![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 3, 2023, 10:24 PM IST
ಪಡುಬಿದ್ರಿ: ಇನ್ನಾ ಗ್ರಾಮದ ಮಠದಕೆರೆ ರಾಧು ಅವರ ಮನೆಯ ಬೀಗ ಮುರಿದ ಕಳ್ಳರು ನಗ – ನಗದು ದೋಚಿ ಪರಾರಿಯಾದ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ರಾಧು ಅವರು ಅ. 31ರಂದು ಮನೆಗೆ ಬೀಗ ಹಾಕಿ ಬೋಳದಲ್ಲಿರುವ ಮಗಳ ಮನೆಗೆ ತೆರಳಿದ್ದು, ಅವರ ಮಗ ಕುಶ ಆರ್. ಅವರು ನ. 2ರಂದು ಮನೆಗೆ ಭೇಟಿ ನೀಡಿ ತೋಟ ನೋಡಿ ಹೋಗಿದ್ದರು. ಗುರುವಾರ ಮನೆಗೆ ಬಂದಾಗ ಮನೆಯ ಬೀಗ ಮುರಿದು ಕಳವು ನಡೆದಿರುವ ವಿಚಾರ ಗಮನಕ್ಕೆ ಬಂದಿತ್ತು.
ಮನೆಯೊಳಗಿನ ಕೋಣೆಯಲ್ಲಿದ್ದ ಕಪಾಟಿನ ಬಾಗಿಲು ಜಾಲಾಡಿ ಅದರಲ್ಲಿದ್ದ ನಗದು ಹಾಗೂ ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.