![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 29, 2020, 11:04 AM IST
ಕಾರ್ಕಳ: ರಾಜ್ಯದ ಸಚಿವ ಸಂಪುಟ ಪುನಾರರಚನೆ ಆಗುತ್ತದೆಯೋ, ಸಂಪುಟ ಮಂತ್ರಿ ಮಂಡಲದಲ್ಲಿ ಯಾರು ಯಾರು ಇರುತ್ತಾರೆ ಎನ್ನುವುದನ್ನು ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸಚಿವ ಸ್ಥಾನ ಬದಲಾವಣೆ ಬಗ್ಗೆ ನಾನೇನು ಹೇಳುವುದಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರ ಕೊಡುಗೆ ತುಂಬಾ ಇದೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಸದ್ಯ ದೂರದ ಮಾತು ಎಂದರು.
ಇದನ್ನೂ ಓದಿ:ಸಂಪುಟ ಸರ್ಕಸ್: ದಿಲ್ಲಿ ನಡೆ ನಿಗೂಢ; ಮೂವರನ್ನು ಕೈ ಬಿಡಲು ಬಿಎಸ್ವೈ ಚಿಂತನೆ
ರಾಜ್ಯದ ವಿಧಾನಮಂಡಲ ಅಧಿವೇಶನ ಅಂತ್ಯವಾಗಿದ್ದು, ಸಂಪುಟ ವಿಸ್ತರಣೆ ಅಥವಾ ಪುನರಾಚನೆ ಮಾಡುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ಮಧ್ಯೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇನ್ನು ಮೂರು ದಿನಗಳಲ್ಲಿ ದೆಹಲಿಗೆ ಹೋಗಿ ಬರುತ್ತೇನೆ ಎಂದಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.