ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್
ಪದವೀಧರರ, ಶಿಕ್ಷಕರ, ಸರಕಾರಿ ನೌಕರರ ಬೇಡಿಕೆಗಳ ಸಂಪೂರ್ಣ ಅರಿವಿದೆ
Team Udayavani, May 30, 2024, 1:27 AM IST
ಉಡುಪಿ: ಜನತೆಯ ಆಶೀರ್ವಾದದಿಂದ ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ 3 ಬಾರಿ ಶಾಸಕ ನಾಗಿದ್ದಾಗ ಉಡುಪಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿರುತ್ತೇನೆ. ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ನನ್ನನ್ನು ಹರಸಿ ಆಶೀರ್ವದಿಸಿದರೆ ವಿಧಾನಸಭೆ ಸದಸ್ಯನಾಗಿ ಕೆಲಸ ನಿರ್ವಹಿಸಿದ ಕಾರ್ಯಾನುಭವದೊಂದಿಗೆ ಪ್ರಾಮಾ ಣಿಕವಾಗಿ ಹಾಗೂ ಕ್ರಿಯಾಶೀಲವಾಗಿ ಕೆಲಸ ಮಾಡಿ ಪದವೀಧರರ, ಶಿಕ್ಷಕರ ಹಾಗೂ ಸರಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಅವರ ಧ್ವನಿಯಾಗುತ್ತೇನೆ ಎಂದು ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ ಕೆ. ರಘುಪತಿ ಭಟ್ ಹೇಳಿದರು.
ಅವರು ಶಿವಮೊಗ್ಗ ಹಾಗೂ ಶಿಕಾರಿಪುರದ ವಿವಿಧ ಭಾಗಗಳಲ್ಲಿ ಬುಧವಾರ ಮತದಾರರ ಸಭೆ ನಡೆಸಿದರು.
ಪದವೀಧರರಿಗೆ ಉದ್ಯೋಗ – ಪದವೀಧರರಿಂದ ಉದ್ಯಮ – ಸಹಾಯ – ಸಹಕಾರ – ಸಂಪರ್ಕ ಇದು ನನ್ನ ಆಶಯವಾಗಿದೆ. ಎಲ್ಲ ಸರಕಾರಿ ನೌಕರರ ಬೇಡಿಕೆಯಾದ ಎನ್ಪಿಎಸ್ (ನೂತನ ಪಿಂಚಣಿ ಯೋಜನೆ) ರದ್ದುಪಡಿಸಿ ಒಪಿಎಸ್ (ಹಳೆ ಪಿಂಚಣಿ ಯೋಜನೆ) ಜಾರಿಗೆ ತರಲು ವಿಧಾನ ಪರಿಷತ್ ನ ಒಳಗೆ ಮತ್ತು ಹೊರಗೆ ನಿಮ್ಮ ಧ್ವನಿಯಾಗುತ್ತೇನೆ. ಹಾಗೂ ಶಿಕ್ಷಕರ ಸಮಸ್ಯೆಗಳು ಮತ್ತು ಬೇಡಿಕೆಗಳ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದು ಇದನ್ನು ಈಡೇರಿಸಲು ನಿಮ್ಮ ಧ್ವನಿಯಾಗುತ್ತೇನೆ ಎಂದ ಅವರು ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಮೊದಲ ಪ್ರಾಶಸ್ತ್ಯದ ಮತ ನೀಡಿ ಹರಿಸುವಂತೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.