2030ರಲ್ಲಿ  ಭಾರತ ಸೂಪರ್‌ ಪವರ್‌


Team Udayavani, Apr 24, 2018, 1:15 PM IST

rajnath.jpg

ಉಡುಪಿ: ಭಾರತ ಆರ್ಥಿಕವಾಗಿ ಸಬಲ ಗೊಳ್ಳುತ್ತಿದೆ. 2030ರಲ್ಲಿ ನಂ.1 ಆರ್ಥಿಕ ಶಕ್ತಿಯಾಗಿ ಹೊಮ್ಮಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದರು.

ಮಣಿಪಾಲ ಕಂಟ್ರಿ ಇನ್‌ ಹೊಟೇಲ್‌ ಸಭಾಂಗಣದಲ್ಲಿ ಸೋಮವಾರ ಚಿಂತಕರ ಜತೆ ಸಂವಾದ ನಡೆಸಿದ ಅವರು, ಈಗ ಜಗತ್ತಿನ ಶ್ರೇಷ್ಠ 10 ದೇಶಗಳಲ್ಲಿ ಭಾರತ ಒಂದಾಗಿದೆ. 2030ಕ್ಕೆ ಸೂಪರ್‌ ಪವರ್‌ ಆಗಲಿದೆ ಎಂದರು. 

ರಾಜಕೀಯದ ಗುರಿ ಏನು? 
ಪ್ರಧಾನಿ ಮೇಕ್‌ ಇನ್‌ ಇಂಡಿಯ, ಮೇಡ್‌ ಇನ್‌ ಇಂಡಿಯ ಘೋಷಣೆಯೊಂದಿಗೆ ಮಹತ್ವದ ಆರ್ಥಿಕ ಸುಧಾರಣೆಗಳನ್ನು ಜಾರಿಗೆ ತರುತ್ತಿದ್ದಾರೆ. ರಾಜಕೀಯ ಪಕ್ಷವಾಗಿ ನಮ್ಮ ಗುರಿ ಕೇವಲ ಸರಕಾರ ಸ್ಥಾಪಿಸುವುದಲ್ಲ, ನಮ್ಮ ರಾಜಕೀಯ ರಾಷ್ಟ್ರ ನಿರ್ಮಾಣಕ್ಕೆ ಎಂದರು. 

ರೈತರ ಆದಾಯ ದ್ವಿಗುಣ ಗುರಿ
ಪ್ರಧಾನಿ ಮೋದಿ ಸಾಮಾಜಿಕ – ರಾಜಕೀಯ ಕಾರ್ಯಕರ್ತ ಎಂಬ ಪರಿಕಲ್ಪನೆಯ ಅನುಸಾರ ಮನೆ ಮನೆ ಗಳಲ್ಲಿ ಶೌಚಾಲಯ ನಿರ್ಮಾಣ, ಸ್ವತ್ಛತಾ ಅಭಿ ಯಾನಕ್ಕೆ ಚಾಲನೆ ನೀಡಿದ್ದಾರೆ. 2020ರಲ್ಲಿ ಕೃಷಿಕರ ಆದಾಯ ದ್ವಿಗುಣಗೊಳ್ಳಬೇಕೆಂಬ ಇರಾದೆಯಿಂದ ಪ್ರಧಾನಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು. 

ರಾಜ್ಯದಲ್ಲಿ 5 ವರ್ಷಗಳಲ್ಲಿ 3,700 ರೈತರ ಆತ್ಮಹತ್ಯೆ ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳದಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಂಗ್‌ ಆಗ್ರಹಿಸಿದರು. 

ಬಗೆಬಗೆ ಸಮಸ್ಯೆಗಳ ಉಲ್ಲೇಖ
ಉಡುಪಿ ಚೇಂಬರ್‌ ಆಫ್ ಕಾಮರ್ಸ್‌ ಅಧ್ಯಕ್ಷ ಕೃಷ್ಣ ರಾವ್‌ ಕೊಡಂಚ ಜಿಎಸ್‌ಟಿ ನೋಂದಣಿಯಾದವರಿಗೆ ವಿಮಾ ಸೌಲಭ್ಯ ಕೊಡಿಸಬೇಕು ಎಂದರು. ಭಾರ ತೀಯ ಕಿಸಾನ್‌ ಸಂಘದ ಸತ್ಯನಾರಾಯಣ ಉಡುಪ ಅವರು ಕಸ್ತೂರಿರಂಗನ್‌ ವರದಿ, ಸಿಆರ್‌ಝಡ್‌ ಕಾನೂನು, ಕಾಡುಪ್ರಾಣಿ ಹಾವಳಿಯಿಂದ ರೈತರಿಗೆ ನಷ್ಟವಾಗುತ್ತಿದೆ, ಯಾವ ಸರಕಾರಗಳೂ ಸಮಸ್ಯೆ ಬಗೆಹರಿಸುತ್ತಿಲ್ಲ ಎಂದರು. ಬಸ್‌ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್‌, ಪ್ರೊ| ಸದಾಶಿವ ರಾವ್‌, ಅಜಿತ್‌ ಶೆಟ್ಟಿ, ಅಶೋಕ ಕುಮಾರ್‌ ಕೊಡ್ಗಿ, ಅಜಿತ್‌ ಕುಮಾರ್‌ ಶೆಟ್ಟಿ, ದಾವಣಗೆರೆಯ ಈಶ್ವರಿ, ಡಾ| ವಿಜಯೀಂದ್ರ ಪ್ರಶ್ನೆಗಳನ್ನು ಕೇಳಿದರು. ಸ್ಮಾರ್ಟ್‌ ಸಿಟಿ ಬದಲು ಸ್ಮಾರ್ಟ್‌ ವಿಲೇಜ್‌ಗಳನ್ನು ಘೋಷಿಸಬೇಕು, ಪೊಲೀಸ್‌- ಸೈನಿಕರ ವೇತನ ಹೆಚ್ಚಿಸಬೇಕು, ಸಾಮಾನ್ಯ ಕಲ್ಯಾಣ ಮಂಟಪಗಳಿಗೆ ಶೇ. 5 ಜಿಎಸ್‌ಟಿ ವಿಧಿಸಬೇಕು ಇತ್ಯಾದಿ ಬೇಡಿಕೆಗಳನ್ನು ಮಂಡಿಸಲಾಯಿತು. 

ಕೆ. ರಘುಪತಿ ಭಟ್‌ ಸ್ವಾಗತಿಸಿ, ಮಟ್ಟಾರ್‌ ರತ್ನಾಕರ ಹೆಗ್ಡೆ ಪ್ರಸ್ತಾವನೆಗೈದರು. ಶ್ರೀನಾಥ ರಾವ್‌ ನಿರ್ವಹಿಸಿ ದರು. ಶೋಭಾ ಕರಂದ್ಲಾಜೆ, ಕೆ. ಜಯಪ್ರಕಾಶ್‌ ಹೆಗ್ಡೆ, ಕೆ. ಉದಯಕುಮಾರ ಶೆಟ್ಟಿ ಉಪಸ್ಥಿತರಿದ್ದರು. 

ಕಾಂಗ್ರೆಸ್‌-ಭ್ರಷ್ಟಾಚಾರ ನಾಣ್ಯದ ಎರಡು ಮುಖ
ಭ್ರಷ್ಟಾಚಾರ ಮತ್ತು ಕಾಂಗ್ರೆಸ್‌ ಒಂದೇ ನಾಣ್ಯದ ಎರಡು ಮುಖಗಳು ಎನ್ನುವಂತಾಗಿದೆ. ಇಲ್ಲಿರುವುದು ಸಿದ್ದ ಸರಕಾರ ವಲ್ಲ, ನಿದ್ದೆಯ ಸರಕಾರ ಎಂದು ರಾಜನಾಥ್‌ ಸಿಂಗ್‌ ಹೇಳಿದರು. ಕಾರ್ಕಳ ಅಭ್ಯರ್ಥಿ ಸುನಿಲ್‌ ಕುಮಾರ್‌ ನಾಮಪತ್ರ ಸಲ್ಲಿಕೆ ಹಿನ್ನೆಲೆ ಯಲ್ಲಿ ಸೋಮವಾರ ಇಲ್ಲಿಗೆ ಆಗಮಿಸಿದ್ದ ಅವರು ರಾಜ್ಯಕ್ಕೆ 88,000 ಕೋ. ರೂ. ಅನುದಾನ ನೀಡಲಾಗಿದೆ. ಆದರೆ ಅಭಿವೃದ್ಧಿ ಕಾರ್ಯ ನಡೆದಿಲ್ಲ, ಬದಲಾವಣೆಯೂ ಆಗಿಲ್ಲ ಎಂದರು.
ಲೋಕಾಯುಕ್ತ ನ್ಯಾಯಮೂರ್ತಿ ಅವರಿಗೆ ಚೂರಿ ಇರಿತ ರಾಜ್ಯದಲ್ಲಿ ನಡೆದಿದೆ. ಕಾನೂನು ಸುವ್ಯವಸ್ಥೆ ವಿಫ‌ಲವಾಗಿದೆ. ರಾಜ್ಯದಲ್ಲಿಯೂ ಬಿಜೆಪಿ ಸರಕಾರ ಬಂದು ರೈತರ ಎಲ್ಲ ಸಮಸ್ಯೆಗಳನ್ನು ಬಗೆಹರಿಸಬೇಕಿದೆ ಎಂದರು.

ಶಸ್ತ್ರಾಸ್ತ್ರ  ಸ್ವಾವಲಂಬನೆ: ಸಿಂಗ್‌
ಶಸ್ತ್ರಾಸ್ತ್ರ ಆಮದು ಕಡಿಮೆಗೊಳಿಸಿ, ದೇಶೀಯವಾಗಿ ಉತ್ಪಾದಿಸಲು ಯೋಜನೆ ಸಿದ್ಧಪಡಿಸಲಾಗುತ್ತಿದೆ. ಭದ್ರತೆ ವಿಚಾರದಲ್ಲಿ ರಾಜಿ ಇಲ್ಲ, ಈಗಾಗಲೇ ನಮ್ಮ ಸೈನಿಕರು ನಕ್ಸಲರ ಹತ್ಯೆ ಮಾಡಿದ್ದಾರೆ ಎಂದು ರಾಜನಾಥ್‌ ಸಿಂಗ್‌ ಹೇಳಿದರು. ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜಾ ನಾಮಪತ್ರ ಸಲ್ಲಿಕೆ ಬಳಿಕ ಬೆಳ್ತಂಗಡಿ ಮಂಜುನಾಥೇಶ್ವರ ಕಲಾಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ  ಮಾತನಾಡಿದರು.

ಯಡಿಯೂರಪ್ಪ ರೈತಪರ ಕಾರ್ಯ ಕೈಗೊಂಡು ರೈತಸ್ನೇಹಿ ಎಂದು ನಿರೂಪಿಸಿ ದ್ದಾರೆ. ಯಡಿಯೂರಪ್ಪ ಅವರನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತಂದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.