![Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು](https://www.udayavani.com/wp-content/uploads/2024/07/surta-415x229.jpg)
Karkala ಪರಶುರಾಮ ಥೀಂ ಪಾರ್ಕ್ಗೆ ಅಕ್ರಮ ಪ್ರವೇಶ: ಹಲವರ ವಿರುದ್ಧ ಪ್ರಕರಣ ದಾಖಲು
Team Udayavani, Oct 23, 2023, 12:49 AM IST
![Karkala ಪರಶುರಾಮ ಥೀಂ ಪಾರ್ಕ್ಗೆ ಅಕ್ರಮ ಪ್ರವೇಶ: ಹಲವರ ವಿರುದ್ಧ ಪ್ರಕರಣ ದಾಖಲು](https://www.udayavani.com/wp-content/uploads/2023/10/kar-5-620x408.jpg)
ಕಾರ್ಕಳ: ಸಾರ್ವಜನಿಕ ಪ್ರವೇಶ ನಿಷೇಧಿತ ಬೈಲೂರಿನ ಉಮಿಕ್ಕಳ ಬೆಟ್ಟಕ್ಕೆ ಅಕ್ರಮ ಪ್ರವೇಶ ಮಾಡಿರುವ ಘಟನೆಗೆ ಸಂಬಂದಿಸಿ ಕಾರ್ಕಳ ನಗರ ಠಾಣೆಯಲ್ಲಿ ಪ್ರತ್ಯೇಕ ದೂರಿನನ್ವಯ ಇತ್ತಂಡಗಳ ಹಲವು ಮಂದಿಯ ಮೇಲೆ ಜಾಮೀನು ರಹಿತ ಪ್ರಕರಣ ದಾಖಲಾಗಿದೆ.
ಪ್ರಸ್ತುತ ಥೀಮ್ ಪಾರ್ಕ್ಗೆ ಭೇಟಿ ನೀಡಲು ಸಾರ್ವಜನಿಕರಿಗೆ ಅವಕಾಶವಿಲ್ಲ. ಆದರೆ ಅ. 19ರಂದು ನಿರ್ಮಿತಿ ಕೇಂದ್ರದ ಅಧಿಕಾರಿಗಳು ಭೇಟಿ ನೀಡಿದ ಅನಂತರ ಸುಹಾಸ್, ಮಹಾವೀರ, ಸುಮಿತ್, ವಿಖ್ಯಾತ್, ಮುಸ್ತಾಫ, ರಾಕೇಶ್, ಸಮೃದ್ದಿ ಹಾಗೂ ಇತರರು ಪಾರ್ಕ್ನಲ್ಲಿರುವ ಮೂರ್ತಿಯ ಪಕ್ಕಕ್ಕೆ ಹೋಗಿ ಪರಶುರಾಮರ ಪಾದಕ್ಕೆ ಸುತ್ತಿಗೆಯಿಂದ ಹೊಡೆದು ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿರುವುದಾಗಿ ದಿವ್ಯಾ ನಾಯಕ್ ಕಾರ್ಕಳ ಅವರು ನೀಡಿದ ದೂರಿನಂತೆ ಕಾರ್ಕಳ ನಗರ ಠಾಣೆಯಲ್ಲಿ ಏಳು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಅಕ್ರಮ ಪ್ರವೇಶಕ್ಕೆ ಸಂಬಂಧಿಸಿದ ಇನ್ನೊಂದು ಪ್ರಕರಣದಲ್ಲಿ ಶುಭದ ರಾವ್, ದೀಕ್ಷಿತ್, ದೀಪಕ್, ಸುಬಿತ್, ವಿವೇಕಾನಂದ, ಯೋಗೀಶ, ಸೂರಜ್, ಪ್ರದೀಪ್, ಅಲ್ಪಾಜ್, ಐವಾನ್, ದಿವ್ಯಾ, ಕೃಷ್ಣ, ಹರೀಶ್ ಹಾಗೂ ಇತರರು ಅ.19ರಂದು ಪಾರ್ಕ್ಗೆ ಹೋಗಿ ಪರಶುರಾಮ ವಿಗ್ರಹಕ್ಕೆ ಹೊದಿಸಿದ ರಕ್ಷಣ ಕವಚವನ್ನು ಹರಿದು ಹಾಕಿ ಕಂಚಿನ ಮೂರ್ತಿಯ ಮೇಲಿದ್ದ ಫಿನಿಶಿಂಗ್ ಲೇಪನವನ್ನು ಹರಿದು ಮೂರ್ತಿಯ ಮೂಲ ಸ್ವರೂಪವನ್ನು ವಿರೂಪಗೊಳಿಸಿ ಹಾನಿ ಮಾಡಿ ಸರಕಾರಕ್ಕೆ ನಷ್ಟವುಂಟುಮಾಡಿದ್ದಾರೆ ಎಂದು ಸುನೀಲ್ ಹೆಗ್ಡೆ ಎಂಬವರು ನೀಡಿದ ದೂರಿನಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು](https://www.udayavani.com/wp-content/uploads/2024/07/surta-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು](https://www.udayavani.com/wp-content/uploads/2024/07/surta-150x83.jpg)
Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು
![ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್](https://www.udayavani.com/wp-content/uploads/2024/07/dev-150x83.jpg)
Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-150x90.jpg)
Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
![7-yellapura](https://www.udayavani.com/wp-content/uploads/2024/07/7-yellapura-150x90.jpg)
Yellapura: ನಿಯಂತ್ರಣ ತಪ್ಪಿದ ಕಂಟೈನರ್ ಲಾರಿ; ತಪ್ಪಿದ ಅನಾಹುತ
![belagavi](https://www.udayavani.com/wp-content/uploads/2024/07/belagavi-150x90.jpg)
Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.