
ಹೆಬ್ರಿ ಸರಕಾರಿ ಹಾಸ್ಟೆಲ್ಗೆ ಸ್ಥಳೀಯಾಡಳಿತ ದಿಢೀರ್ ಭೇಟಿ
Team Udayavani, Sep 17, 2019, 5:11 AM IST

ಹೆಬ್ರಿ: ಆಶ್ರಮ ಶಾಲೆ ಹಾಗೂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಅವ್ಯವಸ್ಥೆಯ ಆಗರ ಎಂಬ ಆರೋಪದ ಹಿನ್ನೆಲೆಯಲ್ಲಿ ಸೆ. 15ರ ರಾತ್ರಿ ಸ್ಥಳೀಯಾಡಳಿತ ಹಾಗೂ ತಾ.ಪಂ. ಸದಸ್ಯರು ದಿಢೀರ್ ಭೇಟಿ ನೀಡಿ ಸಿಬಂದಿ ಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಆಶ್ರಮ ಶಾಲೆಯಲ್ಲಿ ಬೇರೆ ಬೇರೆ ಜಿಲ್ಲೆಯ ಸುಮಾರು 56 ವಿದ್ಯಾರ್ಥಿಗಳಿದ್ದು ಮೂಲ ಸೌಲಭ್ಯಗಳ ಕೊರತೆ ಇದೆ. ಶೌಚಾಲಯ ನಿರ್ವಹಣೆ ಇಲ್ಲದೆ ದುರ್ನಾತ ಬೀರುತ್ತಿದ್ದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ವಿದ್ಯಾರ್ಥಿಗಳು ಸ್ಥಳೀಯಾಡಳಿತದವರಲ್ಲಿ ಈ ಸಂದರ್ಭ ದೂರಿದ್ದಾರೆ.
ಸರಕಾರಿ ಹಾಸ್ಟೆಲ್ನಲ್ಲಿ ಯಾವುದೇ ಮೂಲ ಸೌಲಭ್ಯವಿಲ್ಲದೆ ಮಕ್ಕಳ ಅವಸ್ಥೆ ಯನ್ನು ಗಮನಿಸಿದ ಸ್ಥಳೀಯಾಡಳಿತದ ಅಧಿಕಾರಿಗಳು ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತರಲಾಗುವುದು ಎಂದರು.
ಸಮಸ್ಯೆಯ ಗಂಭೀರತೆಯನ್ನು ಅರಿತ ತಾಲೂಕು ಸಮಾಜ ಕಲ್ಯಾಣಾಧಿಕಾರಿ ವಿಜಯಕುಮಾರ್ ರಾತ್ರಿ 9 ಗಂಟೆ ಹೊತ್ತಿಗೆ ಆಗಮಿಸಿ ಅವ್ಯವಸ್ಥೆಯ ಬಗ್ಗೆ ಸಿಬಂದಿಯನ್ನು ತರಾಟೆಗೆ ತೆಗೆದುಕೊಂಡು ಅವರ ಮೇಲೆ ಕ್ರಮ ಜರಗಿಸುವಂತೆ ಸೂಚಿಸಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ

BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.