ಸಿಗದಿದ್ದರೆ ನೋಟಾ ಅಭಿಯಾನಕ್ಕೆ ನಾಡದೋಣಿ ಮೀನುಗಾರರ ಚಿಂತನೆ
ಸೀಮೆಎಣ್ಣೆ ಪೂರೈಕೆಗೆ 20 ದಿನ ಗಡುವು
Team Udayavani, Jan 7, 2023, 6:30 AM IST
ಕುಂದಾಪುರ: ನಾಡ ದೋಣಿ ಮೀನುಗಾರರಿಗೆ ಸೀಮೆಎಣ್ಣೆ ಇನ್ನೂ ಸಿಗದ ಕಾರಣ ಆಕ್ರೋಶ ವ್ಯಕ್ತವಾಗಿದ್ದು, ಮುಂದಿನ 20 ದಿನದೊಳಗೆ 7 ಸಾವಿರ ಕಿಲೋ ಲೀ. ಸೀಮೆಎಣ್ಣೆ ಪೂರೈಸದಿದ್ದರೆ ನೋಟಾ ಅಭಿಯಾನ ಕೈಗೊಳ್ಳುವುದಾಗಿ ಗಂಗೊಳ್ಳಿ ವಲಯದ ನಾಡದೋಣಿ ಮೀನುಗಾರ ಸಂಘ ಎಚ್ಚರಿಸಿದೆ.
ಕಳೆದ ತಿಂಗಳು ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸಹಿತ ಎಲ್ಲ ಸಚಿವರು, ಸಂಸದರು, ಶಾಸಕರಿಗೂ ನಮ್ಮ ಅಹವಾಲು ಸಲ್ಲಿಸಲಾಗಿದೆ. ಆದರೆ ಈವರೆಗೆ ಯಾರಿಂದಲೂ ಕೇಂದ್ರಕ್ಕೆ ಒತ್ತಡ ಹೇರಿ ಅಗತ್ಯ ಸೀಮೆಎಣ್ಣೆ ಬಿಡುಗೊಳಿಸಲು ಸಾಧ್ಯವಾಗಿಲ್ಲ. ಮುಂದಿನ 20 ದಿನದೊಳಗೆ ಕನಿಷ್ಠ 7 ಸಾವಿರ ಕಿಲೋ ಲೀ. ಸೀಮೆಎಣ್ಣೆಯನ್ನು ಪೂರೈಸದಿದ್ದರೆ ಗಂಗೊಳ್ಳಿಯ ನಾಡದೋಣಿ ಮೀನುಗಾರರು ಸಂಕಲ್ಪ ಸಾಧನ ಸಭೆಯ ತೀರ್ಮಾನದಂತೆ ನೋಟಾ ಅಭಿಯಾನವನ್ನು ಆರಂಭಿಸಲಿದ್ದಾರೆ. ಅದಕ್ಕೂ ಮೊದಲು ಕರಾವಳಿ ಜಿಲ್ಲೆಗಳ ಎಲ್ಲ ಶಾಸಕರಿಗೆ ಈ ಬಗ್ಗೆ ಪತ್ರ ಬರೆಯಲಾಗುವುದು. ಅಭಿಯಾನವನ್ನು ಕರಾವಳಿಯ 3 ಜಿಲ್ಲೆಗಳಿಗೂ ವಿಸ್ತರಿಸಿ ಮೀನುಗಾರರನ್ನು ಒಗ್ಗೂಡಿಸಿ, ಹೋರಾಟ ನಡೆಸಲಾಗುವುದು ಎಂದು ಗಂಗೊಳ್ಳಿ ವಲಯದ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಯಶವಂತ್ ಖಾರ್ವಿ “ಉದಯವಾಣಿ’ಗೆ ತಿಳಿಸಿದ್ದಾರೆ.
ಉದಯವಾಣಿ ವರದಿ
ಸಕಾಲದಲ್ಲಿ ಸೀಮೆಎಣ್ಣೆ ಪೂರೈಕೆ ಮಾಡದಿರುವ ಬಗ್ಗೆ, ಇದರಿಂದ ಉತ್ತಮ ಸೀಸನ್ ಇದ್ದರೂ ಮೀನುಗಾರಿಕೆಗೆ ತೆರಳಲು ಸಾಧ್ಯವಾಗದಿರುವ ಕುರಿತಂತೆ “ಉದಯವಾಣಿ’ಯು ನಿರಂತರವಾಗಿ ವಿಶೇಷ ವರದಿ ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.