ವೇಷಧಾರಿ ರವಿ ಕಟಪಾಡಿ ಅವರಿಂದ 20 ಮಕ್ಕಳ ಚಿಕಿತ್ಸೆಗೆ 33 ಲ.ರೂ. ಸಹಾಯ


Team Udayavani, Oct 24, 2018, 10:23 AM IST

ravi.jpg

ಉಡುಪಿ: ಕಳೆದ 5 ವರ್ಷಗಳಿಂದ ಅಷ್ಟಮಿ ಸಮಯದಲ್ಲಿ ವೇಷ ಧರಿಸಿ ಅನಾರೋಗ್ಯ ಪೀಡಿತ ಮಕ್ಕಳಿಗಾಗಿ ಹಣ ಸಂಗ್ರಹಿಸುತ್ತಿರುವ ರವಿ ಕಟಪಾಡಿ ಅವರು ಇದುವರೆಗೆ ಒಟ್ಟು 33.18 ಲ.ರೂ.ಗಳನ್ನು ಸಂಗ್ರಹಿಸಿದ್ದಾರೆ.

ಕಳೆದ 5 ವರ್ಷಗಳಲ್ಲಿ ವೇಷ ಧರಿಸಿ ಒಟ್ಟು 19,33,810 ರೂ.ಗಳನ್ನು ಸಂಗ್ರಹಿಸಿ ಅದನ್ನು 20 ಮಕ್ಕಳಿಗೆ ನೀಡಿದ್ದಾರೆ. ಇವರ ಸೇವಾ ಕಾರ್ಯಕ್ಕೆ ಜತೆಯಾದ ಮಿಲಾಪ್‌ ಸರಕಾರೇತರ ಸೇವಾ ಸಂಸ್ಥೆ ಸಾಮಾಜಿಕ ಜಾಲತಾಣದಲ್ಲಿ ರವಿ ಕಟಪಾಡಿ ಅವರ ಸೇವಾಕಾರ್ಯದ ಕುರಿತು ವೀಡಿಯೋ ಮೂಲಕ ಜನರ ಗಮನ ಸೆಳೆದಿದ್ದು 1.7 ಕೋ. ಜನ ವೀಕ್ಷಿಸಿದ್ದಾರೆ.  ಅನಿವಾಸಿ ಭಾರತೀಯರು ಸೇರಿದಂತೆ  ಹಲವಾರು ಮಂದಿ ಸ್ಪಂದಿಸಿದ್ದು ಈ ಮೂಲಕ 13.85 ಲ.
ರೂ. ಸಂಗ್ರಹವಾಗಿದೆ. ಈ ಬಾರಿ ಅಷ್ಟಮಿ ಸಂದರ್ಭ ಸಂಗ್ರಹವಾದ 5,32,000 ರೂ.ಗಳನ್ನು 5 ಮಕ್ಕಳಿಗೆ ನೀಡಲಾಗಿದೆ. ಇವರ ಚಿಕಿತ್ಸೆಗೆ ಮತ್ತಷ್ಟುಮೊತ್ತ ಅವಶ್ಯ ಇರುವುದರಿಂದ 13.85 ಲ.ರೂ.ಗಳನ್ನು ಅದೇ 5 ಮಕ್ಕಳಿಗೆ ಹಾಗೂ ಹೊಸದಾಗಿ ಬೇಡಿಕೆ ಬಂದಿರುವ ತೀರಾ ಅಗತ್ಯವಿರುವ ಇಬ್ಬರು ಮಕ್ಕಳಿಗೆ ಹಂಚಲಾಗುವುದು  ಎಂದು ಮಿಲಾಪ್‌ ಸಂಸ್ಥೆಯ ಕೆ. ಮಹೇಶ್‌ ಶೆಣೈ ಪತ್ರಿಕಾಗೋಷ್ಠಿಯಲ್ಲಿ  ತಿಳಿಸಿದ್ದಾರೆ.

ಈ ಅಭಿಯಾನಕ್ಕೆ ಉಡುಪಿ ಜಿಲ್ಲೆಯ ನಾಗರಿಕರು ಮಾತ್ರವಲ್ಲದೆ ವಿದೇಶದಲ್ಲಿರುವವರು ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ಅಭಿಯಾನ ಮುಂದುವರಿಸಲು  ಮನವಿ ಮಾಡಿದ್ದಾರೆ. ಹಾಗಾಗಿ ಮತ್ತೆ ತಿಂಗಳ ಕಾಲ ಮುಂದುವರಿಸಿ ಬಡಮಕ್ಕಳ ಚಿಕಿತ್ಸೆಗೆ ಹಣ ನೀಡ ಲಾಗುತ್ತದೆ. ಹಣವನ್ನು ನೇರವಾಗಿ ಖಾತೆಗೆ  ವರ್ಗಾಯಿಸಲಾಗುತ್ತದೆ. ತೀರಾ ಅಗತ್ಯ ಇರುವವರಿಗೆ ತಲುಪಿಸುವ ಉದ್ದೇಶ ರವಿ ಕಟಪಾಡಿ ಮತ್ತು ಅವರ ಸ್ನೇಹಿತರದ್ದಾಗಿದೆ ಎಂದು ಮಹೇಶ್‌ ತಿಳಿಸಿದರು.

ಸಹಾಯ ಮಾಡುತ್ತಿರುವವರಲ್ಲಿ ಹೆಚ್ಚಿನ ಮಕ್ಕಳು ಕ್ಯಾನ್ಸರ್‌, ಕಿಡ್ನಿ ಸಮಸ್ಯೆಯವರು. ಸದ್ಯ ನಾವು ಮಕ್ಕಳಿಗೆ ಮಾತ್ರ ಸಹಾಯ ಮಾಡುತ್ತಿದ್ದೇವೆ. ಸ್ನೇಹಿತರು ಮತ್ತು ಎಲ್ಲ ಜನತೆಯ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದು ರವಿ ಕಟಪಾಡಿ ಹೇಳಿದರು. ತಂಡ ಸದಸ್ಯ ರಕ್ಷಿತ್‌ ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಯಾವ ವರ್ಷ ಎಷ್ಟು  ಸಂಗ್ರಹ
ಮೊದಲ ವರ್ಷ     1,04,810 ರೂ.   –    1 ಮಗುವಿಗೆ
ಎರಡನೇ ವರ್ಷ    3,65,000 ರೂ.   –     4 ಮಕ್ಕಳಿಗೆ
ಮೂರನೇ ವರ್ಷ   4,20,000 ರೂ.   –    3 ಮಕ್ಕಳಿಗೆ
ನಾಲ್ಕನೇ ವರ್ಷ       5,12,000 ರೂ.   –    7 ಮಕ್ಕಳಿಗೆ
ಐದನೇ ವರ್ಷ         5,32,000 ರೂ.   –     5 ಮಕ್ಕಳಿಗೆ
ಮಿಲಾಪ್‌ ಸಂಸ್ಥೆಯ ಮೂಲಕ ಸಂಗ್ರಹ  ರೂ.    –    13,85,000

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.