![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 25, 2024, 1:02 AM IST
ಕೋಟ/ಸಿದ್ದಾಪುರ: ರಸ್ತೆ ಅಪಘಾತದಲ್ಲಿ ಮಗ ಮೃತನಾದ ಸುದ್ದಿ ತಿಳಿದ ಸ್ವಲ್ಪ ಸಮಯದಲ್ಲೇ ತಾಯಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಜ. 22ರಂದು ಆವರ್ಸೆ ಸಮೀಪ ಹಿಲಿಯಾಣದಲ್ಲಿ ಸಂಭವಿಸಿದೆ.
ಸ್ಥಳೀಯ ನಿವಾಸಿ, ಶೇಖರ್ ಶೆಟ್ಟಿಯವರ ಪತ್ನಿ ವಾರಿಜಾ (76) ಮೃತ ಮಹಿಳೆ. ಅವರ ಪುತ್ರ ಅರುಣ (52) ಶಿರೂರು ಮೂಕೈ ಸಮೀಪ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಜ. 22ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ನನ್ನನ್ನು ಮಗನ ಹತ್ತಿರ ಕರೆದುಕೊಂಡು ಹೋಗಿ ಎಂದು ಹೇಳಿದ್ದ ತಾಯಿ ಬಳಿಕ ಶೀಘ್ರವಾಗಿ ಗದ್ದೆಯಲ್ಲಿ ಕಟ್ಟಿದ್ದ ದನವನ್ನು ತರಲು ಗದ್ದೆಗೆ ಹೋದವರು ವಾಪಸ್ ಬರಲಿಲ್ಲ. ಆ ಬಳಿಕ ನೋಡಿದಾಗ ಅವರು ತೋಟದ ಬದಿಯಲ್ಲಿದ್ದ ಕೆರೆಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದರು. ಮೃತರು ಪತಿ, ಪುತ್ರನನ್ನು ಅಗಲಿದ್ದಾರೆ.
ಪ್ರಭಾಕರ ಹಿಲಿಯಾಣ ಅವರು ಪೊಲೀಸರಿಗೆ ದೂರು ನೀಡಿದ್ದು ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.