Independence Day; ವೈವಿಧ್ಯದ ದೇಶಕ್ಕೆ ಏಕ ಸಂಸ್ಕೃತಿ ಸೂಕ್ತವಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌


Team Udayavani, Aug 16, 2024, 12:18 AM IST

Independence Day; ವೈವಿಧ್ಯದ ದೇಶಕ್ಕೆ ಏಕ ಸಂಸ್ಕೃತಿ ಸೂಕ್ತವಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಕೇಂದ್ರ ಸರಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಸಾಕಷ್ಟು ಗೊಂದಲಗಳಿಗೆ ಕಾರಣವಾಗಿದೆ. ಅದನ್ನು ಬದಲಾ ಯಿಸುವುದರೊಂದಿಗೆ ರಾಜ್ಯದ್ದೇ ಪ್ರತ್ಯೇಕ ಶಿಕ್ಷಣ ನೀತಿ ತರಲು ಸಮಿತಿ ರಚಿಸಲಾಗಿದೆ. ಸಮಿತಿಯ ಮಧ್ಯಾಂತರ ವರದಿ ಪ್ರಕಾರ ಈಗಾಗಲೇ ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಹುಧರ್ಮ, ಬಹುಸಂಸ್ಕೃತಿ, ಬಹುಭಾಷೆ ಇರುವ ದೇಶಕ್ಕೆ ಏಕ ಸಂಸ್ಕೃತಿ ಯಾವತ್ತೂ ಹೊಂದುವುದಿಲ್ಲ. ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ, ವಾಸ್ತವಾಂಶಗಳನ್ನು ಒಳಗೊಂಡ ಶಿಕ್ಷಣ ನೀತಿಯ ಅಗತ್ಯ ಇದೆ. ಅದೇ ಪ್ರಯತ್ನವನ್ನು ರಾಜ್ಯ ಸರಕಾರ ಮಾಡಲು ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಅಜ್ಜರಕಾಡು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಜರಗಿದ 78ನೇ ಸ್ವಾತಂತ್ರ್ಯೋತ್ಸವದಲ್ಲಿ ಸಂದೇಶ ನೀಡಿದ ಅವರು, ಪರಸ್ಪರ ನಂಬಿಕೆ, ಸಹಕಾರ ಮತ್ತು ಸಹಬಾಳ್ವೆಯ ಬಲದ ಮೇಲೆ ಭಾರತಕ್ಕೆ ಭರವಸೆಯ ಭವಿಷ್ಯವನ್ನು ನಿರ್ಮಿಸಬಹುದು. ಒಗ್ಗಟ್ಟಿನ ಬಲಿಷ್ಠ, ಸಮೃದ್ಧ ಮತ್ತು ಕಾಳಜಿಯುಳ್ಳ ಭಾರತವನ್ನು ನಿರ್ಮಿಸಲು ಸಂಕಲ್ಪ ಮಾಡೋಣ. ಯುವಕರಿಗೆ ವಿಜ್ಞಾನ, ತಂತ್ರಜ್ಞಾನ ಹಾಗೂ ಇತರ ಹೊಸ ವಿಭಾಗಗಳಲ್ಲಿ ಸರಿಯಾದ ಮಾರ್ಗದರ್ಶನ ನೀಡುವ ಕಾರ್ಯ ಆಗಬೇಕು ಎಂದರು.

ಮನೆ ಮನೆಯಲ್ಲಿ ತಪಾಸಣೆ
ಮನೆಯ ಬಾಗಿಲಲ್ಲೇ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ಔಷಧಗಳನ್ನು ಒದಗಿಸುವ “ಗೃಹ ಆರೋಗ್ಯ ಯೋಜನೆ’ಯನ್ನು ಮುಂದಿನ ತಿಂಗಳಿನಿಂದ ಜಾರಿ ಮಾಡಲಾಗುತ್ತಿದೆ. ಈ ಯೋಜನೆಯಡಿ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರಿಗೆ 3 ತಿಂಗಳಿಗೆ ಆಗುವಷ್ಟು ಮಾತ್ರೆಗಳನ್ನು ಮನೆಗಳಿಗೆ ನೇರವಾಗಿ ಒದಗಿಸಲಾಗುವುದು ಎಂದರು.

ಕಾನೂನು ಸುವ್ಯವಸ್ಥೆಗೆ ಕ್ರಮ
ಜಿಲ್ಲೆಯ ಕಾನೂನು ಹಾಗೂ ಸುವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದ್ದು, ಅಪರಾಧಿ ಪ್ರಕರಣ ನಿಯಂತ್ರಣಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರವಾಸೋದ್ಯಮ ಹಾಗೂ ಹೂಡಿಕೆದಾರ ಪ್ರೋತ್ಸಾಹಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಶುದ್ಧ ಕುಡಿಯುವ ನೀರು
ಜಿಲ್ಲೆಯ ಎಲ್ಲ ಗ್ರಾ.ಪಂ.ಗಳ 3,402 ಗ್ರಾಮಗಳ ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಜಲಜೀವನ್‌ ಮಿಷನ್‌ ಯೋಜನೆಯಡಿ 734.02 ಕೋಟಿ ರೂ.ಗಳಲ್ಲಿ 525 ಕಾಮಗಾರಿ ಕೈಗೊಂಡು ಪ್ರಸ್ತುತ 437 ಕಾಮಗಾರಿಗಳನ್ನು ಪೂರ್ಣಗೊಳಿಸಿದೆ ಎಂದು ಸಚಿವರು ತಿಳಿಸಿದರು.

ಶಾಸಕ ಯಶ್‌ಪಾಲ್‌ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ, ಎಸ್‌ಪಿ ಡಾ| ಕೆ.ಅರುಣ್‌, ಜಿ.ಪಂ. ಸಿಇಒ ಪ್ರತೀಕ್‌ ಬಾಯಲ್‌, ಅಪರ ಜಿಲ್ಲಾಧಿಕಾರಿ ಮಮತಾದೇವಿ, ಕರಾವಳಿ ಕಾವಲು ಪಡೆಯ ಪೊಲೀಸ್‌ ಎಸ್‌ಪಿ ಮಿಥುನ್‌ ಎಚ್‌.ಎನ್‌. ಉಪಸ್ಥಿತರಿದ್ದರು.

ಗ್ಯಾರಂಟಿಯಿಂದ 1.2 ಕೋಟಿ ಜನರ ಬಡತನ ದೂರ
ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 1.39 ಕೋಟಿ ಮಹಿಳಾ ಪ್ರಯಾಣಿಕರು ಜಿಲ್ಲೆಯಲ್ಲಿ ಪ್ರಯೋಜನ ಪಡೆದಿದ್ದಾರೆ. ಅನ್ನಭಾಗ್ಯ ಯೋಜನೆಯಡಿ 7,75,830, ಗೃಹಜ್ಯೋತಿಯಡಿ 3.20 ಲಕ್ಷ ಮಂದಿ, ಗೃಹ ಲಕ್ಷ್ಮೀಯಡಿ 2.20 ಲಕ್ಷಕ್ಕೂ ಅಧಿಕ ಮಹಿಳೆಯರು ಗ್ಯಾರಂಟಿ ಲಾಭ ಪಡೆದಿದ್ದಾರೆ. ಜಿಲ್ಲೆಯ 2,028 ಯುವ ಪದವೀಧರರು ಯುವನಿಧಿ ಲಾಭ ಪಡೆಯುತ್ತಿದ್ದಾರೆ. ಗ್ಯಾರಂಟಿ ಯೋಜನೆಯಿಂದ ರಾಜ್ಯದ 1.2 ಕೋಟಿ ಜನ ಬಡತನ ರೇಖೆಗಿಂತ ಮೇಲಕ್ಕೆ ಬಂದಿದ್ದಾರೆ ಎಂದು ಸಚಿವರು ಹೇಳಿದರು.

 

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

HDK

Nagamangala Riots: ಗಲಭೆಗೆ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯೇ ಕಾರಣ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

ಅರ್ಧ ತಡೆಗೋಡೆ ಇಲ್ಲದೆ ಸೇತುವೆ ಅಪಾಯಕಾರಿ

Malpe: ಅರ್ಧ ತಡೆಗೋಡೆ ಇಲ್ಲದೆ ಸೇತುವೆ ಅಪಾಯಕಾರಿ

Udupi; ನನೆಗುದಿಗೆ ಬಿದ್ದ ಸ್ಮಾರ್ಟ್‌ ಟ್ರಾಫಿಕ್‌ ಸಿಗ್ನಲ್‌ ಯೋಜನೆ

Udupi; ನನೆಗುದಿಗೆ ಬಿದ್ದ ಸ್ಮಾರ್ಟ್‌ ಟ್ರಾಫಿಕ್‌ ಸಿಗ್ನಲ್‌ ಯೋಜನೆ

Udupi; ಶಿಕ್ಷಕಿ, ನಿಟ್ಟೂರು ನಿವಾಸಿ ರೋಸಿ ಫಿಲೋಮಿನಾ ಪಿಂಟೋ

Udupi; ಶಿಕ್ಷಕಿ, ನಿಟ್ಟೂರು ನಿವಾಸಿ ರೋಸಿ ಫಿಲೋಮಿನಾ ಪಿಂಟೋ ನಿಧನ

ಜನೌಷಧ ಕೇಂದ್ರದಲ್ಲಿ ಸಿಗುತ್ತಿಲ್ಲ ಅಗತ್ಯ ಔಷಧ!

Medicine ಜನೌಷಧ ಕೇಂದ್ರದಲ್ಲಿ ಸಿಗುತ್ತಿಲ್ಲ ಅಗತ್ಯ ಔಷಧ!

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-baghi

Hombale Films ಬಹು ನಿರೀಕ್ಷಿತ ಬಘೀರ ಚಿತ್ರದ ರಿಲೀಸ್ ಡೇಟ್ ಘೋಷಣೆ

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Ronny actress Samikshaa

Ronny ಗೆಲ್ಲುವ ಸಿನಿಮಾ: ನಟಿ ಸಮೀಕ್ಷಾ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.