ಹೆಜಮಾಡಿ ಮೀನುಗಾರಿಕಾ ಬಂದರು ಅಭಿವೃದ್ಧಿಗೆ ವಿಘ್ನ


Team Udayavani, Oct 30, 2018, 2:00 AM IST

hejamadi-29-10.jpg

ಪಡುಬಿದ್ರಿ: ಹೆಜಮಾಡಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸರ್ವಋತು ಮೀನುಗಾರಿಕೆ ಬಂದರು – ಮಂಗಳೂರು, ಮಲ್ಪೆ ನಡುವಣ ಮೀನುಗಾರರ ಒತ್ತಡ ಕಡಿಮೆಗೊಳಿಸಲಿದೆ. ಸಿದ್ದರಾಮಯ್ಯ ತಮ್ಮ ಮೊದಲ ಬಜೆಟ್‌ನಲ್ಲೇ ಹಣ ವಿಂಗಡಣೆ ಮಾಡಿದ್ದಾರೆ ಎಂದು ತಿಳಿಸಿದ್ದರು. ಯೋಜನಾ ಪ್ರಗತಿ ಕೇವಲ ಸರಕಾರಿ ಕಡತಗಳಲ್ಲೇ ಕಾಣಿಸಿಕೊಂಡರೂ ಇನ್ನೂ ಜನರಿಗೆ ಹತ್ತಿರವಾಗಿಲ್ಲ. ‘ಉದಯವಾಣಿ’ಯ ಸತತ ಫಾಲೋ ಅಪ್‌ನಿಂದ ಈಗಲೂ ರಾಜ್ಯ ಸಚಿವ ಸಂಪುಟದ ಅನುಮೋದನೆ ಬಳಿಕ ರಾಜ್ಯ ಸರಕಾರದ ಪಾಲು ಬಿಡುಗಡೆಗೊಳ್ಳಲು ಮತ್ತಷ್ಟು ವಿಘ್ನ ಎದುರಾಗಿವೆ.

ಕೇಂದ್ರ ಮತ್ತು ರಾಜ್ಯ ಸರಕಾರಗಳ 50:50 ಅನುದಾನದೊಂದಿಗೆ ಕಾರ್ಯಗತಗೊಳ್ಳಲಿರುವ 138.6 ಕೋ.ರೂ.ಗಳ ಹೆಜಮಾಡಿ ಬಂದರು ಯೋಜನೆಗೆ ಈಗಾಗಲೇ ಕೇಂದ್ರ ಸರಕಾರವು 13.86 ಕೋ. ರೂ.ಗಳ ತನ್ನ ಮೊದಲ ಕಂತನ್ನು ಬಿಡುಗಡೆಗೊಳಿಸಿದೆ. ಇನ್ನೇನು ರಾಜ್ಯ ಸರಕಾರದ ಅನುದಾನವೂ ಬಿಡುಗಡೆಗೊಳ್ಳಲಿದೆ ಎನ್ನುವಷ್ಟರಲ್ಲಿ ಯೋಜನೆಗೆ ರಾಜ್ಯ ಸಚಿವ ಸಂಪುಟದ ಅನುಮೋದನೆ ಲಭ್ಯವಾಗಬೇಕೆಂದು ಹೇಳಲಾಯಿತು.

ಭೂಮಿ ಖಾಸಗಿ ಅವರ ಹೆಸರಲ್ಲಿ
ರಾಜ್ಯ ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ಈ ಕುರಿತು ತಿಳಿಸಿದ್ದರೂ ಇದುವರೆಗೂ ಸರಕಾರದ ಗ್ರೀನ್‌ ಸಿಗ್ನಲ್‌ ಸಿಗಲೇ ಇಲ್ಲ. ಇದಕ್ಕೆ ಮುಖ್ಯ ಕಾರಣ ಯೋಜನಾ ಪ್ರದೇಶದ ಸುತ್ತಮುತ್ತ ಖಾಸಗಿಯವರು ಈ ಪ್ರದೇಶದಲ್ಲಿ ಭಾಗಶಃ ಭೂಮಿಗಳನ್ನು ತಮ್ಮದೆಂದು ವಾದಿಸಿದ್ದು ಪಹಣಿ ಪತ್ರಗಳಲ್ಲೂ ಇವರ ಹೆಸರು ನಮೂದಾಗಿರುವುದು ಮೀನುಗಾರಿಕೆ ಇಲಾಖೆಗೆ ತೊಡಕನ್ನು ಉಂಟು ಮಾಡಿದೆ. ಭೂಮಿ ಅತಿಕ್ರಮಣದಿಂದ ಆತಂಕವೆಂಬಂತೆ ‘ಉದಯವಾಣಿ’ ಇದನ್ನು ಈ ಹಿಂದೆಯೇ ವರದಿ ಮಾಡಿತ್ತು.

ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಯೂ ನಡೆದಿತ್ತು ರಾಜ್ಯ ಮೀನುಗಾರಿಕೆ ಇಲಾಖಾ ನಿರ್ದೇಶಕರು, ಸಹ ನಿರ್ದೇಶಕರು ಈಗಾಗಲೇ ಈ ಯೋಜ(ಚ)ನೆಯ ಹಿಂದೆ ಸುಮಾರು 40 ವರ್ಷಗಳಿಂದ ಹೆಣಗಾಡುತ್ತಿರುವ ಮೂಲ್ಕಿ ವಲಯ ಪರ್ಸೀನ್‌ ಬೋಟ್‌ ಮಾಲಕರ ಸಂಘದ ಪದಾಧಿಕಾರಿಗಳನ್ನು ಈ ಕುರಿತಾಗಿ ಸಂಪರ್ಕಿಸಿದ್ದಾರೆ. 

ಈಗಾಗಲೇ ಬಂದರು ಯೋಜನೆ ಕುರಿತಾಗಿ ಡಾ| ವಿಶಾಲ್‌  ಜಿಲ್ಲಾಧಿಕಾರಿಯಾಗಿರುವಾಗಲೇ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಯೂ ನಡೆದಿತ್ತು. ಆ ಸಭೆಯಲ್ಲೂ ಯೋಜನೆಗೆ ಯಾವೊಬ್ಬರಿಂದಲೂ ಪ್ರತಿರೋಧ ವ್ಯಕ್ತವಾಗಿರಲಿಲ್ಲ. ಜಿಲ್ಲಾಧಿಕಾರಿಯವರೂ ಈ ಯೋಜನೆ ಕಾರ್ಯಗತಗೊಳ್ಳಲು ಯಾವೊಂದೂ ಅಡ್ಡಿ ಆತಂಕಗಳು ಇಲ್ಲ ಎಂಬುದಾಗಿ ಸರಕಾರಕ್ಕೆ ವರದಿ ನೀಡಿದ್ದಾರೆ. ಹಾಗಿದ್ದರೂ ಈಗ ಈ ಯೋಜನೆ ಕಾರ್ಯಗತವಾಗುವ ಹೆಜಮಾಡಿ – ಮೂಲ್ಕಿ ಗಡಿಯ ಅಳಿವೆ ಪ್ರದೇಶದಲ್ಲಿ ಹಕ್ಕನ್ನು ಪ್ರತಿಪಾದಿಸುತ್ತಿರುವವರ ಸಾಲೂ ಹೆಚ್ಚಿರುವುದರಿಂದ ಸರಕಾರವು ಅನುದಾನ ಬಿಡುಗಡೆಗೊಳಿಸಲು ಈ ಕುರಿತಾದ ಸ್ಪಷ್ಟ ವಿವರ ಹಾಗೂ ಜಿಲ್ಲಾಡಳಿತದ ಸೂಚನೆಗೆೆ ಮತ್ತೂಮ್ಮೆ ಕಾಯುತ್ತಿದೆ.

ಪ್ರಸ್ತಾವನೆ ಬರಬೇಕಿದೆ
ಈ ಕುರಿತ ಯೋಜನೆಗೆ ಈಗಾಗಲೇ ಹಸಿರು ನಿಶಾನೆ ನೀಡಲಾಗಿದೆ. ಯೋಜನೆಗೆ ಬೇಕಾದ ಭೂಮಿಯ ಅಳತೆ ಬಳಿಕ ತಮಗೆ ಮೀನುಗಾರಿಕೆ ಇಲಾಖೆಯಿಂದ ಪ್ರಸ್ತಾವನೆ ಬರಬೇಕಿದೆ. ಆ ಬಳಿಕ ಈ ಪ್ರದೇಶವನ್ನು ಯೋಜನೆಗಾಗಿ ಮೀಸಲಿರಿಸಬೇಕಿದೆ.
– ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಉಡುಪಿ ಜಿಲ್ಲಾಧಿಕಾರಿ 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.