Inna: ವಿರೋಧದ ನಡುವೆಯೂ ಕೃಷಿ ಜಮೀನಿನಲ್ಲಿ ಟವರ್‌ ನಿರ್ಮಾಣ ಆರಂಭ


Team Udayavani, Jun 5, 2024, 11:07 PM IST

Inna: ವಿರೋಧದ ನಡುವೆಯೂ ಕೃಷಿ ಜಮೀನಿನಲ್ಲಿ ಟವರ್‌ ನಿರ್ಮಾಣ ಆರಂಭ

ಬೆಳ್ಮಣ್‌: ಉಡುಪಿಯ ನಂದಿಕೂರಿನಿಂದ ಕೇರಳದ ಕಾಸರ ಗೋಡಿಗೆ ವಿದ್ಯುತ್‌ ಸರಬರಾಜಿಗಾಗಿ ಇನ್ನಾದ ಕೃಷಿ ಜಮೀನಿನಲ್ಲಿ ಟವರ್‌ ನಿರ್ಮಾಣಕ್ಕೆ ಗ್ರಾಮಸ್ಥರ ವಿರೋಧದ ನಡುವೆಯೂ ಬುಧವಾರ ಬಿಗಿ ಪೊಲೀಸ್‌ ಕಾವಲಿನೊಂದಿಗೆ ಕಾಮಗಾರಿ ಪ್ರಾರಂಭಗೊಂಡಿದೆ.

ಕಳೆದ ವಾರ ಉಕ್ಕುಡದ ಖಾಸಗಿ ಜಾಗದಲ್ಲಿ ಕೃಷಿ ಜಮೀನಿನ ಮಾಲಕರಿಗೆ ಯಾವುದೇ ನೀಡದೆ ನೋಟಿಸ್‌ ಜೆಸಿಬಿ ತಂದು ಟವರ್‌ ನಿರ್ಮಾಣಕ್ಕೆ ಮುಂದಾದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಬಳಿಕ ಕಾಮಗಾರಿ ಸ್ಥಗಿತವಾಗಿತ್ತು.

ಇದೇ ವೇಳೆ ವಿದ್ಯುತ್‌ ಟವರ್‌ನಿಂದಾಗಿ ನಮ್ಮ ಕೃಷಿಭೂಮಿಗೆ ತೊಂದರೆ ಯಾಗುತ್ತದೆ ಎಂದು ಆಕ್ಷೇಪಿಸಿದ ತನ್ನನ್ನು ಕಾಮಗಾರಿ ನಡೆಸುವ ಕಂಪೆನಿ ಯವರು ತಳ್ಳಿದ್ದಾರೆಂದು ವಯೋವೃದ್ಧ ರೋರ್ವರು ಆರೋಪಿಸಿದ್ದಾರೆ.

ಮುಂದಿನ ನಡೆ ಏನು?
ಟವರ್‌ನ ಸುತ್ತಮುತ್ತ ಬಹು ಮೀಟರ್‌ ವ್ಯಾಪ್ತಿಯಲ್ಲಿ ಯಾವುದೇ ಕೃಷಿ ಚಟುವಟಿಕೆ, ಕಟ್ಟಡ ನಿರ್ಮಾಣವನ್ನು ನಿಷೇಧಿಸಿರುವುದರಿಂದ ಟವರ್‌ ನಿರ್ಮಾಣವಾಗುವ ಜಮೀನು ಮಾಲಕರಿಗೆ ಮಾತ್ರವಲ್ಲದೆ ತಂತಿ ಹಾದು ಹೋಗುವ ಪ್ರದೇಶದಲ್ಲಿನ 250ಕ್ಕೂ ಅಧಿಕ ಕುಟುಂಬಗಳಿಗೆ ತೊಂದರೆಯಾಗಲಿದೆ. ಕೃಷಿ ಜಮೀನನ್ನು ತಪ್ಪಿಸಿ ಟವರ್‌ ನಿರ್ಮಿಸಿ ಎಂದು ಹಲವು ಬಾರಿ ಬೇಡಿಕೆ ಇಟ್ಟಿದ್ದರೂ ಸ್ಪಂದಿಸದೆ ಇರುವುದು ಅಮಾನವೀಯ. ಇದರ ವಿರುದ್ಧ ಜನರು ಕೋರ್ಟ್‌ ಮೆಟ್ಟಿಲೇರುವ ಚಿಂತನೆ ನಡೆಸಿದ್ದಾರೆಂದು ಜಿ.ಪಂ. ಮಾಜಿ ಸದಸ್ಯೆ ರೇಷ್ಮಾ ಉದಯ ಶೆಟ್ಟಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪರಿಸರದ ಉಳಿವು, ಕೃಷಿಯ ಮಹತ್ವ ಅರಿತು ಅವುಗಳಿಗೆ ಹಾನಿಯಾಗದಂತೆ ಕಾಮ ಗಾರಿ ನಡೆಸಬೇಕು. ಹಾಗೆ ಮಾಡದೇ ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಆದೇಶ ಹೊರಡಿಸುವವರ ವಿರುದ್ಧವೇ ಹೋರಾಟ ಅನಿವಾರ್ಯ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

8 ಕಡೆ ಟವರ್‌ ನಿರ್ಮಾಣ
ಇನ್ನಾ ಗ್ರಾಮದ 8 ಕಡೆಗಳಲ್ಲಿ ಟವರ್‌ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ. ಕೆಲವು ಸರಕಾರಿ ಜಾಗದಲ್ಲಿ ಇನ್ನೂ ಕೆಲವು ಖಾಸಗಿ ಜಾಗದಲ್ಲಿ ನಿರ್ಮಾಣವಾಗಲಿವೆ. ಖಾಸಗಿ ಜಾಗದ ಮಾಲಕರಿಗೆ ಅಷ್ಟು ಜಾಗಕ್ಕೆ ಪರಿಹಾರ ದೊರೆಯಲಿದೆ.

ಕಾರ್ಕಳ ತಹಶೀಲ್ದಾರ್‌ ನರಸಪ್ಪ, ಜಿ.ಪಂ. ನಿಕಟಪೂರ್ವ ಸದಸ್ಯೆ ರೇಷ್ಮಾ ಉದಯ ಶೆಟ್ಟಿ, ಇನ್ನಾ ಗ್ರಾ.ಪಂ ಸದಸ್ಯ ದೀಪಕ್‌ ಕೋಟ್ಯಾನ್‌, ಪ್ರವೀಣ್‌ ಶೆಟ್ಟಿ, ಗ್ರಾಮಸ್ಥರಾದ ಅಮರನಾಥ್‌ ಶೆಟ್ಟಿ, ಗ್ರಾ.ಪಂ. ಸದಸ್ಯ ಚಂದ್ರಹಾಸ ಶೆಟ್ಟಿ ಸ್ಥಳದಲ್ಲಿದ್ದರು.

ಜಿಲ್ಲಾಧಿಕಾರಿಗಳ ಆದೇಶದಂತೆ ಕಾನೂನಾತ್ಮಕವಾಗಿ ಸಂಬಂಧಪಟ್ಟವರಿಗೆ ನೋಟಿಸ್‌ ನೀಡಿ ಬುಧವಾರ ಟವರ್‌ ನಿರ್ಮಾಣ ಕಾಮಗಾರಿ ಪ್ರಾರಂಭಿಸಲಾಗಿದೆ.
– ನರಸಪ್ಪ, ಕಾರ್ಕಳ ತಹಶೀಲ್ದಾರ್‌

ಟಾಪ್ ನ್ಯೂಸ್

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

1-crick

India vs England ಸೆಮಿ ಪಂದ್ಯ; ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆಂಗ್ಲರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್

Udupi: ವಿಮಾ ಕಂಪೆನಿ ವಿರುದ್ಧ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗ ತೀರ್ಪು 

Nejar Case: Accused Praveen Chowgule’s bail application dismissed by High Court

Nejar Case: ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್

ಖರ್ದುಂಗ್ಲಾದಲ್ಲಿ ಕನ್ನಡ ಬಾವುಟ ಹಾರಿಸಿದ ಶಿರ್ವದ ಅಪ್ಪ -ಮಗ

Khardung La; 17,982 ಅಡಿ ಎತ್ತರದಲ್ಲಿ ಕನ್ನಡ ಬಾವುಟ ಹಾರಿಸಿದ ಶಿರ್ವದ ಅಪ್ಪ -ಮಗ

Udupi; ಬಸ್ ಗೆ ಡಿಕ್ಕಿ ಹೊಡೆದ ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು

Udupi; ಬಸ್ ಗೆ ಡಿಕ್ಕಿ ಹೊಡೆದ ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-asss

R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

31

Kiran Pahal: ವನಿತೆಯರ 400 ಮೀ.; ಕಿರಣ್‌ ಪಹಲ್‌ ಒಲಿಂಪಿಕ್ಸ್‌ ಗೆ ಅರ್ಹತೆ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.