನುಗಾರಿಕೆಗೆ ತೆರಳುತ್ತಿಲ್ಲ.

3,500ಕ್ಕೂ ಅಧಿಕ ಬೋಟುಗಳು
ಗಂಗೊಳ್ಳಿಯಲ್ಲಿ ಕೆಲವು ಬೋಟ್‌ಗಳು ಮಾತ್ರ ಮೀನುಗಾರಿಕೆಗೆ ತೆರಳಿದ್ದು ಬಿಟ್ಟರೆ ಬಹುತೇಕ ಬೋಟ್‌ಗಳು ಹಾಗೂ ದೋಣಿಗಳು ದಡದಲ್ಲೇ ಲಂಗರು ಹಾಕಿವೆ. ಇಲ್ಲಿ ಪರ್ಸಿನ್‌, ಟ್ರಾಲ್‌ ಬೋಟ್‌, ಪಾತಿ, ಗಿಲ್‌ನೆಟ್‌, ನಾಡದೋಣಿಗಳೆಲ್ಲ ಸೇರಿದಂತೆ 3,500 ಕ್ಕೂ ಅಧಿಕ ಬೋಟುಗಳಿವೆ. ಆದರೆ ಇವುಗಳಲ್ಲಿ ಕೆಲವೇ ಕೆಲವು ಬೋಟುಗಳು ಮಾತ್ರ ಕಳೆದ ಕೆಲ ದಿನಗಳಿಂದ ಮೀನುಗಾರಿಕೆಗೆ ತೆರಳಿವೆ.

ಮೀನುಗಾರಿಕೆಗೆ ಹೋದರೂ, ಅಷ್ಟೇನು ಮೀನು ಸಿಗದೇ ಬರಿಗೈಯಲ್ಲಿಯೇ ವಾಪಸು ಬರುವಂತಾಗಿದೆ.

ದಡದಲ್ಲೇ ಲಂಗರು
ನಾಡದೋಣಿಗಳೇ ಹೆಚ್ಚಿರುವ ಮರವಂತೆ ಹೊರ ಬಂದರಿನಲ್ಲಿಯೂ ಹೆಚ್ಚು ಕಡಿಮೆ ಇದೇ ಸ್ಥಿತಿಯಿದೆ. ಇಲ್ಲಿಯಂತೂ ಬಹುತೇಕ ಮೀನುಗಾರರು ದೋಣಿಗಳನ್ನು ದಡದಿಂದ ಮೇಲಿಟ್ಟು, ಅದಕ್ಕೆ ಹೊದಿಕೆಗಳಿಂದ ಮುಚ್ಚಿಟ್ಟಿದ್ದಾರೆ. ವಾತಾವಾರಣ ಅನುವು ಮಾಡಿಕೊಟ್ಟರೆ ಮತ್ತೆ ಮೀನುಗಾರಿಕೆಗೆ ಇಳಿಯುವುದು, ಇಲ್ಲದಿದ್ದರೆ, ಮುಂದಿನ ಋತುವಿಗೆ ಇಳಿಯುವ ಯೋಜನೆ ಹೆಚ್ಚಿನವರದ್ದಾಗಿದೆ.

ಬೂತಾಯಿ ಸಿಗುತ್ತಿಲ್ಲ
ಈ ಸಮಯದಲ್ಲಿ ಮೀನುಗಾರಿಕೆಗೆ ತೆರಳಿದಾಗ ಸಾಕಷ್ಟು ಪ್ರಮಾಣದಲ್ಲಿ ಬೂತಾಯಿ ಸಿಗುತ್ತಿತ್ತು. ಅದು ಸಿಕ್ಕರೆ ಹೆಚ್ಚಿನ ಲಾಭವಿಲ್ಲದಿದ್ದರೂ, ನಷ್ಟವೇನು ಆಗುತ್ತಿರಲಿಲ್ಲ. ಮಾರುಕಟ್ಟೆಗೆ ಮಾತ್ರವಲ್ಲದೆ ಮೀನಿನ ಕಾರ್ಖಾನೆಗೂ ಹೋಗುವುದರಿಂದ ಉತ್ತಮ ಬೇಡಿಕೆಯಿರುತ್ತಿತ್ತು. ಆದರೆ ಈ ಋತುವಿನಲ್ಲಿ ಉತ್ತಮ ಪ್ರಮಾಣದಲ್ಲಿ ಬೂತಾಯಿ ಮೀನು ಸಿಕ್ಕಿಯೇ ಇಲ್ಲ ಎನ್ನುತ್ತಾರೆ ಮೀನುಗಾರರು.

ಎಲ್ಲ ಕಡೆಗಳಲ್ಲಿ ಸ್ಥಗಿತ
ಕೇವಲ ಗಂಗೊಳ್ಳಿ, ಮರವಂತೆ ಮಾತ್ರವಲ್ಲದೆ ಮಲ್ಪೆ, ಮಂಗಳೂರು, ಭಟ್ಕಳ, ಹೊನ್ನಾವರ, ಕಾರವಾರದಲ್ಲಿಯೂ ಭಾರೀ ಗಾಳಿಯಿಂದಾಗಿ ಕಳೆದ ಕೆಲ ದಿನಗಳಿಂದ ಬಹುತೇಕ ಮೀನುಗಾರರು ಮೀನುಗಾರಿಕೆಗೆ ತೆರಳುತ್ತಿಲ್ಲ. ಮೀನಿಗೆ ಭಾರೀ ಬೇಡಿಕೆಯಿದ್ದರೂ, ಬೇಕಾದಷ್ಟು ಪ್ರಮಾಣದಲ್ಲಿ ಮೀನಿಲ್ಲದೆ ಇರುವುದರಿಂದ ಮತ್ಸÂಪ್ರಿಯರು ದುಬಾರಿ ಬೆಲೆ ತೆತ್ತು ತಿನ್ನುವಂತಾಗಿದೆ.

ಗಾಳಿಗೆ ಹೋಗಲು ಆಗುತ್ತಿಲ್ಲ
ಭಾರೀ ಪ್ರಮಾಣದಲ್ಲಿ ಗಾಳಿ ಬೀಸುವುದರಿಂದ ಅಪಾಯವನ್ನು ಅರಿತು ನಾವು ಮೀನುಗಾರಿಕೆಗೆ ತೆರಳುತ್ತಿಲ್ಲ. ಮೀನು ಕೂಡ ಸಿಗುತ್ತಿಲ್ಲ. ಹಾಗಾಗಿ ಹೆಚ್ಚಿನ ಮೀನುಗಾರರು ಗಾಳಿ ಕಡಿಮೆಯಾಗುವವರೆಗೆ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ, ಬಲೆ ಕಟ್ಟುವ ಮತ್ತಿತರ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಮೀನುಗಾರಿಕೆಗೆ ಈ ಋತು ಪ್ರಶಸ್ತವಾಗಿರಲೇ ಇಲ್ಲ.
– ಸಂಜೀವ ಖಾರ್ವಿ ಮರವಂತೆ, ಮೀನುಗಾರರು

ಮೀನು ಸಿಗುತ್ತಿಲ್ಲ
ಮೀನುಗಾರರಿಗೆ ಈಗ ಗಾಳಿ ಅಡ್ಡಿಯಾಗಿರುವುದರ ಜತೆಗೆ ಮೀನುಗಾರಿಕೆಗೆ ತೆರಳಿದರೂ, ಮೀನು ಸಿಗುತ್ತಿಲ್ಲ. ತೆರಳಿದರೆ ಲಾಭಕ್ಕಿಂತ ನಷ್ಟವೇ ಹೆಚ್ಚು. ಡೀಸೆಲ್‌ ದರವೂ ದುಬಾರಿಯಾಗಿರುವುದರಿಂದ, ಅದಕ್ಕೆ ಹಾಕಿದ ಹಣ ಕೂಡ ಮೀನುಗಾರಿಕೆಗೆ ಹೋದಾಗ ಸಿಗುತ್ತಿಲ್ಲ.
– ರಮೇಶ್‌ ಕುಂದರ್‌, ಅಧ್ಯಕ್ಷರು, ಪರ್ಸಿನ್‌ ಮೀನುಗಾರರ ಸ್ವ-ಸಹಾಯ ಸಂಘ ಗಂಗೊಳ್ಳಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.